<p><strong>ಪಡುಬಿದ್ರಿ:</strong> ಬೆಳಪುವಿನಲ್ಲಿ ನಿರ್ಮಾಣ ಹಂತದಲ್ಲಿರುವ ಮಂಗಳೂರು ವಿಶ್ವವಿದ್ಯಾಲಯದ ಅತ್ಯಾಧುನಿಕ ಸಂಶೋಧನಾ ಕೇಂದ್ರದ ಅನುದಾನ ಪರಿವರ್ತಿಸಿ, ದುರ್ಬಳಕೆ ಮಾಡಿಕೊಂಡಿರುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ. </p>.<p>10 ವರ್ಷಗಳ ಹಿಂದೆ ರಾಜ್ಯ ಸರ್ಕಾರದಿಂದ ಮಂಜೂರುಗೊಂಡ ಮಂಗಳೂರು ವಿವಿಯ ವಿಜ್ಞಾನ ಸಂಶೋಧನಾ ಕೇಂದ್ರ ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಕಟ್ಟಡ ಕಾಮಗಾರಿ ಅರ್ಧದಲ್ಲಿ ಸ್ಥಗಿತಗೊಂಡಿದೆ. </p>.<p>ಬೆಳಪು ಗ್ರಾಮ ಪಂಚಾಯಿತಿ ಈ ಹಿಂದೆ ಕೊಜೆಂಟ್ರಿಕ್ ಯೋಜನೆಯ ಪುನರ್ ವಸತಿ ಕಾಲೊನಿಗೆ ಭೂಂಇ ನೀಡಿತ್ತು. ಯೋಜನೆ ಹಿಂದೆ ಸರಿದ ಬಳಿಕ ಕೊಜೆಂಟ್ರಿಕ್ಸ್ ಅಧೀನದಲ್ಲಿದ್ದ ಭೂಮಿಯನ್ನು ಕಾನೂನು ಹೋರಾಟದ ಮೂಲಕ ವಾಪಸ್ ಪಡೆದು, 24.26 ಎಕರೆ ಭೂಮಿಯನ್ನು ಈ ಕೇಂದ್ರಕ್ಕೆ ಮೀಸಲಿಡಲಾಗಿತ್ತು. </p>.<p>2013ರಲ್ಲಿ ಮಂಜೂರಾಗಿದ್ದ ಯೋಜನೆಗೆ 2014ರ ಮೇ 4ರಂದು ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಪುವಿನಲ್ಲಿ ಶಿಲಾನ್ಯಾಸ ನೆರವೇರಿಸಿದ್ದರು. ಕರ್ನಾಟಕ ಗೃಹ ಮಂಡಳಿಯ ಉಸ್ತುವಾರಿಯಲ್ಲಿ ದೇವಿಪ್ರಸಾದ್ ಕನ್ಕ್ಷನ್ಸ್ ಪ್ರೈ. ಲಿ. ಕಂಪನಿಗೆ ಕಾಮಗಾರಿಯ ಗುತ್ತಿಗೆ ವಹಿಸಿ ಕೊಡಲಾಗಿತ್ತು.</p>.<p>ಮೊದಲ ಹಂತದಲ್ಲಿ ₹ 40 ಕೋಟಿ ಅನುದಾನ ಹಾಗೂ ಬಳಿಕ ₹9 ಕೋಟಿ ಬಿಡುಗಡೆಯಾಗಿದ್ದು, ₹9 ಕೋಟಿ ಅನುದಾನದ ಕಾಮಗಾರಿ ನಡೆದಿಲ್ಲ ಎನ್ನುತ್ತಾರೆ ಬೆಳಪು ಗ್ರಾಮ ಪಂಚಾಯಿತಿ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ.</p>.<p>‘ಕಟ್ಟಡ ಪಾಳು ಬಿದ್ದಿದ್ದು, ಅನೈತಿಕ ಚಟುವಟಿಕೆಗೆ ತಾಣವಾಗಿದೆ. ಕಬ್ಬಿಣದ ಸಲಕರಣೆಗಳು ತುಕ್ಕು ಹಿಡಿಯುತ್ತಿವೆ. ಕಾವಲುಗಾರ ಸಹ ಇಲ್ಲ’ ಎನ್ನುತ್ತಾರೆ ಗ್ರಾಮಸ್ಥರು.</p>.