<p><strong>ಕೋಟ (ಬ್ರಹ್ಮಾವರ)</strong>: ಸಂಘಟನೆ ಮತ್ತು ನಿರಂತರತೆ ಸುಲಭವಲ್ಲ. ಎಪ್ಪತ್ತರ ದಶಕದಲ್ಲಿ ಸಾಲಿಗ್ರಾಮ ಮಕ್ಕಳ ಮೇಳವನ್ನು ಕಟ್ಟಿ ಐವತ್ತು ವರ್ಷಗಳ ಸಾರ್ಥಕ ದಿಗ್ವಿಜಯ ಸಾಧಿಸಿದ ಶ್ರೀನಿವಾಸ ಉಡುಪ ಮತ್ತು ಶ್ರೀಧರ ಹಂದೆ ಅವರು ಯಕ್ಷ ಯುಗಪ್ರವರ್ತಕರು ಎಂದು ಯಕ್ಷಗಾನ ಸಂಶೋಧಕ, ವಿದ್ವಾಂಸ ಆನಂದರಾಮ ಉಪಾಧ್ಯ ಹೇಳಿದರು.</p>.<p>ಕರ್ನಾಟಕ ಯಕ್ಷಧಾಮ ಮಂಗಳೂರು, ಪದ್ಮಕಮಲ ಟ್ರಸ್ಟ್ ಬೆಂಗಳೂರು, ಕಲ್ಕೂರ ಪ್ರತಿಷ್ಠಾನದ ಸಹಯೋಗದೊಂದಿಗೆ ಬೆಂಗಳೂರಿನ ಪರಂಪರಾ ಸಭಾಂಗಣದಲ್ಲಿ ಆಯೋಜಿಸಿದ್ದ ಕೋಟದ ಸಾಲಿಗ್ರಾಮ ಮಕ್ಕಳ ಮೇಳದ ಸುವರ್ಣ ಪರ್ವ ಸರಣಿ ಕಾರ್ಯಕ್ರಮ ಸುವರ್ಣ ಸನ್ಮಾನ ಯಕ್ಷಗಾನ ಪ್ರದರ್ಶನದಲ್ಲಿ ಅವರು ಮಾತನಾಡಿದರು.</p>.<p>ಅನೇಕ ಮಕ್ಕಳ ಮೇಳಗಳು ಹುಟ್ಟಿ ಪ್ರದರ್ಶನಗೊಳ್ಳುವಲ್ಲಿ ಸಾಲಿಗ್ರಾಮ ಮಕ್ಕಳ ಮೇಳದ ಯಶಸ್ಸಿನ ಗಾಥೆಯೇ ಮೂಲ ಪ್ರೇರಣೆ. ಮುಗ್ಧ ಮನಸ್ಸಿನ ಮಕ್ಕಳಲ್ಲಿ ಪರಂಪರೆಯ ಯಕ್ಷಗಾನದ ಅಭಿರುಚಿ ಮೂಡಿಸಿ, ಯಕ್ಷಾಭಿಮಾನಿಗಳ ಸಹೃದಯತೆಯನ್ನು ತಿದ್ದಿದ ಮಕ್ಕಳ ಮೇಳ ಐತಿಹಾಸಿಕ ದಾಖಲೆಯನ್ನು ಮೆರೆದಿದೆ ಎಂದು ಹೇಳಿದರು.</p>.<p>ಸಾಲಿಗ್ರಾಮ ಮಕ್ಕಳ ಮೇಳದ ಉಪಾಧ್ಯಕ್ಷ ಎಚ್. ಜನಾರ್ದನ ಹಂದೆ ಅಧ್ಯಕ್ಷತೆ ವಹಿಸಿದ್ದರು. ಕಲಾವಿದರಾದ ಗಣೇಶ ಶಾನುಭಾಗ, ರಾಮದೇವ ಉರಾಳ, ವೆಂಕಟೇಶ ಹಂದೆ, ಕ್ರಷ್ಣಾನಂದ ಆಚಾರ್, ಮುರಳಿಧರ ನಾವುಡ, ವಿಶ್ವನಾಥ ಉರಾಳ, ಕಲಾ ಪೋಷಕ ಎಂ. ಸುಧೀಂದ್ರ ಹೊಳ್ಳ ಭಾಗವಹಿಸಿದ್ದರು.</p>.