<p><strong>ಉಡುಪಿ</strong>: ಸಂಸ್ಕಾರ ಉಳ್ಳ ಭಾಷೆಯೇ ಸಂಸ್ಕೃತ ಭಾಷೆ. ಸಂಸ್ಕೃತ ಮತ್ತು ಸಂಸ್ಕೃತಿ ಈ ಎರಡೂ ಮಾನವನಿಗೆ ಅಗತ್ಯ. ಸಂಸ್ಕೃತಿಯುಕ್ತ ದಿನಾಚರಣೆ ಸಂಸ್ಕೃತ ದಿನಾಚರಣೆಯಾಗಬೇಕು ಎಂದು ಅದಮಾರು ಮಠಾಧೀಶ ವಿಶ್ವಪ್ರಿಯತೀರ್ಥ ಶ್ರೀಪಾದರು ಹೇಳಿದರು.</p>.<p>ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನಲ್ಲಿ ಈಚೆಗೆ ನಡೆದ ಸಂಸ್ಕೃತೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಎಲ್ಲರೂ ಸಂಸ್ಕೃತ ಅಧ್ಯಯನ ಮಾಡಿ, ಪ್ರತಿದಿನವೂ ಸಂಸ್ಕೃತೋತ್ಸವವನ್ನು ಆಚರಿಸಿದರೆ ಉತ್ತಮ ಎಂದು ಹೇಳಿದರು.</p>.<p>ಉಡುಪಿ ಎಸ್ಎಂಎಸ್ಪಿ ಸಂಸ್ಕೃತ ಮಹಾವಿದ್ಯಾಲಯದ ಉಪನ್ಯಾಸಕ ಅಜಿತ್ ಕುಮಾರ್ ಆಚಾರ್ಯ ಮಾತನಾಡಿದರು.</p>.<p>ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ರಾಮು ಎಲ್. ವಹಿಸಿದ್ದರು. ಮಂಗಳೂರು ವಿಶ್ವವಿದ್ಯಾಲಯದ ಸಂಸ್ಕೃತ ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳಿಸಿದ ಕಾಲೇಜಿನ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.</p>.<p>ಕಾಲೇಜಿನ ಸಂಯೋಜಕ ವಿನಯ್ ಕುಮಾರ್, ಸಂಸ್ಕೃತ ಉಪನ್ಯಾಸಕ ಅಶ್ವಿನ್ ಉಪಸ್ಥಿತರಿದ್ದರು.ಕಾಲೇಜಿನ ಸಂಸ್ಕೃತ ವಿಭಾಗದ ಮುಖ್ಯಸ್ಥ ರಮೇಶ ಟಿ.ಎಸ್. ಪ್ರಾಸ್ತಾವಿಕವಾಗಿ ಮಾತನಾಡಿದರು.</p>.<p>ಸಂಸ್ಕೃತ ಉಪನ್ಯಾಸಕ ಆನಂದ ಆಚಾರ್ಯ ಸನ್ಮಾನಿತರ ಪಟ್ಟಿಯನ್ನು ವಾಚಿಸಿದರು. ಅವನಿ ಹಾಗೂ ಭಾರ್ಗವಿ ಸಂಸ್ಕೃತ ಗೀತ ಗಾಯನ ಮಾಡಿದರು. ಕೀರ್ತನಾ ಕಾರ್ಯಕ್ರಮ ನಿರೂಪಿಸಿದರು. ರಾಜರಾಜೇಶ್ವರಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ</strong>: ಸಂಸ್ಕಾರ ಉಳ್ಳ ಭಾಷೆಯೇ ಸಂಸ್ಕೃತ ಭಾಷೆ. ಸಂಸ್ಕೃತ ಮತ್ತು ಸಂಸ್ಕೃತಿ ಈ ಎರಡೂ ಮಾನವನಿಗೆ ಅಗತ್ಯ. ಸಂಸ್ಕೃತಿಯುಕ್ತ ದಿನಾಚರಣೆ ಸಂಸ್ಕೃತ ದಿನಾಚರಣೆಯಾಗಬೇಕು ಎಂದು ಅದಮಾರು ಮಠಾಧೀಶ ವಿಶ್ವಪ್ರಿಯತೀರ್ಥ ಶ್ರೀಪಾದರು ಹೇಳಿದರು.</p>.<p>ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನಲ್ಲಿ ಈಚೆಗೆ ನಡೆದ ಸಂಸ್ಕೃತೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಎಲ್ಲರೂ ಸಂಸ್ಕೃತ ಅಧ್ಯಯನ ಮಾಡಿ, ಪ್ರತಿದಿನವೂ ಸಂಸ್ಕೃತೋತ್ಸವವನ್ನು ಆಚರಿಸಿದರೆ ಉತ್ತಮ ಎಂದು ಹೇಳಿದರು.</p>.<p>ಉಡುಪಿ ಎಸ್ಎಂಎಸ್ಪಿ ಸಂಸ್ಕೃತ ಮಹಾವಿದ್ಯಾಲಯದ ಉಪನ್ಯಾಸಕ ಅಜಿತ್ ಕುಮಾರ್ ಆಚಾರ್ಯ ಮಾತನಾಡಿದರು.</p>.<p>ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ರಾಮು ಎಲ್. ವಹಿಸಿದ್ದರು. ಮಂಗಳೂರು ವಿಶ್ವವಿದ್ಯಾಲಯದ ಸಂಸ್ಕೃತ ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳಿಸಿದ ಕಾಲೇಜಿನ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.</p>.<p>ಕಾಲೇಜಿನ ಸಂಯೋಜಕ ವಿನಯ್ ಕುಮಾರ್, ಸಂಸ್ಕೃತ ಉಪನ್ಯಾಸಕ ಅಶ್ವಿನ್ ಉಪಸ್ಥಿತರಿದ್ದರು.ಕಾಲೇಜಿನ ಸಂಸ್ಕೃತ ವಿಭಾಗದ ಮುಖ್ಯಸ್ಥ ರಮೇಶ ಟಿ.ಎಸ್. ಪ್ರಾಸ್ತಾವಿಕವಾಗಿ ಮಾತನಾಡಿದರು.</p>.<p>ಸಂಸ್ಕೃತ ಉಪನ್ಯಾಸಕ ಆನಂದ ಆಚಾರ್ಯ ಸನ್ಮಾನಿತರ ಪಟ್ಟಿಯನ್ನು ವಾಚಿಸಿದರು. ಅವನಿ ಹಾಗೂ ಭಾರ್ಗವಿ ಸಂಸ್ಕೃತ ಗೀತ ಗಾಯನ ಮಾಡಿದರು. ಕೀರ್ತನಾ ಕಾರ್ಯಕ್ರಮ ನಿರೂಪಿಸಿದರು. ರಾಜರಾಜೇಶ್ವರಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>