<p>‘10 ವರ್ಷ ಕಳೆದರೂ ಕಟ್ಟಡ ಪೂರ್ಣಗೊಂಡಿಲ್ಲ. ಹಣ ದುರುಪಯೋಗ ಆಗಿದೆ. ಈ ಬಗ್ಗೆ ತನಿಖೆ ನಡೆಸಿ, ಕಾಮಗಾರಿ ಪ್ರಾರಂಭಿಸದಿದ್ದರೆ, ವಿವಿ ಎದುರು ಪ್ರತಿಭಟನೆ ನಡೆಸಲಾಗುವುದು’ ಎಂದು ದೇವಿಪ್ರಸಾದ್ ಶೆಟ್ಟಿ ಈಚೆಗೆ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದರು. </p>.<p><strong>ಕಟ್ಟಡದಲ್ಲಿ ಏನೆಲ್ಲ ಇವೆ</strong> </p><p>ಸಂಶೋಧನಾ ಕೇಂದ್ರವು ಆಡಳಿತ ಸೌಧ ಅತಿಥಿಗೃಹ ಅಧಿಕಾರಿಗಳ ವಸತಿ ಗೃಹ ಬೋಧಕೇತರ ಸಿಬ್ಬಂದಿ ವಸತಿಗೃಹ ವಿಜ್ಞಾನ ಸಂಕೀರ್ಣ ಕಟ್ಟಡ ಸಂಶೋಧನಾ ಕೇಂದ್ರ ಕಟ್ಟಡ ನಿರ್ದೇಶಕರ ಕೊಠಡಿ ಉಪಾಹಾರ ಗೃಹ ಅಟೆಂಡರ್ ಬ್ಲಾಕ್ ಒಳಗೊಂಡಿದೆ.</p>.<div><blockquote>ಸಂಶೋಧನಾ ಕೇಂದ್ರಕ್ಕೆ ಮಂಜೂರು ಆಗಿದ್ದ ಹಣ ಬೇರೆಡೆ ಬಳಕೆಯಾಗಿರುವ ಬಗ್ಗೆ ತನಿಖೆ ನಡೆಸಲು ಆಂತರಿಕ ತನಿಖಾ ಸಮಿತಿ ರಚಿಸಲಾಗಿದ್ದು ಸಮಿತಿ ವರದಿ ಆಧರಿಸಿ ಮುಂದಿನ ಕ್ರಮ ವಹಿಸಲಾಗುವುದು. </blockquote><span class="attribution">-ಪ್ರೊ.ಪಿ.ಎಲ್. ಧರ್ಮ ವಿವಿ ಕುಲಪತಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಡುಬಿದ್ರಿ:</strong> ಬೆಳಪುವಿನಲ್ಲಿ ನಿರ್ಮಾಣ ಹಂತದಲ್ಲಿರುವ ಮಂಗಳೂರು ವಿಶ್ವವಿದ್ಯಾಲಯದ ಅತ್ಯಾಧುನಿಕ ಸಂಶೋಧನಾ ಕೇಂದ್ರದ ಅನುದಾನ ಪರಿವರ್ತಿಸಿ, ದುರ್ಬಳಕೆ ಮಾಡಿಕೊಂಡಿರುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ. </p>.<p>10 ವರ್ಷಗಳ ಹಿಂದೆ ರಾಜ್ಯ ಸರ್ಕಾರದಿಂದ ಮಂಜೂರುಗೊಂಡ ಮಂಗಳೂರು ವಿವಿಯ ವಿಜ್ಞಾನ ಸಂಶೋಧನಾ ಕೇಂದ್ರ ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಕಟ್ಟಡ ಕಾಮಗಾರಿ ಅರ್ಧದಲ್ಲಿ ಸ್ಥಗಿತಗೊಂಡಿದೆ. </p>.<p>ಬೆಳಪು ಗ್ರಾಮ ಪಂಚಾಯಿತಿ ಈ ಹಿಂದೆ ಕೊಜೆಂಟ್ರಿಕ್ ಯೋಜನೆಯ ಪುನರ್ ವಸತಿ ಕಾಲೊನಿಗೆ ಭೂಂಇ ನೀಡಿತ್ತು. ಯೋಜನೆ ಹಿಂದೆ ಸರಿದ ಬಳಿಕ ಕೊಜೆಂಟ್ರಿಕ್ಸ್ ಅಧೀನದಲ್ಲಿದ್ದ ಭೂಮಿಯನ್ನು ಕಾನೂನು ಹೋರಾಟದ ಮೂಲಕ ವಾಪಸ್ ಪಡೆದು, 24.26 ಎಕರೆ ಭೂಮಿಯನ್ನು ಈ ಕೇಂದ್ರಕ್ಕೆ ಮೀಸಲಿಡಲಾಗಿತ್ತು. </p>.