<p><strong>ಉಡುಪಿ: </strong>ರಾಜ್ಯದ ಎಲ್ಲ ಗ್ರಾಮ ಪಂಚಾಯಿತಿಗಳಿಗೆ ಸೋಲಾರ್ ವ್ಯವಸ್ಥೆ ಅಳವಡಿಕೆಗೆ 300 ಕೋಟಿ ಖರ್ಚು ಮಾಡಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದರು.</p>.<p>ನಗರದ ಮಣಿಪಾಲ್ ಇನ್ ಹೋಟೆಲ್ನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಸೋಲಾರ್ ಅಳವಡಿಕೆಗೆ ಟೆಂಡರ್ ಪೂರ್ಣಗೊಂಡಿದ್ದು, 9 ಕಂಪನಿಗಳನ್ನು ಅಂತಿಮಗೊಳಿಸಲಾಗಿದೆ. ಜಿಲ್ಲಾವಾರು ಕಂಪನಿಗಳನ್ನು ಆಯ್ಕೆ ಮಾಡಲಾಗಿದೆ. ಟೆಂಡರ್ ಪಡೆದ ಕಂಪನಿಗಳಿಗೆ 5 ವರ್ಷಗಳ ನಿರ್ವಹಣೆ ಜವಾಬ್ದಾರಿ ವಹಿಸಲಾಗಿದೆ ಎಂದರು.</p>.<p>ಗ್ರಾಮ ಪಂಚಾಯಿತಿಗಳಲ್ಲಿ ಸೋಲಾರ್ ವ್ಯವಸ್ಥೆ ಜಾರಿಯಾದರೆ ವಿದ್ಯುತ್ ಬಿಲ್ ಪಾವತಿ ಸಮಸ್ಯೆ ನಿವಾರಣೆಯಾಗಲಿದೆ. ಪಂಚಾಯಿತಿಗಳು ಉತ್ಪಾದಿಸುವ ಹೆಚ್ಚುವರಿ ವಿದ್ಯುತ್ ಅನ್ನು ಗ್ರಿಡ್ಗಳಿಗೆ ಮಾರಾಟ ಮಾಡಬಹುದು. ಸಾರ್ವಜನಿಕರಿಗೆ ಸರ್ಕಾರದ ಸೇವೆಗಳು ತ್ವರಿತವಾಗಿ ಸಿಗಲು ಅನುಕೂಲವಾಗಲಿದೆ ಎಂದರು.</p>.<p>ಪಂಚಾಯಿತಿಗಳಿಗೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಪೂರ್ಣಗೊಳ್ಳುತ್ತಿದ್ದಂತೆ ಸೋಲಾರ್ ಉಪಕರಣಗಳ ಅಳವಡಿಕೆ ಆರಂಭವಾಗಲಿದೆ ಎಂದು ಈಶ್ವರಪ್ಪ, ಪಂಚಾಯಿತಿ ಸದಸ್ಯರ ಗೌರವಧನವನ್ನು 1 ಸಾವಿರದಿಂದ 2 ಸಾವಿರಕ್ಕೆ ಹೆಚ್ಚಳ ಮಾಡುವ ಸಂಬಂಧ ಪ್ರಸ್ತಾವವನ್ನು ಪರಿಶೀಲಿಸಲಾಗುವುದು ಎಂದು ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ: </strong>ರಾಜ್ಯದ ಎಲ್ಲ ಗ್ರಾಮ ಪಂಚಾಯಿತಿಗಳಿಗೆ ಸೋಲಾರ್ ವ್ಯವಸ್ಥೆ ಅಳವಡಿಕೆಗೆ 300 ಕೋಟಿ ಖರ್ಚು ಮಾಡಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದರು.</p>.<p>ನಗರದ ಮಣಿಪಾಲ್ ಇನ್ ಹೋಟೆಲ್ನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಸೋಲಾರ್ ಅಳವಡಿಕೆಗೆ ಟೆಂಡರ್ ಪೂರ್ಣಗೊಂಡಿದ್ದು, 9 ಕಂಪನಿಗಳನ್ನು ಅಂತಿಮಗೊಳಿಸಲಾಗಿದೆ. ಜಿಲ್ಲಾವಾರು ಕಂಪನಿಗಳನ್ನು ಆಯ್ಕೆ ಮಾಡಲಾಗಿದೆ. ಟೆಂಡರ್ ಪಡೆದ ಕಂಪನಿಗಳಿಗೆ 5 ವರ್ಷಗಳ ನಿರ್ವಹಣೆ ಜವಾಬ್ದಾರಿ ವಹಿಸಲಾಗಿದೆ ಎಂದರು.</p>.<p>ಗ್ರಾಮ ಪಂಚಾಯಿತಿಗಳಲ್ಲಿ ಸೋಲಾರ್ ವ್ಯವಸ್ಥೆ ಜಾರಿಯಾದರೆ ವಿದ್ಯುತ್ ಬಿಲ್ ಪಾವತಿ ಸಮಸ್ಯೆ ನಿವಾರಣೆಯಾಗಲಿದೆ. ಪಂಚಾಯಿತಿಗಳು ಉತ್ಪಾದಿಸುವ ಹೆಚ್ಚುವರಿ ವಿದ್ಯುತ್ ಅನ್ನು ಗ್ರಿಡ್ಗಳಿಗೆ ಮಾರಾಟ ಮಾಡಬಹುದು. ಸಾರ್ವಜನಿಕರಿಗೆ ಸರ್ಕಾರದ ಸೇವೆಗಳು ತ್ವರಿತವಾಗಿ ಸಿಗಲು ಅನುಕೂಲವಾಗಲಿದೆ ಎಂದರು.</p>.<p>ಪಂಚಾಯಿತಿಗಳಿಗೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಪೂರ್ಣಗೊಳ್ಳುತ್ತಿದ್ದಂತೆ ಸೋಲಾರ್ ಉಪಕರಣಗಳ ಅಳವಡಿಕೆ ಆರಂಭವಾಗಲಿದೆ ಎಂದು ಈಶ್ವರಪ್ಪ, ಪಂಚಾಯಿತಿ ಸದಸ್ಯರ ಗೌರವಧನವನ್ನು 1 ಸಾವಿರದಿಂದ 2 ಸಾವಿರಕ್ಕೆ ಹೆಚ್ಚಳ ಮಾಡುವ ಸಂಬಂಧ ಪ್ರಸ್ತಾವವನ್ನು ಪರಿಶೀಲಿಸಲಾಗುವುದು ಎಂದು ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>