<p><strong>ಉಡುಪಿ</strong>: ‘ಜಿಲ್ಲಾಮಟ್ಟದ ಸ್ಥಳೀಯ ದೂರು ಸಮಿತಿಯಿಂದ ಏಕಾಏಕಿ ನನ್ನ ಹೆಸರನ್ನು ಕೈಬಿಡಲು ಕಾರಣ ಏನು ಎಂಬುದನ್ನು ಜಿಲ್ಲಾಡಳಿತ ಸ್ಪಷ್ಟಪಡಿಸಬೇಕು’ ಎಂದು ವಕೀಲೆ ಸಹನಾ ಕುಂದರ್ ಒತ್ತಾಯಿಸಿದ್ದಾರೆ.</p>.<p>ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜಕೀಯ ಪ್ರಭಾವಿಗಳ ಒತ್ತಡಕ್ಕೆ ಮಣಿದು ಜಿಲ್ಲಾಧಿಕಾರಿಗಳು ಜಿಲ್ಲಾ ಮಟ್ಟದ ಸ್ಥಳೀಯ ದೂರು ಸಮಿತಿಯಿಂದ ಹೆಸರನ್ನು ಕೈಬಿಟ್ಟಿದ್ದಾರೆ. ಇಲ್ಲವಾದರೆ, ಹೆಸರು ಕೈಬಿಟ್ಟಿದ್ದಕ್ಕೆ ಸೂಕ್ತ ಕಾರಣ ಕೊಡಬೇಕು ಎಂದು ಒತ್ತಾಯಿಸಿದರು.</p>.<p>‘ಮಹಿಳೆಯರು ಕರ್ತವ್ಯ ನಿರ್ವಹಿಸುವ ಕಡೆಗಳಲ್ಲಿ ನಡೆಯುವ ಲೈಂಗಿಕ ಕಿರುಕುಳದ ದೂರು ಆಲಿಸುವ ಹಾಗೂ ಪರಿಹಾರ ಸೂಚಿಸುವ ಕಾರ್ಯ ಜಿಲ್ಲಾಮಟ್ಟದ ಸ್ಥಳೀಯ ದೂರು ಸಮಿತಿಗೆ ಸೇರಿದೆ. ಈ ಸಮಿತಿಗೆ ಜುಲೈ 8ರಂದು ನನನ್ನು ಸದಸ್ಯೆಯನ್ನಾಗಿ ನೇಮಕ ಮಾಡಿ, ಅದೇ ದಿನ ನೇಮಕಾತಿ ಆದೇಶವನ್ನು ತಡೆಹಿಡಿಯಲಾಗಿದೆ’ ಎಂದು ಸಹನಾ ಕುಂದರ್ ದೂರಿದರು.</p>.<p>‘ಹೆಸರು ಕೈಬಿಟ್ಟಿದ್ದಕ್ಕೆ ಜಿಲ್ಲಾಧಿಕಾರಿ ಜಗದೀಶ್ ಅವರನ್ನು ಪ್ರಶ್ನಿಸಿದಾಗ ಸಮಂಜಸ ಉತ್ತರ ಸಿಗಲಿಲ್ಲ. ಸಮಿತಿಗೆ ನೇಮಕ ಮಾಡುವಂತೆ ಅರ್ಜಿ ಹಾಕಿಲ್ಲ, ಶಿಫಾರಸು ಕೂಡ ಮಾಡಿಲ್ಲ. ಹೀಗಿರುವಾಗ ಜಿಲ್ಲಾಡಳಿತವೇ ನೇಮಕ ಮಾಡಿ ಬಳಿಕ ಹೆಸರು ಕೈಬಿಟ್ಟಿರುವುದು ನೋವು ತಂದಿದೆ. ಈ ಸಂಬಂಧ ಮಹಿಳಾ ಆಯೋಗಕ್ಕೆ ಪತ್ರ ಬರೆಯಲಾಗಿದ್ದು, ಉತ್ತರದ ನಿರೀಕ್ಷೆಯಲ್ಲಿದ್ದೇನೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ</strong>: ‘ಜಿಲ್ಲಾಮಟ್ಟದ ಸ್ಥಳೀಯ ದೂರು ಸಮಿತಿಯಿಂದ ಏಕಾಏಕಿ ನನ್ನ ಹೆಸರನ್ನು ಕೈಬಿಡಲು ಕಾರಣ ಏನು ಎಂಬುದನ್ನು ಜಿಲ್ಲಾಡಳಿತ ಸ್ಪಷ್ಟಪಡಿಸಬೇಕು’ ಎಂದು ವಕೀಲೆ ಸಹನಾ ಕುಂದರ್ ಒತ್ತಾಯಿಸಿದ್ದಾರೆ.</p>.<p>ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜಕೀಯ ಪ್ರಭಾವಿಗಳ ಒತ್ತಡಕ್ಕೆ ಮಣಿದು ಜಿಲ್ಲಾಧಿಕಾರಿಗಳು ಜಿಲ್ಲಾ ಮಟ್ಟದ ಸ್ಥಳೀಯ ದೂರು ಸಮಿತಿಯಿಂದ ಹೆಸರನ್ನು ಕೈಬಿಟ್ಟಿದ್ದಾರೆ. ಇಲ್ಲವಾದರೆ, ಹೆಸರು ಕೈಬಿಟ್ಟಿದ್ದಕ್ಕೆ ಸೂಕ್ತ ಕಾರಣ ಕೊಡಬೇಕು ಎಂದು ಒತ್ತಾಯಿಸಿದರು.</p>.<p>‘ಮಹಿಳೆಯರು ಕರ್ತವ್ಯ ನಿರ್ವಹಿಸುವ ಕಡೆಗಳಲ್ಲಿ ನಡೆಯುವ ಲೈಂಗಿಕ ಕಿರುಕುಳದ ದೂರು ಆಲಿಸುವ ಹಾಗೂ ಪರಿಹಾರ ಸೂಚಿಸುವ ಕಾರ್ಯ ಜಿಲ್ಲಾಮಟ್ಟದ ಸ್ಥಳೀಯ ದೂರು ಸಮಿತಿಗೆ ಸೇರಿದೆ. ಈ ಸಮಿತಿಗೆ ಜುಲೈ 8ರಂದು ನನನ್ನು ಸದಸ್ಯೆಯನ್ನಾಗಿ ನೇಮಕ ಮಾಡಿ, ಅದೇ ದಿನ ನೇಮಕಾತಿ ಆದೇಶವನ್ನು ತಡೆಹಿಡಿಯಲಾಗಿದೆ’ ಎಂದು ಸಹನಾ ಕುಂದರ್ ದೂರಿದರು.</p>.<p>‘ಹೆಸರು ಕೈಬಿಟ್ಟಿದ್ದಕ್ಕೆ ಜಿಲ್ಲಾಧಿಕಾರಿ ಜಗದೀಶ್ ಅವರನ್ನು ಪ್ರಶ್ನಿಸಿದಾಗ ಸಮಂಜಸ ಉತ್ತರ ಸಿಗಲಿಲ್ಲ. ಸಮಿತಿಗೆ ನೇಮಕ ಮಾಡುವಂತೆ ಅರ್ಜಿ ಹಾಕಿಲ್ಲ, ಶಿಫಾರಸು ಕೂಡ ಮಾಡಿಲ್ಲ. ಹೀಗಿರುವಾಗ ಜಿಲ್ಲಾಡಳಿತವೇ ನೇಮಕ ಮಾಡಿ ಬಳಿಕ ಹೆಸರು ಕೈಬಿಟ್ಟಿರುವುದು ನೋವು ತಂದಿದೆ. ಈ ಸಂಬಂಧ ಮಹಿಳಾ ಆಯೋಗಕ್ಕೆ ಪತ್ರ ಬರೆಯಲಾಗಿದ್ದು, ಉತ್ತರದ ನಿರೀಕ್ಷೆಯಲ್ಲಿದ್ದೇನೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>