ಶಾಸಕ ಕಿರಣ್ ಕುಮಾರ್ ಕೊಡ್ಗಿ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಲಿದ್ದು, ಕಸಾಪ ಜಿಲ್ಲಾ ಘಟಕ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಆಶಯ ನುಡಿಗಳನ್ನಾಡುವರು. 11.45ಕ್ಕೆ ‘ಬ್ರಹ್ಮಾವರ ತಾಲ್ಲೂಕಿನ ವಿಶೇಷಗಳು–ಒಂದು ಬೀಸು ನೋಟ’ ವಿಶೇಷ ಉಪನ್ಯಾಸ ನಡೆಯಲಿದೆ. ನಂತರ ನೃತ್ಯ ವೈವಿಧ್ಯ, ಬಹುವಿಧ ಗೋಷ್ಠಿ, 2.30ಕ್ಕೆ ಯಕ್ಷ ಲಯ ವಿನ್ಯಾಸ ಕಾರ್ಯಕ್ರಮ, ಸಮ್ಮೇಳನ ಅಧ್ಯಕ್ಷರೊಂದಿಗೆ ಮಾತುಕತೆ, ಸಂಜೆ 4ಕ್ಕೆ ಸಮಾರೋಪ ಸಮಾರಂಭ, ಸಾಧಕರಿಗೆ ಸನ್ಮಾನ ನಡೆಯಲಿದೆ. ಸಭಾ ಕಾರ್ಯಕ್ರಮದ ನಂತರ ನಾಟಕ ಪ್ರದರ್ಶನಗೊಳ್ಳಲಿದೆ ಎಂದು ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಗುಂಡ್ಮಿ ರಾಮಚಂದ್ರ ಐತಾಳ ತಿಳಿಸಿದ್ದಾರೆ.