<p><strong>ಬೈಂದೂರು</strong>: ‘ನಮ್ಮಲ್ಲಿನ ಕೌಶಲದ ಮೂಲಕ ಸಮುದಾಯದ ಅಭಿವೃದ್ಧಿಗೆ ಪ್ರತಿಯೊಬ್ಬರೂ ನೆರವಾಗಬಹುದಾಗಿದೆ. ಆಸಕ್ತಿ ಆಧಾರಿತ ಕಲಿಕೆಯಿಂದ ವಿವಿಧ ಕ್ಷೇತ್ರದಲ್ಲಿ ಪರಿಣತಿಯನ್ನು ಹೊಂದಲು ಸಾಧ್ಯವಿದೆ ಎಂದು ಜಿಲ್ಲಾ ಸಾಕ್ಷರತಾ ಅಧ್ಯಕ್ಷ ಶ್ರೀಕಾಂತ್ ಪ್ರಭು ಹೇಳಿದರು.</p>.<p>ರೋಟರಿ ಜಿಲ್ಲೆ 3182 ರೋಟರಿ ಕ್ಲಬ್ ಬೈಂದೂರು ಆಶ್ರಯದಲ್ಲಿ ಇಲ್ಲಿನ ರೋಟರಿ ಭವನದಲ್ಲಿ ಆಯೋಜಿಸಲಾದ ಝೋನಲ್ ಸೆಮಿನಾರ್ ಆನ್ ಲಿಟರಸಿ ‘ಜ್ಞಾನಾಂಬುಧಿ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>ರೋಟರಿ ಜಿಲ್ಲೆ 3182 ಝೋನ್ 1ರ ಅಸಿಸ್ಟೆಂಟ್ ಗವರ್ನರ್ ಉಮೇಶ್ ಪುತ್ರನ್, ಝೋನಲ್ ಟ್ರೇನರ್ ರವಿರಾಜ್ ಶೆಟ್ಟಿ, ಝೋನಲ್ ಲೆಫ್ಟಿನೆಂಟ್ಗಳಾದ ಪ್ರವೀಣ ಶೆಟ್ಟಿ, ಸಂದೀಪ್ ಕುಮಾರ್ ಶೆಟ್ಟಿ, ಪೂರ್ಣಿಮಾ ಭವಾನಿ ಶಂಕರ್, ಝೋನಲ್ ಲಿಟರಸಿ ಕೋ-ಆರ್ಡಿನೇಟರ್ ಮಂಜುನಾಥ ಶೆಟ್ಟಿ, ಜಿಲ್ಲಾ ಲಿಟರಸಿ ಸಬ್ ಕಮಿಟಿ ಉಪಾಧ್ಯಕ್ಷ ಐ. ನಾರಾಯಣ, ಬೈಂದೂರು ರೋಟರಿ ಲಿಟರೆಸಿ ಛೇರ್ಮನ್ ಸುಬ್ರಹ್ಮಣ್ಯ ಜಿ. ಮೊದಲಾದವರು ಇದ್ದರು.</p>.<p>ಬೈಂದೂರು ರೋಟರಿ ಅಧ್ಯಕ್ಷ ಎಚ್. ಉದಯ ಆಚಾರ್ ಸ್ವಾಗತಿಸಿದರು. ಅಸಿಸ್ಟೆಂಟ್ ಗವರ್ನರ್ ಉಮೇಶ್ ಪುತ್ರನ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಪೂರ್ಣಿಮಾ ವಿಷ್ಣು ಪೈ ಪ್ರಾರ್ಥಿಸಿದರು.</p>.<p>ಆನಂದ ಮದ್ದೋಡಿ, ಸುಬ್ರಹ್ಮಣ್ಯ ಜಿ. ಉಪ್ಪುಂದ ಸನ್ಮಾನಿತರ ಪರಿಚಯ ವಾಚಿಸಿದರು. ಕಾರ್ಯದರ್ಶಿ ಸುಧಾಕರ ಪಿ<br />ವಂದಿಸಿದರು. ಸೋಮನಾಥನ್ ಆರ್. ಕಾರ್ಯಕ್ರಮ ನಿರೂಪಿಸಿದರು. ಬಳಿಕ ರಾಷ್ಟ್ರೀಯ ತರಬೇತುದಾರ ರಾಜೇಂದ್ರ ಭಟ್ ಕೆ.