<p>ಮಕ್ಕಳ ಯಕ್ಷಗಾನ ಕ್ಷೇತ್ರದ ಸಾಧಕ, ಸಂಘಟಕರು, ಗುರು ಬೆಂಗಳೂರಿನಲ್ಲಿ ನೆಲೆಸಿರುವ ಕೆ. ಮೋಹನ್, ಶ್ರೀನಿವಾಸ ಸಾಸ್ತಾನ, ಕೃಷ್ಣಮೂರ್ತಿ ತುಂಗ, ಡಾ. ಬೇಗಾರು ಶಿವ ಕುಮಾರ್, ಡಾ. ರಾಧಾಕೃಷ್ಣ ಉರಾಳ, ಶಂಕರ ಬಾಳ್ಕುದ್ರು ಅವರಿಗೆ ‘ಸುವರ್ಣ ಸನ್ಮಾನ’ ನೀಡಲಾಯಿತು.</p>.<p>ಮಕ್ಕಳ ಮೇಳದ ಕಾರ್ಯದರ್ಶಿ ಸುಜಯೀಂದ್ರ ಹಂದೆ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಪ್ರದೀಪ ಮಧ್ಯಸ್ಥ ವಂದಿಸಿದರು. ಮಾಧುರಿ ಶ್ರೀರಾಮ ನಿರೂಪಿಸಿದರು. ಬಳಿಕ ಕಾರ್ಕಳ ಶ್ರೀದೇವಿ ಲಲಿತ ಕಲಾ ಬಳಗದವರಿಂದ ಶಶಿಕಾಂತ್ ಶೆಟ್ಟಿ ಕಾರ್ಕಳ ನಿರ್ದೇಶನದಲ್ಲಿ ‘ಶಾಂಭವಿ ವಿಜಯ’ ತೆಂಕುತಿಟ್ಟು ಯಕ್ಷಗಾನ ಪ್ರದರ್ಶನಗೊಂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಟ (ಬ್ರಹ್ಮಾವರ)</strong>: ಸಂಘಟನೆ ಮತ್ತು ನಿರಂತರತೆ ಸುಲಭವಲ್ಲ. ಎಪ್ಪತ್ತರ ದಶಕದಲ್ಲಿ ಸಾಲಿಗ್ರಾಮ ಮಕ್ಕಳ ಮೇಳವನ್ನು ಕಟ್ಟಿ ಐವತ್ತು ವರ್ಷಗಳ ಸಾರ್ಥಕ ದಿಗ್ವಿಜಯ ಸಾಧಿಸಿದ ಶ್ರೀನಿವಾಸ ಉಡುಪ ಮತ್ತು ಶ್ರೀಧರ ಹಂದೆ ಅವರು ಯಕ್ಷ ಯುಗಪ್ರವರ್ತಕರು ಎಂದು ಯಕ್ಷಗಾನ ಸಂಶೋಧಕ, ವಿದ್ವಾಂಸ ಆನಂದರಾಮ ಉಪಾಧ್ಯ ಹೇಳಿದರು.</p>.<p>ಕರ್ನಾಟಕ ಯಕ್ಷಧಾಮ ಮಂಗಳೂರು, ಪದ್ಮಕಮಲ ಟ್ರಸ್ಟ್ ಬೆಂಗಳೂರು, ಕಲ್ಕೂರ ಪ್ರತಿಷ್ಠಾನದ ಸಹಯೋಗದೊಂದಿಗೆ ಬೆಂಗಳೂರಿನ ಪರಂಪರಾ ಸಭಾಂಗಣದಲ್ಲಿ ಆಯೋಜಿಸಿದ್ದ ಕೋಟದ ಸಾಲಿಗ್ರಾಮ ಮಕ್ಕಳ ಮೇಳದ ಸುವರ್ಣ ಪರ್ವ ಸರಣಿ ಕಾರ್ಯಕ್ರಮ ಸುವರ್ಣ ಸನ್ಮಾನ ಯಕ್ಷಗಾನ ಪ್ರದರ್ಶನದಲ್ಲಿ ಅವರು ಮಾತನಾಡಿದರು.</p>.