ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಸಬ್ ಕೋ ಸನ್ನತಿ ದೇ ಭಗವಾನ್’ ಆಶಯದಡಿ ಸಹಬಾಳ್ವೆ ಸಂಘಟನೆಯಿಂದ ರಾಜ್ಯದಾದ್ಯಂತ ಸದ್ಭಾವನಾ ದಿನ ಆಚರಿಸಲಾಗುತ್ತಿದೆ. ಉಡುಪಿಯಲ್ಲಿ ಬೆಳಿಗ್ಗೆ 10 ಗಂಟೆಗೆ ನಗರದ ಬನ್ನಂಜೆ ನಾರಾಯಣ ಗುರು ಸಭಾಭವನದಿಂದ ಸದ್ಭಾವನಾ ಪಾದಯಾತ್ರೆಗೆ ಚಾಲನೆ ಸಿಗಲಿದ್ದು ಜಮ್ಮಾ ಮಸೀದಿ, ಮದರ್ ಆಫ್ ಸಾರೋಸ್ ಚರ್ಚ್ ಮೂಲಕ ಅಜ್ಜರಕಾಡಿನ ಗಾಂಧಿ ಉದ್ಯಾನವನದಲ್ಲಿ ಸಮಾಪನಗೊಳ್ಳಲಿದೆ ಎಂದು ಮಾಹಿತಿ ನೀಡಿದರು.