ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕನಸು ಸಕಾರಗೊಳ್ಳಲು ಪರಿಶ್ರಮ ಅಗತ್ಯ

ಎಸ್‌ಡಿಎಂ ಕಾಲೇಜಿನ ವಾರ್ಷಿಕೋತ್ಸವದಲ್ಲಿ ನಟ, ನಿರ್ದೇಶಕ ರಿಷಬ್‌ ಶೆಟ್ಟಿ
Last Updated 1 ಫೆಬ್ರುವರಿ 2019, 14:50 IST
ಅಕ್ಷರ ಗಾತ್ರ

ಉಡುಪಿ: ಕನಸು ಕಾಣುವುದು ಮುಖ್ಯವಲ್ಲ. ಅದನ್ನು ಸಕಾರಗೊಳಿಸಲು ಪರಿಶ್ರಮದೊಂದಿಗೆ ಮುನ್ನಡೆಯಬೇಕು ಎಂದು ನಟ ಹಾಗೂ ನಿರ್ದೇಶಕ ರಿಷಬ್‌ ಶೆಟ್ಟಿ ಹೇಳಿದರು.

ಕುತ್ಪಾಡಿ ಎಸ್‌ಡಿಎಂ ಆಯುರ್ವೇದ ಕಾಲೇಜಿನ ಭಾವಪ್ರಕಾಶ ಸಭಾಂಗಣದಲ್ಲಿ ಶುಕ್ರವಾರ ನಡೆದ ಕಾಲೇಜಿನ 60ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

‘ಕುಂದಾಪುರದ ಹಳ್ಳಿಯೊಂದರಲ್ಲಿ ಬೆಳೆದ ನಾನು, ಕಲ್ಪನಾ ಲೋಕದಲ್ಲಿದ್ದೆ. ಆದರೆ, ಬೆಂಗಳೂರಿನಲ್ಲಿ ಆ ಕಲ್ಪನೆಗಳನ್ನೇ ಕನಸನ್ನಾಗಿಸಿ, ಕನಸುಗಳನ್ನೇ ಗುರಿಯಾಗಿಸಿ ಪ್ರಯತ್ನಪಟ್ಟು ಯಶಸ್ಸು ನನ್ನದಾಗಿಸಿಕೊಂಡೆ. ಹಾಗಾಗಿ, ಕನಸು ಕಾಣುವುದಕ್ಕೆ ಮಾತ್ರ ಸೀಮಿತವಾಗದೇ ಅದನ್ನು ಪರಿಶ್ರಮದೊಂದಿಗೆ ನನಸಾಗಿಸಲು ಪ್ರಯತ್ನಿಸಬೇಕು’ ಎಂದು ಸಲಹೆ ನೀಡಿದರು.

ಕಾಲೇಜಿನ ಪ್ರಾಂಶುಪಾಲ ಡಾ.ಜಿ. ಶ್ರೀನಿವಾಸ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು. ಸ್ನಾತಕೋತ್ತರ ಹಾಗೂ ಪಿಎಚ್.ಡಿ ಅಧ್ಯಯನ ಕೇಂದ್ರದ ಡೀನ್ ಡಾ.ನಿರಂಜನ್‌ ರಾವ್‌ ವಾರ್ಷಿಕ ವರದಿ ಮಂಡಿಸಿದರು. ವಿದ್ಯಾರ್ಥಿ ಸಂಘ ಅಧ್ಯಕ್ಷೆ ಆರ್‌. ಮೇಘನಾ ಸುರೇಗಾಂವಕರ್ ಸಂಘದ ವಾರ್ಷಿಕ ಕಾರ್ಯ ಚಟುವಟಿಕೆಗಳ ವರದಿ ಓದಿದರು.

ಸಹಾಯಕ ಡೀನ್‌ ಡಾ.ಎಸ್‌. ನಾಗರಾಜ್‌, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ.ಸುಚೇತ ಕುಮಾರಿ, ಸಹಾಯಕ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ.ಕೆ.ವೀರಕುಮಾರ, ವಿದ್ಯಾರ್ಥಿ ಸಂಘದ ಅಧ್ಯಕ್ಷ ಕೆ. ಪರೀಕ್ಷಿತ್‌, ಕಾರ್ಯದರ್ಶಿ ಶ್ರೀನಿಧಿ ಶೆಟ್ಟಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT