ಜೂನ್ 17ರಂದು ಎಸ್–2 ಕೋಚ್ನಲ್ಲಿ ಪ್ರಯಾಣಿಸುತ್ತಿದ್ದ ಗುಣಶೇಖರ ಎಂಬುವರ ಬ್ಯಾಗ್ ನಾಪತ್ತೆಯಾಗಿತ್ತು. ಬ್ಯಾಗ್ನಲ್ಲಿ ₹ 70,000 ನಗದು ಹಾಗೂ ಇತರೆ ವಸ್ತುಗಳಿದ್ದವು. ಈ ಸಂಬಂಧ ಗುಣಶೇಖರ್ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಆರ್ಪಿಎಫ್ ಸಿಬ್ಬಂದಿ, ರೈಲ್ವೆ ನಿಲ್ದಾಣದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಮೂರು ಗುಂಪುಗಳು ಕಪ್ಪುಬಣ್ಣದ ಬ್ಯಾಗ್ಗಳನ್ನು ಕೊಂಡೊಯ್ದಿರುವುದು ಗಮನಕ್ಕೆ ಬಂದಿತ್ತು.