<p><strong>ಉಡುಪಿ</strong>: ಸ್ವಾತಂತ್ರ್ಯ ಹೋರಾಟಗಾರ, ಯಕ್ಷಗಾನದ ನವಯುಗದ ಪ್ರವರ್ತಕರಾದ ಮಲ್ಪೆ ಶಂಕರನಾರಾಯಣ ಸಾಮಗರು (ದೊಡ್ಡ ಸಾಮಗರು) ಉತ್ತಮ ಸಂಸ್ಕಾರದ ಪ್ರತೀಕವಾಗಿದ್ದಾರೆ ಎಂದು ಕಾಸರಗೋಡಿನ ಎಡನೀರು ಮಠದ ಸಚ್ಚಿದಾನಂದ ಭಾರತಿ ಸ್ವಾಮೀಜಿ ಹೇಳಿದರು.</p>.<p>ಮಲ್ಪೆ ಶಂಕರನಾರಾಯಣ ಸಾಮಗರ ಜೀವನ ದರ್ಶನವನ್ನು ಕಟ್ಟಿಕೊಡುವ ದಿನೇಶ ಉಪ್ಪೂರ ರಚಿಸಿರುವ ‘ದೊಡ್ಡ ಸಾಮಗರ ನಾಲ್ಮೊಗ’ ಗ್ರಂಥವನ್ನು ಉಡುಪಿಯ ಯಕ್ಷಗಾನ ಕಲಾರಂಗದ ನೂತನ ಐವೈಸಿ ಸಭಾಗ್ರಹದಲ್ಲಿ ಶನಿವಾರ ಲೋಕಾರ್ಪಣೆ ಮಾಡಿ ಮಾತನಾಡಿದರು.</p>.<p>ದೊಡ್ಡ ಸಾಮಗರಿಗೂ ಎಡನೀರು ಮಠಕ್ಕೂ ಅವಿನಾಭಾವ ಸಂಬಂಧವಿದೆ. ಅವರು ಕೇಶವಾನಂದ ಭಾರತಿ ಸ್ವಾಮೀಜಿಗೆ ಆಪ್ತರಾಗಿದ್ದರು. ಗಾಂಧಿವಾದಿಯಾಗಿದ್ದ ದೊಡ್ಡ ಸಾಮಗರು ಬದುಕಿನುದ್ದಕ್ಕೂ ಅದನ್ನು ಪಾಲಿಸಿದವರು. ಅವರ ವ್ಯಕ್ತಿತ್ವವು ಅನುಕರಣೀಯವಾಗಿತ್ತು ಎಂದು ಬಣ್ಣಿಸಿದರು.</p>.<p>ದೊಡ್ಡ ಕಲಾವಿದರಾದರೂ ಸರಳತೆಯಿಂದ ಬದುಕಿದ್ದರು. ಅವರ ಕುರಿತು ಇಂತಹ ಕೃತಿ ಲೋಕಾರ್ಪಣೆಯಾಗಿರುವುದು ನಿಜಕ್ಕೂ ಸಂತಸದ ವಿಷಯ. ಮರೆಯಾದ ಹಲವಾರು ಯಕ್ಷಗಾನ ದಿಗ್ಗಜರ ಕುರಿತು ಇಂತಹ ಕೃತಿಗಳು ರಚನೆಯಾದರೆ ಮುಂದಿನ ಪೀಳಿಗೆಗೂ ಅವರ ಮಹತ್ವ ತಿಳಿಯಲಿದೆ ಎಂದರು.</p>.<p>ಮಾಹೆಯ ಸಹಕುಲಾಧಿಪತಿ ಡಾ. ಎಚ್.ಎಸ್.ಬಲ್ಲಾಳ್ ಅಧ್ಯಕ್ಷತೆ ವಹಿಸಿದ್ದರು. ಪ್ರೊ.ಮುರಳೀಧರ ಉಪಾಧ್ಯ ಹಿರಿಯಡ್ಕ ಅವರು ಪುಸ್ತಕ ಪರಿಚಯ ಮಾಡಿದರು.</p>.