ಘಟನೆಯ ವಿವರ:ಎಸ್ಡಿಎಂಸಿ ಅಧ್ಯಕ್ಷ ಮೋಹನಚಂದ್ರ ಹಲ್ಲೆ ನಡೆಸಿದ ವಿಚಾರವನ್ನು ಶಿಕ್ಷಕಿ ಈಚೆಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರ ಗಮನಕ್ಕೆ ತಂದಿದ್ದರು. ಕೂಡಲೇ ಸ್ಪಂದಿಸಿದ ಸಚಿವರು ಹಲ್ಲೆಮಾಡಿದ ವ್ಯಕ್ತಿಯನ್ನು ವಜಾಗೊಳಿಸಿ, ಕಠಿಣ ಕಾನೂನು ಕ್ರಮ ಜರುಗಿಸುವಂತೆ ಶಿಕ್ಷಣ ಇಲಾಖೆ ಆಯುಕ್ತರಿಗೆ ಹಾಗೂ ಎಸ್ಪಿ ಅವರಿಗೆ ಸೂಚನೆ ನೀಡಿದ್ದರು.