ಹೊಸ ಮರಳು ನೀತಿ 2020 ಮತ್ತು 2021ರ ಪ್ರಕಾರ ಮೊದಲ, ಎರಡನೇ ಮತ್ತು ಮೂರನೇ ಶ್ರೇಣಿಯ ಹಳ್ಳ ಮತ್ತು ತೊರೆಗಳಲ್ಲಿರುವ ಮರಳು ನಿಕ್ಷೇಪಗಳಲ್ಲಿ ಲಭ್ಯವಿರುವ ಮರಳನ್ನು ತೆಗೆಯಲು ಅವಕಾಶ ಇದೆ. ಅದರಂತೆ ಜಿಲ್ಲೆಯ ಕಾರ್ಕಳ, ಹೆಬ್ರಿ, ಕಾಪು, ಕುಂದಾಪುರ ಮತ್ತು ಬೈಂದೂರು ತಾಲ್ಲೂ ಪಂಚಾಯಿತಿ ವ್ಯಾಪ್ತಿಯಲ್ಲಿ 35 ಮರಳು ನಿಕ್ಷೇಪಗಳಿದ್ದು 49,903 ಮೆಟ್ರಿಕ್ ಟನ್ ಮರಳು ಲಭ್ಯತೆ ಗುರುತಿಸಲಾಗಿದ್ದು, ಅ.5 ರಿಂದ ತೆಗೆಯಲು ಪಂಚಾಯಿತಿಗಳಲ್ಲಿ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.