<p><strong>ಉಡುಪಿ: ಶ್ರೀ</strong>ಕೃಷ್ಣನ ಸಂದೇಶವಿರುವ ಭಗವದ್ಗೀತೆಯಲ್ಲಿ ಜೀವನ ಪಾಠವಿದೆ. ಅದು ನಮ್ಮ ಎಲ್ಲ ಸಮಸ್ಯೆಗಳಿಗೆ ಉತ್ತರ ನೀಡಬಲ್ಲುದು ಎಂದು ಒಡಿಯೂರು ಗುರುದೇವ ದತ್ತ ಸಂಸ್ಥಾನದ ಗುರು ದೇವಾನಂದ ಸ್ವಾಮೀಜಿ ಹೇಳಿದರು.</p>.<p>ಪರ್ಯಾಯ ಪುತ್ತಿಗೆ ಮಠ ಆಶ್ರಯದಲ್ಲಿ ನಡೆಯುತ್ತಿರುವ ಬೃಹತ್ ಗೀತೋತ್ಸವದ ಅಂಗವಾಗಿ ಶುಕ್ರವಾರ ನಡೆದ ಸಂತ ಸಂದೇಶ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ತ್ಯಾಗಮಯ ಜೀವನ ನಮ್ಮದಾಗಬೇಕು. ವ್ಯಕ್ತಿಯ ಬೆಳವಣಿಗೆಗೆ ಭಗವದನುಗ್ರಹ ಅಗತ್ಯ ಎಂದರು.</p>.<p>ಪರ್ಯಾಯ ಪುತ್ತಿಗೆ ಮಠಾಧೀಶ ಸುಗುಣೇಂದ್ರತೀರ್ಥ ಶ್ರೀಪಾದರು ಮಾತನಾಡಿ, ಗುರು- ಹಿರಿಯರನ್ನು ಗೌರವಿಸಿ, ಅವರ ಹಿತ ನುಡಿಗಳನ್ನು ಆಲಿಸಬೇಕು ಎಂದು ಹೇಳಿದರು.</p>.<p>ಜಗತ್ತಿನಲ್ಲಿ ಶೇ 99ರಷ್ಟು ಜನ ಅನುಸರಣೆ ಮಾಡುವವರಾಗಿದ್ದಾರೆ. ಶೇ 1ರಷ್ಟು ಜನರು ಮಾತ್ರ ತಿಳಿದುಕೊಂಡವರಿದ್ದಾರೆ. ಅವರು ದಾರಿ ತಪ್ಪಿದರೆ ಎಲ್ಲರೂ ದಾರಿ ತಪ್ಪುತ್ತಾರೆ. ಇಂದು ಜಗತ್ತು ಮುಂದುವರಿಯುತ್ತಿದೆ ಎಂದು ಹೇಳುತ್ತಾರೆ. ಆದರೆ ಹೊರಗಡೆ ಮುಂದುವರಿಯುತ್ತಿದ್ದರೂ ಒಳಗಡೆ ಕುಸಿಯುತ್ತಿದೆ ಎಂದು ಹೇಳಿದರು.</p>.<p>ಜನರಲ್ಲಿ ವಿಮರ್ಶೆ ಮಾಡುವ ಶಕ್ತಿ ಕುಂಠಿತವಾಗುತ್ತಿದ್ದೆ. ಮೊಬೈಲ್ ಬಂದ ಮೇಲೆ ಯಾರ ಮನಸ್ಸೂ ಕೆಲಸ ಮಾಡುತ್ತಿಲ್ಲ. ಹಾಗಾಗಿ ಬೌದ್ಧಿಕವಾಗಿ ಕುಸಿಯುತ್ತಿದ್ದೇವೆ ಮತ್ತು ಎಲ್ಲದಕ್ಕೂ ಯಂತ್ರಗಳನ್ನು ಅವಲಂಬಿಸುತ್ತಿದ್ದೇವೆ ಎಂದು ತಿಳಿಸಿದರು.</p>.