<p>2013ರಲ್ಲಿ ಮಂಜೂರಾಗಿದ್ದ ಯೋಜನೆಗೆ 2014ರ ಮೇ 4ರಂದು ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಪುವಿನಲ್ಲಿ ಶಿಲಾನ್ಯಾಸ ನೆರವೇರಿಸಿದ್ದರು. ಕರ್ನಾಟಕ ಗೃಹ ಮಂಡಳಿಯ ಉಸ್ತುವಾರಿಯಲ್ಲಿ ದೇವಿಪ್ರಸಾದ್ ಕನ್ಕ್ಷನ್ಸ್ ಪ್ರೈ. ಲಿ. ಕಂಪನಿಗೆ ಕಾಮಗಾರಿಯ ಗುತ್ತಿಗೆ ವಹಿಸಿ ಕೊಡಲಾಗಿತ್ತು.</p>.<p>ಮೊದಲ ಹಂತದಲ್ಲಿ ₹ 40 ಕೋಟಿ ಅನುದಾನ ಹಾಗೂ ಬಳಿಕ ₹9 ಕೋಟಿ ಬಿಡುಗಡೆಯಾಗಿದ್ದು, ₹9 ಕೋಟಿ ಅನುದಾನದ ಕಾಮಗಾರಿ ನಡೆದಿಲ್ಲ ಎನ್ನುತ್ತಾರೆ ಬೆಳಪು ಗ್ರಾಮ ಪಂಚಾಯಿತಿ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ.</p>.<p>‘ಕಟ್ಟಡ ಪಾಳು ಬಿದ್ದಿದ್ದು, ಅನೈತಿಕ ಚಟುವಟಿಕೆಗೆ ತಾಣವಾಗಿದೆ. ಕಬ್ಬಿಣದ ಸಲಕರಣೆಗಳು ತುಕ್ಕು ಹಿಡಿಯುತ್ತಿವೆ. ಕಾವಲುಗಾರ ಸಹ ಇಲ್ಲ’ ಎನ್ನುತ್ತಾರೆ ಗ್ರಾಮಸ್ಥರು.</p>.<p>‘10 ವರ್ಷ ಕಳೆದರೂ ಕಟ್ಟಡ ಪೂರ್ಣಗೊಂಡಿಲ್ಲ. ಹಣ ದುರುಪಯೋಗ ಆಗಿದೆ. ಈ ಬಗ್ಗೆ ತನಿಖೆ ನಡೆಸಿ, ಕಾಮಗಾರಿ ಪ್ರಾರಂಭಿಸದಿದ್ದರೆ, ವಿವಿ ಎದುರು ಪ್ರತಿಭಟನೆ ನಡೆಸಲಾಗುವುದು’ ಎಂದು ದೇವಿಪ್ರಸಾದ್ ಶೆಟ್ಟಿ ಈಚೆಗೆ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದರು. </p>.<p><strong>ಕಟ್ಟಡದಲ್ಲಿ ಏನೆಲ್ಲ ಇವೆ</strong> </p><p>ಸಂಶೋಧನಾ ಕೇಂದ್ರವು ಆಡಳಿತ ಸೌಧ ಅತಿಥಿಗೃಹ ಅಧಿಕಾರಿಗಳ ವಸತಿ ಗೃಹ ಬೋಧಕೇತರ ಸಿಬ್ಬಂದಿ ವಸತಿಗೃಹ ವಿಜ್ಞಾನ ಸಂಕೀರ್ಣ ಕಟ್ಟಡ ಸಂಶೋಧನಾ ಕೇಂದ್ರ ಕಟ್ಟಡ ನಿರ್ದೇಶಕರ ಕೊಠಡಿ ಉಪಾಹಾರ ಗೃಹ ಅಟೆಂಡರ್ ಬ್ಲಾಕ್ ಒಳಗೊಂಡಿದೆ.</p>.<div><blockquote>ಸಂಶೋಧನಾ ಕೇಂದ್ರಕ್ಕೆ ಮಂಜೂರು ಆಗಿದ್ದ ಹಣ ಬೇರೆಡೆ ಬಳಕೆಯಾಗಿರುವ ಬಗ್ಗೆ ತನಿಖೆ ನಡೆಸಲು ಆಂತರಿಕ ತನಿಖಾ ಸಮಿತಿ ರಚಿಸಲಾಗಿದ್ದು ಸಮಿತಿ ವರದಿ ಆಧರಿಸಿ ಮುಂದಿನ ಕ್ರಮ ವಹಿಸಲಾಗುವುದು. </blockquote><span class="attribution">-ಪ್ರೊ.ಪಿ.ಎಲ್. ಧರ್ಮ ವಿವಿ ಕುಲಪತಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>