<p>ಪ್ರಭಾಕರ ಜೋಶಿ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಮಾಹೆ ಸಹಕುಲಾಧಿಪತಿ ಡಾ. ನಾರಾಯಣ ಸಭಾಹಿತ್, ಮಣಿಪಾಲ ಯುನಿವರ್ಸಲ್ ಪ್ರೆಸ್ನ ಸಂಪಾದಕಿ ನೀತಾ ಇನಾಂದಾರ್, ಪ್ರದೀಪ ಕುಮಾರ್ ಕಲ್ಕೂರ , ಕಲಾವಿದ ಕೋಳ್ಯೂರು ರಾಮಚಂದ್ರ ರಾವ್, ಸಾಹಿತಿಗಳಾದ ಭಾಮ ಸಾಮಗ, ದಿನೇಶ್ ಉಪ್ಪೂರ ಉಪಸ್ಥಿತರಿದ್ದರು. ಎಂ.ಎಲ್.ಸಾಮಗ ಸ್ವಾಗತಿಸಿದರು.</p>.<p>ಕಾರ್ಯಕ್ರಮದ ಬಳಿಕ ಯಕ್ಷಗಾನ ತಾಳಮದ್ದಳೆ ‘ಶಲ್ಯ ಸಾರಥ್ಯ’ವನ್ನು ಕಲಾವಿದರಾದ ರವಿಚಂದ್ರ ಕನ್ನಡಿಕಟ್ಟೆ, ಚೈತನ್ಯಕೃಷ್ಣ ಪದ್ಯಾಣ, ಪುತ್ತಿಗೆ ಕೌಶಿಕ್ ರಾವ್, ಪ್ರಭಾಕರ ಜೋಶಿ, ಸರ್ಪಂಗಳ ಈಶ್ವರ ಭಟ್, ಮತ್ತು ಹಿರಣ್ಯ ವೆಂಕಟೇಶ ಭಟ್ ನಡೆಸಿಕೊಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ</strong>: ಸ್ವಾತಂತ್ರ್ಯ ಹೋರಾಟಗಾರ, ಯಕ್ಷಗಾನದ ನವಯುಗದ ಪ್ರವರ್ತಕರಾದ ಮಲ್ಪೆ ಶಂಕರನಾರಾಯಣ ಸಾಮಗರು (ದೊಡ್ಡ ಸಾಮಗರು) ಉತ್ತಮ ಸಂಸ್ಕಾರದ ಪ್ರತೀಕವಾಗಿದ್ದಾರೆ ಎಂದು ಕಾಸರಗೋಡಿನ ಎಡನೀರು ಮಠದ ಸಚ್ಚಿದಾನಂದ ಭಾರತಿ ಸ್ವಾಮೀಜಿ ಹೇಳಿದರು.</p>.<p>ಮಲ್ಪೆ ಶಂಕರನಾರಾಯಣ ಸಾಮಗರ ಜೀವನ ದರ್ಶನವನ್ನು ಕಟ್ಟಿಕೊಡುವ ದಿನೇಶ ಉಪ್ಪೂರ ರಚಿಸಿರುವ ‘ದೊಡ್ಡ ಸಾಮಗರ ನಾಲ್ಮೊಗ’ ಗ್ರಂಥವನ್ನು ಉಡುಪಿಯ ಯಕ್ಷಗಾನ ಕಲಾರಂಗದ ನೂತನ ಐವೈಸಿ ಸಭಾಗ್ರಹದಲ್ಲಿ ಶನಿವಾರ ಲೋಕಾರ್ಪಣೆ ಮಾಡಿ ಮಾತನಾಡಿದರು.</p>.