<p>ಅನೇಕ ಮಕ್ಕಳ ಮೇಳಗಳು ಹುಟ್ಟಿ ಪ್ರದರ್ಶನಗೊಳ್ಳುವಲ್ಲಿ ಸಾಲಿಗ್ರಾಮ ಮಕ್ಕಳ ಮೇಳದ ಯಶಸ್ಸಿನ ಗಾಥೆಯೇ ಮೂಲ ಪ್ರೇರಣೆ. ಮುಗ್ಧ ಮನಸ್ಸಿನ ಮಕ್ಕಳಲ್ಲಿ ಪರಂಪರೆಯ ಯಕ್ಷಗಾನದ ಅಭಿರುಚಿ ಮೂಡಿಸಿ, ಯಕ್ಷಾಭಿಮಾನಿಗಳ ಸಹೃದಯತೆಯನ್ನು ತಿದ್ದಿದ ಮಕ್ಕಳ ಮೇಳ ಐತಿಹಾಸಿಕ ದಾಖಲೆಯನ್ನು ಮೆರೆದಿದೆ ಎಂದು ಹೇಳಿದರು.</p>.<p>ಸಾಲಿಗ್ರಾಮ ಮಕ್ಕಳ ಮೇಳದ ಉಪಾಧ್ಯಕ್ಷ ಎಚ್. ಜನಾರ್ದನ ಹಂದೆ ಅಧ್ಯಕ್ಷತೆ ವಹಿಸಿದ್ದರು. ಕಲಾವಿದರಾದ ಗಣೇಶ ಶಾನುಭಾಗ, ರಾಮದೇವ ಉರಾಳ, ವೆಂಕಟೇಶ ಹಂದೆ, ಕ್ರಷ್ಣಾನಂದ ಆಚಾರ್, ಮುರಳಿಧರ ನಾವುಡ, ವಿಶ್ವನಾಥ ಉರಾಳ, ಕಲಾ ಪೋಷಕ ಎಂ. ಸುಧೀಂದ್ರ ಹೊಳ್ಳ ಭಾಗವಹಿಸಿದ್ದರು.</p>.<p>ಮಕ್ಕಳ ಯಕ್ಷಗಾನ ಕ್ಷೇತ್ರದ ಸಾಧಕ, ಸಂಘಟಕರು, ಗುರು ಬೆಂಗಳೂರಿನಲ್ಲಿ ನೆಲೆಸಿರುವ ಕೆ. ಮೋಹನ್, ಶ್ರೀನಿವಾಸ ಸಾಸ್ತಾನ, ಕೃಷ್ಣಮೂರ್ತಿ ತುಂಗ, ಡಾ. ಬೇಗಾರು ಶಿವ ಕುಮಾರ್, ಡಾ. ರಾಧಾಕೃಷ್ಣ ಉರಾಳ, ಶಂಕರ ಬಾಳ್ಕುದ್ರು ಅವರಿಗೆ ‘ಸುವರ್ಣ ಸನ್ಮಾನ’ ನೀಡಲಾಯಿತು.</p>.<p>ಮಕ್ಕಳ ಮೇಳದ ಕಾರ್ಯದರ್ಶಿ ಸುಜಯೀಂದ್ರ ಹಂದೆ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಪ್ರದೀಪ ಮಧ್ಯಸ್ಥ ವಂದಿಸಿದರು. ಮಾಧುರಿ ಶ್ರೀರಾಮ ನಿರೂಪಿಸಿದರು. ಬಳಿಕ ಕಾರ್ಕಳ ಶ್ರೀದೇವಿ ಲಲಿತ ಕಲಾ ಬಳಗದವರಿಂದ ಶಶಿಕಾಂತ್ ಶೆಟ್ಟಿ ಕಾರ್ಕಳ ನಿರ್ದೇಶನದಲ್ಲಿ ‘ಶಾಂಭವಿ ವಿಜಯ’ ತೆಂಕುತಿಟ್ಟು ಯಕ್ಷಗಾನ ಪ್ರದರ್ಶನಗೊಂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>