<p>ಮನುಷ್ಯನಿಗೆ ಹುಟ್ಟಿದಾಗಲೇ ಆಗ್ರಹಗಳು ಇರುತ್ತವೆ. ಹಾಗಾಗಿ ಎಲ್ಲಾ ಮತಗಳು ಉಳಿದುಕೊಂಡಿವೆ. ನಮ್ಮ ಮತವೇ ಶ್ರೇಷ್ಠ ಎನ್ನುವವರೇ ಹೆಚ್ಚು. ಸತ್ಯ ಯಾವುದು ಎಂಬುದು ಯಾರಿಗೂ ಬೇಡವಾಗಿದೆ ಎಂದರು.</p>.<p>ಪರ್ಯಾಯ ಪುತ್ತಿಗೆ ಮಠದ ಕಿರಿಯ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು, ಮಠದ ದಿವಾನ ನಾಗರಾಜ ಆಚಾರ್ಯ, ಅಂತರರಾಷ್ಟ್ರೀಯ ಕಾರ್ಯದರ್ಶಿ ಪ್ರಸನ್ನಾಚಾರ್ಯ ಉಪಸ್ಥಿತರಿದ್ದರು. ಡಾ.ಗೋಪಾಲಾಚಾರ್ಯ ನಿರೂಪಿಸಿದರು.</p>.<div><blockquote>ಇಂದು ಮನುಷ್ಯ ಸ್ವಂತಿಕೆಯನ್ನು ಕಳೆದುಕೊಳ್ಳುತ್ತಿದ್ದಾನೆ. ಯಾವುದು ಸತ್ಯ ಯಾವುದೇ ಸುಳ್ಳು ಎಂಬುದನ್ನು ಚಿಂತನೆ ಮಾಡುವುದಿಲ್ಲ </blockquote><span class="attribution">ಸುಗುಣೇಂದ್ರತೀರ್ಥ ಸ್ವಾಮೀಜಿ ಪರ್ಯಾಯ ಪುತ್ತಿಗೆ ಮಠಾಧೀಶ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ: ಶ್ರೀ</strong>ಕೃಷ್ಣನ ಸಂದೇಶವಿರುವ ಭಗವದ್ಗೀತೆಯಲ್ಲಿ ಜೀವನ ಪಾಠವಿದೆ. ಅದು ನಮ್ಮ ಎಲ್ಲ ಸಮಸ್ಯೆಗಳಿಗೆ ಉತ್ತರ ನೀಡಬಲ್ಲುದು ಎಂದು ಒಡಿಯೂರು ಗುರುದೇವ ದತ್ತ ಸಂಸ್ಥಾನದ ಗುರು ದೇವಾನಂದ ಸ್ವಾಮೀಜಿ ಹೇಳಿದರು.</p>.<p>ಪರ್ಯಾಯ ಪುತ್ತಿಗೆ ಮಠ ಆಶ್ರಯದಲ್ಲಿ ನಡೆಯುತ್ತಿರುವ ಬೃಹತ್ ಗೀತೋತ್ಸವದ ಅಂಗವಾಗಿ ಶುಕ್ರವಾರ ನಡೆದ ಸಂತ ಸಂದೇಶ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ತ್ಯಾಗಮಯ ಜೀವನ ನಮ್ಮದಾಗಬೇಕು. ವ್ಯಕ್ತಿಯ ಬೆಳವಣಿಗೆಗೆ ಭಗವದನುಗ್ರಹ ಅಗತ್ಯ ಎಂದರು.</p>.<p>ಪರ್ಯಾಯ ಪುತ್ತಿಗೆ ಮಠಾಧೀಶ ಸುಗುಣೇಂದ್ರತೀರ್ಥ ಶ್ರೀಪಾದರು ಮಾತನಾಡಿ, ಗುರು- ಹಿರಿಯರನ್ನು ಗೌರವಿಸಿ, ಅವರ ಹಿತ ನುಡಿಗಳನ್ನು ಆಲಿಸಬೇಕು ಎಂದು ಹೇಳಿದರು.</p>.