ಶಾಸಕ ವಿ.ಸುನೀಲ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ತಾಲ್ಲೂಕಿನ 34 ಗ್ರಾಮ ಪಂಚಾಯಿತಿಗಳಿಗೆ ಸಾಂಕೇತಿಕವಾಗಿ ಗಿಡಗಳನ್ನು ವಿತರಿಸಲಾಯಿತು. ಕರಾವಳಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಅರಣ್ಯ ಪರಿಸರ ಇಲಾಖೆ ಪ್ರಧಾನ ಕಾರ್ಯದರ್ಶಿ ಸಂಜಯ್ ಬಿಜೂರು, ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮಿಲ್ಲೋ ಟ್ಯಾಗೋ, ಮಂಗಳೂರು ವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಾಶ್ ಎಸ್ ನೆತಲ್ಕರ್, ಕುಂದಾಪುರ ವಿಭಾಗ ಉಪ ಅರಣ್ಯ ಸಂರಕ್ಷಣಾಧಿಕಾರಿ ಆಶಿಶ್ ರೆಡ್ಡಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ. ಪ್ರಶಾಂತ್ ಪಿಕೆಎಂ, ಹಿರಿಯ ವಕೀಲ ಎಂ.ಕೆ. ವಿಜಯಕುಮಾರ್, ಗ್ರಾಮ ಪಂಚಾಯಿತಿ ಅಧ್ಯಕ್ಷ ಗಿರೀಶ ಅಮೀನ್, ಎಪಿಎಂಸಿ ಅಧ್ಯಕ್ಷ ರತ್ನಾಕರ ಅಮೀನ್, ಮಹಾವೀರ ಹೆಗ್ಡೆ, ಸುಮಿತ್ ಶೆಟ್ಟಿ, ಉದಯ ಎಸ್.ಕೋಟ್ಯಾನ್ ಇದ್ದರು.