<p><strong>ಬ್ರಹ್ಮಾವರ</strong>: ಸಾಲಿಗ್ರಾಮ ಗುರುನರಸಿಂಹ ಮತ್ತು ಆಂಜನೇಯ ದೇವಸ್ಥಾನದ ವಾರ್ಷಿಕ ಜಾತ್ರೆ ಸೋಮವಾರ ವಿಜೃಂಭಣೆಯಿಂದ ನಡೆಯಿತು.</p>.<p>ಬೆಳಿಗ್ಗೆ ನಡೆದ ರಥಾರೋಹಣದಲ್ಲಿ ಉತ್ಸವ ಮೂರ್ತಿಯನ್ನು ರಥದಲ್ಲಿರಿಸಲಾಯಿತು. ವೇದಘೋಷದೊಂದಿಗೆ ಆಂಜನೇಯ ದೇವಸ್ಥಾನ<br />ದವರೆಗೆ ಮೆರವಣಿಗೆ ಮಾಡಲಾಯಿತು.</p>.<p>ಭಕ್ತಾದಿಗಳು ಆಂಜನೇಯ ಹಾಗೂ ಗುರುನರಸಿಂಹನ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಅನ್ನಸಂತರ್ಪಣೆ ಮತ್ತು ಪಾನಕ, ಪನಿವಾರ ಸೇವೆ ನಡೆಯಿತು.</p>.<p>ಗುರುನರಸಿಂಹ ದೇವಸ್ಥಾನವನ್ನು ದೇಗುಲದ ವತಿಯಿಂದ ಹಾಗೂ ಆಂಜನೇಯ ದೇವಸ್ಥಾನವನ್ನು ಆಂಜನೇಯ ಸೇವಾ ಟ್ರಸ್ಟ್ ವತಿಯಿಂದ ವಿಶೇಷ ಹೂವಿನ ಅಲಂಕಾರದಿಂದ ಶೃಂಗರಿಸಲಾಗಿತ್ತು.</p>.<p>ಕಾರಂತ ಬೀದಿಯ ಎರಡೂ ಬದಿಯಲ್ಲಿ ಸ್ಥಳೀಯ ಭಕ್ತಾದಿಗಳ ವತಿಯಿಂದ ವಿದ್ಯುತ್ ದೀಪದಿಂದ ಅಲಂಕಾರ ಮಾಡಲಾಗಿತ್ತು.</p>.<p>ಸಂಜೆ ರಥಾವರೋಹಣ, ಓಲಗ ಮಂಟಪ ಸೇವೆ, ಅಷ್ಟಾವಧಾನ ಸೇವೆ, ಭಕ್ತಿ ಲಹರಿ ಸಂಗೀತ ಸೇವೆ, ಮಹಾಮಂಗಳಾರತಿ, ಭೂತಬಲಿ, ಶಯನೋತ್ಸವ ನಡೆಯಿತು.</p>.<p>ಮಂಗಳವಾರ ಬೆಳಿಗ್ಗೆ ಪ್ರಭೋದೋತ್ಸವ, ಸಂಜೆ ಓಕುಳಿ ಸೇವೆ, ರಜತ ರಥೋತ್ಸವ, ಅವಭೃತ ಸ್ನಾನ ನಡೆಯಲಿದೆ.</p>.<p>ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಡಾ.ಕೆ.ಎಸ್ ಕಾರಂತ, ಉಪಾಧ್ಯಕ್ಷ ವೇದಮೂರ್ತಿ ಗಣೇಶಮೂರ್ತಿ ನಾವುಡ, ಕಾರ್ಯದರ್ಶಿ ಲಕ್ಷ್ಮೀನಾರಾಯಣ ತುಂಗ ಮತ್ತಿತರರು ಇದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಬ್ರಹ್ಮಾವರ</strong>: ಸಾಲಿಗ್ರಾಮ ಗುರುನರಸಿಂಹ ಮತ್ತು ಆಂಜನೇಯ ದೇವಸ್ಥಾನದ ವಾರ್ಷಿಕ ಜಾತ್ರೆ ಸೋಮವಾರ ವಿಜೃಂಭಣೆಯಿಂದ ನಡೆಯಿತು.</p>.<p>ಬೆಳಿಗ್ಗೆ ನಡೆದ ರಥಾರೋಹಣದಲ್ಲಿ ಉತ್ಸವ ಮೂರ್ತಿಯನ್ನು ರಥದಲ್ಲಿರಿಸಲಾಯಿತು. ವೇದಘೋಷದೊಂದಿಗೆ ಆಂಜನೇಯ ದೇವಸ್ಥಾನ<br />ದವರೆಗೆ ಮೆರವಣಿಗೆ ಮಾಡಲಾಯಿತು.</p>.<p>ಭಕ್ತಾದಿಗಳು ಆಂಜನೇಯ ಹಾಗೂ ಗುರುನರಸಿಂಹನ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಅನ್ನಸಂತರ್ಪಣೆ ಮತ್ತು ಪಾನಕ, ಪನಿವಾರ ಸೇವೆ ನಡೆಯಿತು.</p>.<p>ಗುರುನರಸಿಂಹ ದೇವಸ್ಥಾನವನ್ನು ದೇಗುಲದ ವತಿಯಿಂದ ಹಾಗೂ ಆಂಜನೇಯ ದೇವಸ್ಥಾನವನ್ನು ಆಂಜನೇಯ ಸೇವಾ ಟ್ರಸ್ಟ್ ವತಿಯಿಂದ ವಿಶೇಷ ಹೂವಿನ ಅಲಂಕಾರದಿಂದ ಶೃಂಗರಿಸಲಾಗಿತ್ತು.</p>.<p>ಕಾರಂತ ಬೀದಿಯ ಎರಡೂ ಬದಿಯಲ್ಲಿ ಸ್ಥಳೀಯ ಭಕ್ತಾದಿಗಳ ವತಿಯಿಂದ ವಿದ್ಯುತ್ ದೀಪದಿಂದ ಅಲಂಕಾರ ಮಾಡಲಾಗಿತ್ತು.</p>.<p>ಸಂಜೆ ರಥಾವರೋಹಣ, ಓಲಗ ಮಂಟಪ ಸೇವೆ, ಅಷ್ಟಾವಧಾನ ಸೇವೆ, ಭಕ್ತಿ ಲಹರಿ ಸಂಗೀತ ಸೇವೆ, ಮಹಾಮಂಗಳಾರತಿ, ಭೂತಬಲಿ, ಶಯನೋತ್ಸವ ನಡೆಯಿತು.</p>.<p>ಮಂಗಳವಾರ ಬೆಳಿಗ್ಗೆ ಪ್ರಭೋದೋತ್ಸವ, ಸಂಜೆ ಓಕುಳಿ ಸೇವೆ, ರಜತ ರಥೋತ್ಸವ, ಅವಭೃತ ಸ್ನಾನ ನಡೆಯಲಿದೆ.</p>.<p>ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಡಾ.ಕೆ.ಎಸ್ ಕಾರಂತ, ಉಪಾಧ್ಯಕ್ಷ ವೇದಮೂರ್ತಿ ಗಣೇಶಮೂರ್ತಿ ನಾವುಡ, ಕಾರ್ಯದರ್ಶಿ ಲಕ್ಷ್ಮೀನಾರಾಯಣ ತುಂಗ ಮತ್ತಿತರರು ಇದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>