ಭಾನುವಾರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಎಸ್ಪಿ ‘ಸೆ.19ರಂದು ಬೆಳಗಿನ ಜಾವ ಮಣಿಪಾಲ ಹಾಗೂ ಉಡುಪಿ ನಗರ ಠಾಣೆ ವ್ಯಾಪ್ತಿಯಲ್ಲಿ ಇಬ್ಬರು ಸುಲಿಗೆಕೋರರು ಸಾರ್ವಜನಿಕರನ್ನು ಬೆದರಿಸಿ, ಚೂರಿ, ಸ್ಕ್ರೂಡ್ರೈವರ್ನಿಂದ ಹಲ್ಲೆ ಮಾಡಿ ಹಣ, ಮೊಬೈಲ್, ಪರ್ಸ್ ದೋಚಿ ಪರಾರಿಯಾಗಿದ್ದರು. ಈ ಸಂಬಂಧ ಮಣಿಪಾಲ ಠಾಣೆಯಲ್ಲಿ ಮೂರು, ಉಡುಪಿ ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿದ್ದವು.