ಪಲಿಮಾರು ಶ್ರೀಗಳ ಸಂತಾಪ:ಚಿಕ್ಕ ವಯಸ್ಸಿನಿಂದಲೇ ದೇಶ ಭಕ್ತಿಯನ್ನು ಮೈಗೂಡಿಸಿಕೊಂಡಿದ್ದ ದೇಶ ಸೇವೆಗೆ ಜೀವನವನ್ನೇ ಮುಡಿಪಿಟ್ಟಿದ್ದ ಸುಷ್ಮಾ ಸ್ವರಾಜ್, ವಿವಿಧ ಜವಾಬ್ದಾರಿಯುತ ಹುದ್ದೆಗಳನ್ನು ಅಲಂಕರಿಸಿ ಯಶಸ್ವಿಯಾಗಿ ನಿಭಾಯಿಸಿದ್ದರು. ಸರಳ ಸಜ್ಜನಿಕೆಯ ಧೀಮಂತ ನಾಯಕಿಯ ನಿಧನ ದುಃಖ ತಂದಿದೆ. ಮೃತರ ಕುಟುಂಬ ವರ್ಗಕ್ಕೆ ದುಃಖ ಸಹಿಸುವ ಶಕ್ತಿ ಸಿಗಲಿ, ಆತ್ಮಕ್ಕೆ ಸದ್ಗತಿ ದೊರೆಯಲಿ ಎಂದು ಪರ್ಯಾಯ ಪಲಿಮಾರು ಶ್ರೀಗಳು ತಿಳಿಸಿದ್ದಾರೆ.