ಸಾಕ್ಷಿ ಮಹಾರಾಜ್ ಉತ್ತರ ಪ್ರದೇಶದಿಂದ ಕರ್ನಾಟಕದ ಕರಾವಳಿಯ ಸೊಬಗಿಗೆ ಮನಸೋತು ಇಲ್ಲಿಗೆ ಬಂದಿರುವುದೇ ವಿಶೇಷ. ದೇಶದ ಕೆಲವೇ ಮಂದಿಗೆ ಇರುವ ವೈ–ಪ್ಲಸ್ ಭದ್ರತೆಯನ್ನು ಹೊಂದಿರುವ ಅವರು, ಇದನ್ನೆಲ್ಲ ಮರೆತು ಆಯುರ್ವೇದ ಆಶ್ರಮದ ವೈದ್ಯ ಡಾ.ತನ್ಮಯ ಗೋಸ್ವಾಮಿ ಅವರ ಸಲಹೆಯಂತೆ ವಿಶ್ರಾಂತಿ ಪಡೆಯುತ್ತಿದ್ದಾರೆ. ಕಳೆದ ಶುಕ್ರವಾರದಿಂದ ಆಶ್ರಮದಲ್ಲಿ ಚಿಕಿತ್ಸೆ ಪಡದುಕೊಳ್ಳುತ್ತಿರುವ ಅವರು, ಬುಧವಾರ ಬೆಳಿಗ್ಗೆ ಮಂಗಳೂರಿನ ವಿಮಾನ ನಿಲ್ದಾಣದಿಂದ ಉತ್ತರ ಪ್ರದೇಶಕ್ಕೆ ಹಿಂದಿರುಗುವರು.