<p>ಜಗತ್ತಿನಲ್ಲಿ ಶೇ 99ರಷ್ಟು ಜನ ಅನುಸರಣೆ ಮಾಡುವವರಾಗಿದ್ದಾರೆ. ಶೇ 1ರಷ್ಟು ಜನರು ಮಾತ್ರ ತಿಳಿದುಕೊಂಡವರಿದ್ದಾರೆ. ಅವರು ದಾರಿ ತಪ್ಪಿದರೆ ಎಲ್ಲರೂ ದಾರಿ ತಪ್ಪುತ್ತಾರೆ. ಇಂದು ಜಗತ್ತು ಮುಂದುವರಿಯುತ್ತಿದೆ ಎಂದು ಹೇಳುತ್ತಾರೆ. ಆದರೆ ಹೊರಗಡೆ ಮುಂದುವರಿಯುತ್ತಿದ್ದರೂ ಒಳಗಡೆ ಕುಸಿಯುತ್ತಿದೆ ಎಂದು ಹೇಳಿದರು.</p>.<p>ಜನರಲ್ಲಿ ವಿಮರ್ಶೆ ಮಾಡುವ ಶಕ್ತಿ ಕುಂಠಿತವಾಗುತ್ತಿದ್ದೆ. ಮೊಬೈಲ್ ಬಂದ ಮೇಲೆ ಯಾರ ಮನಸ್ಸೂ ಕೆಲಸ ಮಾಡುತ್ತಿಲ್ಲ. ಹಾಗಾಗಿ ಬೌದ್ಧಿಕವಾಗಿ ಕುಸಿಯುತ್ತಿದ್ದೇವೆ ಮತ್ತು ಎಲ್ಲದಕ್ಕೂ ಯಂತ್ರಗಳನ್ನು ಅವಲಂಬಿಸುತ್ತಿದ್ದೇವೆ ಎಂದು ತಿಳಿಸಿದರು.</p>.<p>ಮನುಷ್ಯನಿಗೆ ಹುಟ್ಟಿದಾಗಲೇ ಆಗ್ರಹಗಳು ಇರುತ್ತವೆ. ಹಾಗಾಗಿ ಎಲ್ಲಾ ಮತಗಳು ಉಳಿದುಕೊಂಡಿವೆ. ನಮ್ಮ ಮತವೇ ಶ್ರೇಷ್ಠ ಎನ್ನುವವರೇ ಹೆಚ್ಚು. ಸತ್ಯ ಯಾವುದು ಎಂಬುದು ಯಾರಿಗೂ ಬೇಡವಾಗಿದೆ ಎಂದರು.</p>.<p>ಪರ್ಯಾಯ ಪುತ್ತಿಗೆ ಮಠದ ಕಿರಿಯ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು, ಮಠದ ದಿವಾನ ನಾಗರಾಜ ಆಚಾರ್ಯ, ಅಂತರರಾಷ್ಟ್ರೀಯ ಕಾರ್ಯದರ್ಶಿ ಪ್ರಸನ್ನಾಚಾರ್ಯ ಉಪಸ್ಥಿತರಿದ್ದರು. ಡಾ.ಗೋಪಾಲಾಚಾರ್ಯ ನಿರೂಪಿಸಿದರು.</p>.<div><blockquote>ಇಂದು ಮನುಷ್ಯ ಸ್ವಂತಿಕೆಯನ್ನು ಕಳೆದುಕೊಳ್ಳುತ್ತಿದ್ದಾನೆ. ಯಾವುದು ಸತ್ಯ ಯಾವುದೇ ಸುಳ್ಳು ಎಂಬುದನ್ನು ಚಿಂತನೆ ಮಾಡುವುದಿಲ್ಲ </blockquote><span class="attribution">ಸುಗುಣೇಂದ್ರತೀರ್ಥ ಸ್ವಾಮೀಜಿ ಪರ್ಯಾಯ ಪುತ್ತಿಗೆ ಮಠಾಧೀಶ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>