ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾವರ್ಕರ್ ಫ್ಲೆಕ್ಸ್‌ಗೆ ಕಾಂಗ್ರೆಸ್‌ ಆಕ್ಷೇಪ

Last Updated 16 ಆಗಸ್ಟ್ 2022, 16:30 IST
ಅಕ್ಷರ ಗಾತ್ರ

ಉಡುಪಿ: ನಗರದ ಹೃದಯ ಭಾಗದಲ್ಲಿರುವ ಬ್ರಹ್ಮಗಿರಿಯ ವೃತ್ತದಲ್ಲಿ ಸಾವರ್ಕರ್‌ ಫ್ಲೆಕ್ಸ್‌ ಅಳವಡಿಕೆಗೆ ಕಾಂಗ್ರೆಸ್‌ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

ಮಂಗಳವಾರ ಫ್ಲೆಕ್ಸ್‌ ಹಾಕಿರುವ ಸ್ಥಳಕ್ಕೆ ಭೇಟಿನೀಡಿದ ಮುಖಂಡರು ಸಾರ್ವಜನಿಕ ಸ್ಥಳಗಳಲ್ಲಿ ವಿವಾದಾತ್ಮಕ ವ್ಯಕ್ತಿಗಳ ಫ್ಲೆಕ್ಸ್‌ ಹಾಕಿದರೆ ಶಾಂತಿಗೆ ಭಂಗ ಉಂಟಾಗುವ ಸಾದ್ಯತೆಗಳಿದ್ದು ಕೂಡಲೇ ತೆರವುಗೊಳಿಸಬೇಕು ಎಂದು ಆಗ್ರಹಿಸಿದರು.

ಬಳಿಕ ಉಡುಪಿ ನಗರಸಭೆ ಕಚೇರಿಗೆ ತೆರಳಿ ಫ್ಲೆಕ್ಸ್‌ಗಳ ತೆರವಿಗೆ ಮನವಿ ಸಲ್ಲಿಸಿದರು. ಈ ಸಂದರ್ಭ ಪ್ರಖ್ಯಾತ್ ಶೆಟ್ಟಿ, ಯತೀಶ್ ಕರ್ಕೆರಾ ಸೇರಿದಂತೆ ಹಲವರು ಮುಖಂಡರು ಇದ್ದರು.

ದೇಶದಲ್ಲಿ ಎಲ್ಲ ಜಾತಿ ಧರ್ಮಗಳ ಜನರು ಶಾಂತಿ, ಸಹಬಾಳ್ವೆಯಿಂದ ಇರಬೇಕು. ಆದರೆ, ಕೆಲವರು ಸಮಾಜದಲ್ಲಿ ಪ್ರಚೋದಾತ್ಮಕ ಕಾರ್ಯಕ್ಕೆ ಮುಂದಾಗುತ್ತಿರುವುದು ಖಂಡನೀಯ. ಹಿಂದೂ ರಾಷ್ಟ್ರವನ್ನಾಗಿ ಮಾಡುವುದಾಗಿ ಫ್ಲೆಕ್ಸ್‌ ಹಾಕಿರುವ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಸಹಬಾಳ್ವೆ ಸಂಘಟನೆಯ ಅಮೃತ್ ಶೆಣೈ ಒತ್ತಾಯಿಸಿದ್ದಾರೆ.

ಶಿವಮೊಗ್ಗದಲ್ಲಿ ನಡೆದ ಅಹಿತಕರ ಘಟನೆ ಬೆನ್ನಲ್ಲೇ ಉಡುಪಿಯಲ್ಲಿ ನಾಕಾಬಂದಿ ಹಾಕಲಾಗಿದ್ದು, ವಾಹನಗಳ ತಪಾಸಣೆ ನಡೆಯುತ್ತಿದೆ. ಸಾವರ್ಕರ್ ಫ್ಲೆಕ್ಸ್‌ ಹಾಕಿರುವ ಸ್ಥಳಗಳಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT