<p><strong>ಕಾರ್ಕಳ</strong>: ‘ಪ್ರಾಪಂಚಿಕ ಅನುಭವಗಳಾದ ಕಷ್ಟ ಕಾರ್ಪಣ್ಯಗಳು, ದುಷ್ಟತನಗಳು ನಮ್ಮನ್ನು ಧೃತಿಗೆಡುವಂತೆ ಮಾಡುತ್ತವೆ. ದೇವರಲ್ಲಿ ಅಚಲ ನಂಬಿಕೆಯಿಟ್ಟು ಅವರ ಸಾಕ್ಷಿಗಳಾಗಿ ಬಾಳಿದಾಗ ಮತ್ತು ಒಳಿತನ್ನು ಮಾಡಿದಾಗ ನಾವು ಆಶೀರ್ವಾದವನ್ನು ಪಡೆಯುತ್ತೇವೆ’ ಎಂದು ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಲೋರೆನ್ಸ್ ಮುಕುಝಿ ಪ್ರಬೋಧನೆ ನೀಡಿದರು.</p>.<p>ಕಾರ್ಕಳದ ಅತ್ತೂರು ಕಾರ್ಕಳ ಸೇಂಟ್ ಲಾರೆನ್ಸ್ ಬಸಿಲಿಕ ಪುಣ್ಯಕ್ಷೇತ್ರದ ಮಹೋತ್ಸವದ ಮೂರನೇ ದಿನವಾದ ಮಂಗಳವಾರ ಬಲಿಪೂಜೆ ನೆರವೇರಿಸಿ ಅವರು ಮಾತನಾಡಿದರು. ಅಸ್ವಸ್ಥರಿಗಾಗಿ ವಿಶೇಷವಾಗಿ ಪೂಜೆ ಪ್ರಾರ್ಥನೆಗಳನ್ನು ನೆರವೇರಿಸಲಾಯಿತು.</p>.<p>ಮಂಗಳೂರು ಧರ್ಮಪ್ರಾಂತ್ಯದ ಶ್ರೇಷ್ಠಗುರು ಮ್ಯಾಕ್ಸಿಮ್ ನೊರೊನ್ಹಾ ಬೆಳಿಗ್ಗೆಯ ಬಲಿಪೂಜೆಯನ್ನು ಅರ್ಪಿಸಿದರು. ಕಟ್ಕೆರೆಯ ಆಲ್ವಿನ್ ಸಿಕ್ವೇರಾ, ಶಿವಮೊಗ್ಗದ ವೀರೇಶ್ ಮೋರಸ್, ಗಂಗೊಳ್ಳಿಯ ಥೋಮಸ್ ರೋಷನ್ ಡಿಸೋಜ, ಬೋಂದೆಲ್ನ ಆಂಡ್ರು ಡಿಸೋಜ, ಬೋಂದೆಲ್ ದಿನದ ಇತರ ಬಲಿಪೂಜೆಗಳನ್ನು ನೆರವೇರಿಸಿದರು.</p>.<p>ಪನೀರ್ನ ವಿಕ್ಟರ್ ಡಿಮೆಲ್ಲೊ ದಿನದ ಅಂತಿಮ ಬಲಿಪೂಜೆ ನಂತರ ಮಹೋತ್ಸವದ ಮೂರನೇ ದಿನದ ಕಾರ್ಯಕ್ರಮಗಳು ಸಂಪನ್ನಗೊಂಡವು. ಮಾಜಿ ಶಾಸಕರಾದ ಅಭಯಚಂದ್ರ ಜೈನ್, ವಿನಯ ಕುಮಾರ ಸೊರಕೆ ಕ್ಷೇತ್ರಕ್ಕೆ ಭೇಟಿ ನೀಡಿದರು.</p>.<p>ಮಹೋತ್ಸವದ ನಾಲ್ಕನೇ ದಿನ ಬುಧವಾರ ಬೆಳಿಗ್ಗೆ 8 ಗಂಟೆಯಿಂದ ಬಲಿಪೂಜೆಗಳು ನೆರವೇರಲಿವೆ. ಮಧ್ಯಾಹ್ನ 12 ಗಂಟೆಯ ಬಲಿಪೂಜೆ ಕನ್ನಡ ಭಾಷೆಯಲಿದ್ದು, 10 ಗಂಟೆಯ ವಿಶೇಷ ಸಾಂಭ್ರಮಿಕ ಬಲಿಪೂಜೆಯನ್ನು ಮಂಗಳೂರಿನ ನಿವೃತ್ತ ಧರ್ಮಾಧ್ಯಕ್ಷ ಅಲೋಶಿಯಸ್ ಪಾವ್ಲ್ ಡಿಸೋಜ ನೆರವೇರಿಸುವರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರ್ಕಳ</strong>: ‘ಪ್ರಾಪಂಚಿಕ ಅನುಭವಗಳಾದ ಕಷ್ಟ ಕಾರ್ಪಣ್ಯಗಳು, ದುಷ್ಟತನಗಳು ನಮ್ಮನ್ನು ಧೃತಿಗೆಡುವಂತೆ ಮಾಡುತ್ತವೆ. ದೇವರಲ್ಲಿ ಅಚಲ ನಂಬಿಕೆಯಿಟ್ಟು ಅವರ ಸಾಕ್ಷಿಗಳಾಗಿ ಬಾಳಿದಾಗ ಮತ್ತು ಒಳಿತನ್ನು ಮಾಡಿದಾಗ ನಾವು ಆಶೀರ್ವಾದವನ್ನು ಪಡೆಯುತ್ತೇವೆ’ ಎಂದು ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಲೋರೆನ್ಸ್ ಮುಕುಝಿ ಪ್ರಬೋಧನೆ ನೀಡಿದರು.</p>.<p>ಕಾರ್ಕಳದ ಅತ್ತೂರು ಕಾರ್ಕಳ ಸೇಂಟ್ ಲಾರೆನ್ಸ್ ಬಸಿಲಿಕ ಪುಣ್ಯಕ್ಷೇತ್ರದ ಮಹೋತ್ಸವದ ಮೂರನೇ ದಿನವಾದ ಮಂಗಳವಾರ ಬಲಿಪೂಜೆ ನೆರವೇರಿಸಿ ಅವರು ಮಾತನಾಡಿದರು. ಅಸ್ವಸ್ಥರಿಗಾಗಿ ವಿಶೇಷವಾಗಿ ಪೂಜೆ ಪ್ರಾರ್ಥನೆಗಳನ್ನು ನೆರವೇರಿಸಲಾಯಿತು.</p>.<p>ಮಂಗಳೂರು ಧರ್ಮಪ್ರಾಂತ್ಯದ ಶ್ರೇಷ್ಠಗುರು ಮ್ಯಾಕ್ಸಿಮ್ ನೊರೊನ್ಹಾ ಬೆಳಿಗ್ಗೆಯ ಬಲಿಪೂಜೆಯನ್ನು ಅರ್ಪಿಸಿದರು. ಕಟ್ಕೆರೆಯ ಆಲ್ವಿನ್ ಸಿಕ್ವೇರಾ, ಶಿವಮೊಗ್ಗದ ವೀರೇಶ್ ಮೋರಸ್, ಗಂಗೊಳ್ಳಿಯ ಥೋಮಸ್ ರೋಷನ್ ಡಿಸೋಜ, ಬೋಂದೆಲ್ನ ಆಂಡ್ರು ಡಿಸೋಜ, ಬೋಂದೆಲ್ ದಿನದ ಇತರ ಬಲಿಪೂಜೆಗಳನ್ನು ನೆರವೇರಿಸಿದರು.</p>.<p>ಪನೀರ್ನ ವಿಕ್ಟರ್ ಡಿಮೆಲ್ಲೊ ದಿನದ ಅಂತಿಮ ಬಲಿಪೂಜೆ ನಂತರ ಮಹೋತ್ಸವದ ಮೂರನೇ ದಿನದ ಕಾರ್ಯಕ್ರಮಗಳು ಸಂಪನ್ನಗೊಂಡವು. ಮಾಜಿ ಶಾಸಕರಾದ ಅಭಯಚಂದ್ರ ಜೈನ್, ವಿನಯ ಕುಮಾರ ಸೊರಕೆ ಕ್ಷೇತ್ರಕ್ಕೆ ಭೇಟಿ ನೀಡಿದರು.</p>.<p>ಮಹೋತ್ಸವದ ನಾಲ್ಕನೇ ದಿನ ಬುಧವಾರ ಬೆಳಿಗ್ಗೆ 8 ಗಂಟೆಯಿಂದ ಬಲಿಪೂಜೆಗಳು ನೆರವೇರಲಿವೆ. ಮಧ್ಯಾಹ್ನ 12 ಗಂಟೆಯ ಬಲಿಪೂಜೆ ಕನ್ನಡ ಭಾಷೆಯಲಿದ್ದು, 10 ಗಂಟೆಯ ವಿಶೇಷ ಸಾಂಭ್ರಮಿಕ ಬಲಿಪೂಜೆಯನ್ನು ಮಂಗಳೂರಿನ ನಿವೃತ್ತ ಧರ್ಮಾಧ್ಯಕ್ಷ ಅಲೋಶಿಯಸ್ ಪಾವ್ಲ್ ಡಿಸೋಜ ನೆರವೇರಿಸುವರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>