ಕುಂದಾಪುರ, ಬ್ರಹ್ಮಾವರ ಮತ್ತು ಉಡುಪಿ ತಾಲ್ಲೂಕುಗಳ ವ್ಯಾಪ್ತಿಯಲ್ಲಿನ ವಾರಾಹಿ, ಸೌಪರ್ಣಿಕಾ, ಸ್ವರ್ಣಾ ಮತ್ತು ಸೀತಾ ನದಿ ಪಾತ್ರಗಳಲ್ಲಿ ಮರಳು ದಿಬ್ಬ ತೆರವುಗೊಳಿಸುವ ಕಾರ್ಯ ನಡೆಯುತ್ತಿದೆ. ಜಿಲ್ಲಾ ಕರಾವಳಿ ನಿಯಂತ್ರಣ ವಲಯ ಹೊರತುಪಡಿಸಿದ ಪ್ರದೇಶದಲ್ಲಿ ಮರಳು ಗಣಿಗಾರಿಕೆ ತೆಗೆಯಲಾಗುತ್ತಿದ್ದು ಸಾರ್ವಜನಿಕರಿಗೆ, ಅಭಿವೃದ್ಧಿ ಕಾಮಗಾರಿಗಳಿಗೆ ಮರಳು ಪಡೆಯಲು ಅವಕಾಶವಿದ್ದು, ಉಡುಪಿ ಇ ಸ್ಯಾಂಡ್ ಆ್ಯಪ್ ಮೂಲಕ ಸಾರ್ವಜನಿಕರು ಮರಳು ಪಡೆಯಬಹುದು.