<p><strong>ಉಡುಪಿ: </strong>ದಲಿತರಿಗೆ ಅಕ್ಷರ ಕಲಿಸಿಕೊಟ್ಟ ಸಾವಿತ್ರಿ ಜ್ಯೋತಿ ಬಾಫುಲೆ ಅವರ ಹಾದಿಯಲ್ಲಿ ಸಮುದಾಯದ ಮಹಿಳೆಯರು ಸಾಗಬೇಕು ಎಂದು ದಲಿತ ಚಿಂತಕ ಜಯನ್ ಮಲ್ಪೆ ಹೇಳಿದರು.</p>.<p>ಭಾನುವಾರ ಮಲ್ಪೆಯ ಸರಸ್ವತಿ ಬಯಲು ರಂಗಮಂದಿರದಲ್ಲಿ ಅಂಬೇಡ್ಕರ್ ಯುವಸೇನೆ ಆಯೋಜಿಸಿದ್ದ ಸಾವಿತ್ರಿ ಬಾಫುಲೆ 190ನೇ ಜನ್ಮದಿನದ ಉದ್ಘಾಟಿಸಿ ಮಾತನಾಡಿದರು.</p>.<p>ಸಾವಿತ್ರಿ ಫುಲೆ ಜಾತಿವ್ಯವಸ್ಥೆಯಲ್ಲಿ ಅನುಭವಿಸಿದ ನೋವನ್ನು ದಲಿತ ಮಹಿಳೆಯರು ಅರ್ಥೈಸಿಕೊಂಡಿಲ್ಲ. ಬಡವರ ಶೈಕ್ಷಣಿಕ ಅಭಿವೃದ್ಧಿಗೆ ಅನುಭವಿಸಿದ ನೋವವನ್ನು ಸಮುದಾಯ ಸ್ಮರಿಸಿಬೇಕಿದೆ. ವಿದ್ಯೆನೀಡಿದ ತಾಯಿಯನ್ನು ಮರೆಯಬಾರದು ಎಂದರು.</p>.<p>ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಂಬೇಡ್ಕರ್ ಯುವಸೇನೆಯ ಜಿಲ್ಲಾಧ್ಯಕ್ಷ ಹರೀಸ್ ಸಾಲ್ಯಾನ್ ವಹಿಸಿದ್ದರು.</p>.<p>ದಲಿತ ಮುಖಂಡ ಸುಂದರ ಕಪ್ಪೆಟ್ಟು ಮಾತನಾಡಿ, ಸಮುದಾಯದ ನಾಯಕರು ಮೊದಲು ಸಾವಿತ್ರಿ ಜ್ಯೋತಿ ಬಾಫುಲೆ ಅವರನ್ನು ಅರ್ಥೈಸಿಕೊಡುವ ಕೆಲಸ ಮಾಡಬೇಕು. ಅಂಬೇಡ್ಕರ್ ಹೆಸರಿನಲ್ಲಿ ತಿರುಕನ ಕನಸು ಕಾಣಬಾರದು ಎಂದರು.</p>.<p>ಅತಿಥಿಗಳಾಗಿ ಸಮಾಜ ಸೇವಕಿ ಶಾರದಾ ನೆರ್ಗಿ, ಶಶಿಕಲಾ ತೊಟ್ಟಂ, ರಾಜೇಶ್ ಕೆಮ್ಮಣ್ಣು, ಯುವನಾಯಕ ಸುಮಿತ್ ನೆರ್ಗಿ, ವಿನೋದ, ದಿನೇಶ್ ಜವನೆರಕಟ್ಟೆ, ಕೃಷ್ಣ ಶ್ರೀಯಾನ್, ಸಂತೋಷ್ ಕಪ್ಪೆಟ್ಟು, ದೀಪಕ್ ಕೊಡವೂರು, ಸುಮ ನೆರ್ಗಿ, ವೀಣಾ, ಪೂರ್ಣಿಮಾ ಶಂಕರ್, ಸಬಿತಾ, ಶಾರದಾ, ಸುಜಾತಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ: </strong>ದಲಿತರಿಗೆ ಅಕ್ಷರ ಕಲಿಸಿಕೊಟ್ಟ ಸಾವಿತ್ರಿ ಜ್ಯೋತಿ ಬಾಫುಲೆ ಅವರ ಹಾದಿಯಲ್ಲಿ ಸಮುದಾಯದ ಮಹಿಳೆಯರು ಸಾಗಬೇಕು ಎಂದು ದಲಿತ ಚಿಂತಕ ಜಯನ್ ಮಲ್ಪೆ ಹೇಳಿದರು.