<p>ದೊಡ್ಡ ಸಾಮಗರಿಗೂ ಎಡನೀರು ಮಠಕ್ಕೂ ಅವಿನಾಭಾವ ಸಂಬಂಧವಿದೆ. ಅವರು ಕೇಶವಾನಂದ ಭಾರತಿ ಸ್ವಾಮೀಜಿಗೆ ಆಪ್ತರಾಗಿದ್ದರು. ಗಾಂಧಿವಾದಿಯಾಗಿದ್ದ ದೊಡ್ಡ ಸಾಮಗರು ಬದುಕಿನುದ್ದಕ್ಕೂ ಅದನ್ನು ಪಾಲಿಸಿದವರು. ಅವರ ವ್ಯಕ್ತಿತ್ವವು ಅನುಕರಣೀಯವಾಗಿತ್ತು ಎಂದು ಬಣ್ಣಿಸಿದರು.</p>.<p>ದೊಡ್ಡ ಕಲಾವಿದರಾದರೂ ಸರಳತೆಯಿಂದ ಬದುಕಿದ್ದರು. ಅವರ ಕುರಿತು ಇಂತಹ ಕೃತಿ ಲೋಕಾರ್ಪಣೆಯಾಗಿರುವುದು ನಿಜಕ್ಕೂ ಸಂತಸದ ವಿಷಯ. ಮರೆಯಾದ ಹಲವಾರು ಯಕ್ಷಗಾನ ದಿಗ್ಗಜರ ಕುರಿತು ಇಂತಹ ಕೃತಿಗಳು ರಚನೆಯಾದರೆ ಮುಂದಿನ ಪೀಳಿಗೆಗೂ ಅವರ ಮಹತ್ವ ತಿಳಿಯಲಿದೆ ಎಂದರು.</p>.<p>ಮಾಹೆಯ ಸಹಕುಲಾಧಿಪತಿ ಡಾ. ಎಚ್.ಎಸ್.ಬಲ್ಲಾಳ್ ಅಧ್ಯಕ್ಷತೆ ವಹಿಸಿದ್ದರು. ಪ್ರೊ.ಮುರಳೀಧರ ಉಪಾಧ್ಯ ಹಿರಿಯಡ್ಕ ಅವರು ಪುಸ್ತಕ ಪರಿಚಯ ಮಾಡಿದರು.</p>.<p>ಪ್ರಭಾಕರ ಜೋಶಿ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಮಾಹೆ ಸಹಕುಲಾಧಿಪತಿ ಡಾ. ನಾರಾಯಣ ಸಭಾಹಿತ್, ಮಣಿಪಾಲ ಯುನಿವರ್ಸಲ್ ಪ್ರೆಸ್ನ ಸಂಪಾದಕಿ ನೀತಾ ಇನಾಂದಾರ್, ಪ್ರದೀಪ ಕುಮಾರ್ ಕಲ್ಕೂರ , ಕಲಾವಿದ ಕೋಳ್ಯೂರು ರಾಮಚಂದ್ರ ರಾವ್, ಸಾಹಿತಿಗಳಾದ ಭಾಮ ಸಾಮಗ, ದಿನೇಶ್ ಉಪ್ಪೂರ ಉಪಸ್ಥಿತರಿದ್ದರು. ಎಂ.ಎಲ್.ಸಾಮಗ ಸ್ವಾಗತಿಸಿದರು.</p>.<p>ಕಾರ್ಯಕ್ರಮದ ಬಳಿಕ ಯಕ್ಷಗಾನ ತಾಳಮದ್ದಳೆ ‘ಶಲ್ಯ ಸಾರಥ್ಯ’ವನ್ನು ಕಲಾವಿದರಾದ ರವಿಚಂದ್ರ ಕನ್ನಡಿಕಟ್ಟೆ, ಚೈತನ್ಯಕೃಷ್ಣ ಪದ್ಯಾಣ, ಪುತ್ತಿಗೆ ಕೌಶಿಕ್ ರಾವ್, ಪ್ರಭಾಕರ ಜೋಶಿ, ಸರ್ಪಂಗಳ ಈಶ್ವರ ಭಟ್, ಮತ್ತು ಹಿರಣ್ಯ ವೆಂಕಟೇಶ ಭಟ್ ನಡೆಸಿಕೊಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>