<br />ಅವರಿಂದ `ಸಾಕ್ಷರತೆ, ದೇಶ ಕಟ್ಟಲು ಅನಿವಾರ್ಯ ಸಾಧನ' ಎಂಬ ವಿಷಯದ ಕುರಿತು ಉಪನ್ಯಾಸ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೈಂದೂರು</strong>: ‘ನಮ್ಮಲ್ಲಿನ ಕೌಶಲದ ಮೂಲಕ ಸಮುದಾಯದ ಅಭಿವೃದ್ಧಿಗೆ ಪ್ರತಿಯೊಬ್ಬರೂ ನೆರವಾಗಬಹುದಾಗಿದೆ. ಆಸಕ್ತಿ ಆಧಾರಿತ ಕಲಿಕೆಯಿಂದ ವಿವಿಧ ಕ್ಷೇತ್ರದಲ್ಲಿ ಪರಿಣತಿಯನ್ನು ಹೊಂದಲು ಸಾಧ್ಯವಿದೆ ಎಂದು ಜಿಲ್ಲಾ ಸಾಕ್ಷರತಾ ಅಧ್ಯಕ್ಷ ಶ್ರೀಕಾಂತ್ ಪ್ರಭು ಹೇಳಿದರು.</p>.<p>ರೋಟರಿ ಜಿಲ್ಲೆ 3182 ರೋಟರಿ ಕ್ಲಬ್ ಬೈಂದೂರು ಆಶ್ರಯದಲ್ಲಿ ಇಲ್ಲಿನ ರೋಟರಿ ಭವನದಲ್ಲಿ ಆಯೋಜಿಸಲಾದ ಝೋನಲ್ ಸೆಮಿನಾರ್ ಆನ್ ಲಿಟರಸಿ ‘ಜ್ಞಾನಾಂಬುಧಿ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>ರೋಟರಿ ಜಿಲ್ಲೆ 3182 ಝೋನ್ 1ರ ಅಸಿಸ್ಟೆಂಟ್ ಗವರ್ನರ್ ಉಮೇಶ್ ಪುತ್ರನ್, ಝೋನಲ್ ಟ್ರೇನರ್ ರವಿರಾಜ್ ಶೆಟ್ಟಿ, ಝೋನಲ್ ಲೆಫ್ಟಿನೆಂಟ್ಗಳಾದ ಪ್ರವೀಣ ಶೆಟ್ಟಿ, ಸಂದೀಪ್ ಕುಮಾರ್ ಶೆಟ್ಟಿ, ಪೂರ್ಣಿಮಾ ಭವಾನಿ ಶಂಕರ್, ಝೋನಲ್ ಲಿಟರಸಿ ಕೋ-ಆರ್ಡಿನೇಟರ್ ಮಂಜುನಾಥ ಶೆಟ್ಟಿ, ಜಿಲ್ಲಾ ಲಿಟರಸಿ ಸಬ್ ಕಮಿಟಿ ಉಪಾಧ್ಯಕ್ಷ ಐ. ನಾರಾಯಣ, ಬೈಂದೂರು ರೋಟರಿ ಲಿಟರೆಸಿ ಛೇರ್ಮನ್ ಸುಬ್ರಹ್ಮಣ್ಯ ಜಿ. ಮೊದಲಾದವರು ಇದ್ದರು.</p>.<p>ಬೈಂದೂರು ರೋಟರಿ ಅಧ್ಯಕ್ಷ ಎಚ್. ಉದಯ ಆಚಾರ್ ಸ್ವಾಗತಿಸಿದರು. ಅಸಿಸ್ಟೆಂಟ್ ಗವರ್ನರ್ ಉಮೇಶ್ ಪುತ್ರನ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಪೂರ್ಣಿಮಾ ವಿಷ್ಣು ಪೈ ಪ್ರಾರ್ಥಿಸಿದರು.</p>.<p>ಆನಂದ ಮದ್ದೋಡಿ, ಸುಬ್ರಹ್ಮಣ್ಯ ಜಿ. ಉಪ್ಪುಂದ ಸನ್ಮಾನಿತರ ಪರಿಚಯ ವಾಚಿಸಿದರು. ಕಾರ್ಯದರ್ಶಿ ಸುಧಾಕರ ಪಿ<br />ವಂದಿಸಿದರು. ಸೋಮನಾಥನ್ ಆರ್. ಕಾರ್ಯಕ್ರಮ ನಿರೂಪಿಸಿದರು. ಬಳಿಕ ರಾಷ್ಟ್ರೀಯ ತರಬೇತುದಾರ ರಾಜೇಂದ್ರ ಭಟ್ ಕೆ.<br />ಅವರಿಂದ `ಸಾಕ್ಷರತೆ, ದೇಶ ಕಟ್ಟಲು ಅನಿವಾರ್ಯ ಸಾಧನ' ಎಂಬ ವಿಷಯದ ಕುರಿತು ಉಪನ್ಯಾಸ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>