ಉಡುಪಿ: ಇಂದ್ರಾಳಿಯಲ್ಲಿರುವ ಹಿಂದೂ ರುದ್ರಭೂಮಿ ನವೀಕರಣಕ್ಕೆ ನಗರಸಭೆಯ 2021-22ನೇ ಸಾಲಿನ 15ನೇ ಹಣಕಾಸು ಯೋಜನೆಯಡಿ ₹ 50 ಲಕ್ಷ ಹಾಗೂ ನಗರಸಭಾ ನಿಧಿಯಿಂದ 10 ಲಕ್ಷ ಅನುದಾನದಲ್ಲಿ ಕಾಮಗಾರಿ ಪೂರ್ಣಗೊಂಡಿದ್ದು ಸೋಮವಾರ ಶಾಸಕ ಕೆ.ರಘುಪತಿ ಭಟ್ ನವೀಕೃತ ಇಂದ್ರಾಳಿ ಹಿಂದೂ ರುದ್ರ ಭೂಮಿಯ ಉದ್ಘಾಟಿಸಿದರು.
ಈ ಸಂದರ್ಭ ಉಡುಪಿ ನಗರ ಸಭೆಯ ಅಧ್ಯಕ್ಷೆ ಸುಮಿತ್ರಾ ಆರ್.ನಾಯಕ್, ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ ಕೊಳ, ಸ್ಥಾಯಿ ಸಮಿತಿ ಅಧ್ಯಕ್ಷ ಶ್ರೀಶ ಕೊಡವೂರು, ಸ್ಥಳೀಯ ನಗರಸಭಾ ಸದಸ್ಯ ಅಶೋಕ್ ನಾಯ್ಕ್ ಇದ್ದರು.