ಉಡುಪಿ: ಮಲ್ಪೆ ಬೀಚ್ನಲ್ಲಿ ನೀರಿನ ಸೆಳೆತಕ್ಕೆ ಸಿಲುಕಿ ಮುಳುಗುವ ಸ್ಥಿತಿಯಲ್ಲಿದ್ದ ನಾಲ್ವರು ಪ್ರವಾಸಿಗರನ್ನು ಗುರುವಾರ ಲೈಫ್ ಗಾರ್ಡ್ಸ್ ರಕ್ಷಣೆ ಮಾಡಿದ್ದಾರೆ.
ಕಲಬುರ್ಗಿಯ ಅನಿಲ್ ಕುಮಾರ್ (21), ಅಬ್ಬಾಸ್ ಅಲಿ (19), ಅನಿಲ್ ಕುಮಾರ್ (21) ಹಾಗೂ ಮಂಡ್ಯ ಜಿಲ್ಲೆಯ ನೆರೆಕೆರೆಯ ನಿತಿನ್ (18) ಪ್ರಾಣಾಪಾಯದಿಂದ ಪಾರಾದವರು.
ಮಳೆಗಾಲದಲ್ಲಿ ಸಮುದ್ರ ಪ್ರಕ್ಷುಬ್ಧಗೊಂಡು ಅಲೆಗಳ ಉಬ್ಬರ ಹೆಚ್ಚಾಗಿರುತ್ತದೆ. ಹೆಚ್ಚು ಆಳಕ್ಕೆ ಇಳಿಯದಂತೆ ಲೈಫ್ಗಾರ್ಡ್ಸ್ ಸೂಚನೆ ನೀಡಿದರೂ ನಿರ್ಲಕ್ಷ್ಯದಿಂದ ಪ್ರವಾಸಿಗರು ಪ್ರಾಣಕ್ಕೆ ಕುತ್ತು ತಂದುಕೊಳ್ಳುತ್ತಿದ್ದಾರೆ. ಕೆಲವು ದಿನಗಳ ಹಿಂದಷ್ಟೆ ಶಿವಮೊಗ್ಗ ಜಿಲ್ಲೆಯ ಮೂವರು ವಿದ್ಯಾರ್ಥಿಗಳನ್ನು ರಕ್ಷಣೆ ಮಾಡಲಾಗಿತ್ತು ಎಂದು ಬೀಚ್ ಸಿಬ್ಬಂದಿ ಹೇಳಿದರು.