</p>.<p>ಭಾನುವಾರ ಮಲ್ಪೆಯ ಸರಸ್ವತಿ ಬಯಲು ರಂಗಮಂದಿರದಲ್ಲಿ ಅಂಬೇಡ್ಕರ್ ಯುವಸೇನೆ ಆಯೋಜಿಸಿದ್ದ ಸಾವಿತ್ರಿ ಬಾಫುಲೆ 190ನೇ ಜನ್ಮದಿನದ ಉದ್ಘಾಟಿಸಿ ಮಾತನಾಡಿದರು.</p>.<p>ಸಾವಿತ್ರಿ ಫುಲೆ ಜಾತಿವ್ಯವಸ್ಥೆಯಲ್ಲಿ ಅನುಭವಿಸಿದ ನೋವನ್ನು ದಲಿತ ಮಹಿಳೆಯರು ಅರ್ಥೈಸಿಕೊಂಡಿಲ್ಲ. ಬಡವರ ಶೈಕ್ಷಣಿಕ ಅಭಿವೃದ್ಧಿಗೆ ಅನುಭವಿಸಿದ ನೋವವನ್ನು ಸಮುದಾಯ ಸ್ಮರಿಸಿಬೇಕಿದೆ. ವಿದ್ಯೆನೀಡಿದ ತಾಯಿಯನ್ನು ಮರೆಯಬಾರದು ಎಂದರು.</p>.<p>ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಂಬೇಡ್ಕರ್ ಯುವಸೇನೆಯ ಜಿಲ್ಲಾಧ್ಯಕ್ಷ ಹರೀಸ್ ಸಾಲ್ಯಾನ್ ವಹಿಸಿದ್ದರು.</p>.<p>ದಲಿತ ಮುಖಂಡ ಸುಂದರ ಕಪ್ಪೆಟ್ಟು ಮಾತನಾಡಿ, ಸಮುದಾಯದ ನಾಯಕರು ಮೊದಲು ಸಾವಿತ್ರಿ ಜ್ಯೋತಿ ಬಾಫುಲೆ ಅವರನ್ನು ಅರ್ಥೈಸಿಕೊಡುವ ಕೆಲಸ ಮಾಡಬೇಕು. ಅಂಬೇಡ್ಕರ್ ಹೆಸರಿನಲ್ಲಿ ತಿರುಕನ ಕನಸು ಕಾಣಬಾರದು ಎಂದರು.</p>.<p>ಅತಿಥಿಗಳಾಗಿ ಸಮಾಜ ಸೇವಕಿ ಶಾರದಾ ನೆರ್ಗಿ, ಶಶಿಕಲಾ ತೊಟ್ಟಂ, ರಾಜೇಶ್ ಕೆಮ್ಮಣ್ಣು, ಯುವನಾಯಕ ಸುಮಿತ್ ನೆರ್ಗಿ, ವಿನೋದ, ದಿನೇಶ್ ಜವನೆರಕಟ್ಟೆ, ಕೃಷ್ಣ ಶ್ರೀಯಾನ್, ಸಂತೋಷ್ ಕಪ್ಪೆಟ್ಟು, ದೀಪಕ್ ಕೊಡವೂರು, ಸುಮ ನೆರ್ಗಿ, ವೀಣಾ, ಪೂರ್ಣಿಮಾ ಶಂಕರ್, ಸಬಿತಾ, ಶಾರದಾ, ಸುಜಾತಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>