ಬುಧವಾರ ಅಜ್ಜರಕಾಡು ಪುರಭವನದಲ್ಲಿ ಬುಧವಾರ ಸಾವರ್ಕರ್ ಸಾಹಿತ್ಯ ಸಂಭ್ರಮ ಕಾರ್ಯಕ್ರಮದ ಭಾಗವಾಗಿ ನಡೆದ ಸಂವಾದದಲ್ಲಿ ಮಾತನಾಡಿದ ಅವರು, ‘ದೇಶಸೇವೆ, ಸ್ವಾತಂತ್ರ್ಯ ಸಂಗ್ರಾಮಕ್ಕೆ ನೀಡಿದ ಕೊಡುಗೆಗಳನ್ನು ಗಮನಿಸಿದಾಗ ಸಾವರ್ಕರ್ ಗಾಂಧೀಜಿ ಅವರಿಗಿಂತ ಮೇಲೆ ನಿಲ್ಲುತ್ತಾರೆ. ಗಾಂಧೀಜಿ ಅವರ ಎಲ್ಲ ಕಾರ್ಯಗಳ ಹಿಂದೆ ವ್ಯವಸ್ಥಿತವಾದ ಸಿಂಡಿಕೇಟ್ ಕಾರ್ಯ ನಿರ್ವಹಿಸಿದರೆ, ಸಾವರ್ಕರ್ ಏಕಾಂಗಿಯಾಗಿ ಹೋರಾಟ ನಡೆಸಿದರು’ ಎಂದರು.