ಆರ್.ಎಸ್.ಎಸ್.ನ ಮಂಗಳೂರು ವಿಭಾಗ ಪ್ರಚಾರ ಪ್ರಮುಖ್ ಸುರೇಶ್ ಹೆಜಮಾಡಿ ಮಾತನಾಡಿ, ಹಿಂದೂ ಸಂಸ್ಕೃತಿ ಉಳಿದು, ಬೆಳೆದರೆ ಜಗತ್ತು ಬೆಳಗುತ್ತದೆ. ಆರೆಸ್ಸೆಸ್ ಯಾರ ವಿರುದ್ಧವೂ ಇಲ್ಲ, ಸಾಮರಸ್ಯಕ್ಕಾಗಿ ಶ್ರಮಿಸುತ್ತಿದೆ. ಸಂಘಟನೆಯ ವಿರುದ್ಧದ ಆರೋಪಗಳಿಗೆ ಕಿವಿಗೊಡುವ ಅವಶ್ಯಕತೆ ಇಲ್ಲ. ವ್ಯವಸ್ಥೆಯ ಪರಿವರ್ತನೆ, ಸಮಾಜದ ಕಟ್ಟಕಡೆಯ ವ್ಯಕ್ತಿಯ ಉದ್ಧಾರ, ಅಂತ್ಯೋದಯವೇ ಆರ್ಎಸ್ಎಸ್ ಧ್ಯೇಯ ಎಂದರು