ಉಡುಪಿ: ಜಿಲ್ಲೆಯಲ್ಲಿ ಅಗತ್ಯ ವಸ್ತುಗಳ ಖರೀದಿ ಸಮಯವನ್ನು ಬೆಳಿಗ್ಗೆ 7ರಿಂದ ರಾತ್ರಿ 7ರವರೆಗೆ ವಿಸ್ತರಿಸಲಾಗಿದೆ ಎಂದು ಶಾಸಕ ರಘುಪತಿ ಭಟ್ ಮಾಧ್ಯಮಗಳಿಗೆ ತಿಳಿಸಿದರು.
ಕೋವಿಡ್ ಸೋಂಕಿತ ಪ್ರಕರಣಗಳು ಹೆಚ್ಚಿರುವ ನೆರೆಯ ಜಿಲ್ಲೆಗಳಲ್ಲಿ ದಿನನಿತ್ಯದ ವಸ್ತುಗಳ ಖರೀದಿಗೆ ರಾತ್ರಿ 7ರವರೆಗೆ ಅವಕಾಶ ನೀಡಲಾಗಿದೆ. ಗ್ರೀನ್ ಝೋನ್ನಲ್ಲಿರುವ ಉಡುಪಿಯಲ್ಲಿ ಮಧ್ಯಾಹ್ನ 1ರವರೆಗೆ ಮಾತ್ರ ಅನುಮತಿ ನೀಡಿರುವುದು ಸರಿಯಲ್ಲ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಶಾಸಕರು ಹಾಗೂ ಜಿಲ್ಲಾಧಿಕಾರಿ ಜತೆ ಚರ್ಚಿಸಿದ್ದು ಎಲ್ಲರೂ ಸಮಯ ವಿಸ್ತರಣೆಗೆ ಒಪ್ಪಿಕೊಂಡಿದ್ದಾರೆ. ಮಂಗಳವಾರದಿಂದ ರಾತ್ರಿ 7ರವರೆಗೆ ಎಲ್ಲ ಅಗಂಡಿಗಳು ತೆರೆದಿರಲಿವೆ. ಸಾರ್ವಜನಿಕರು ಅಂತರ ಕಾಯ್ದುಕೊಂಡು ವ್ಯವಹರಿಸಬೇಕು ಎಂದು ಶಾಸಕರು ತಿಳಿಸಿದರು.