<p><strong>ಕುಂದಾಪುರ:</strong> ಬೈಂದೂರು ಶೈಕ್ಷಣಿಕ ವಲಯದ ಶಿರೂರು ಸರ್ಕಾರಿ ಹಿರಿಯ ಪ್ರಾಥಮಿಕ ಮೇಲ್ಪಂಕ್ತಿ (ಪೇಟೆ) ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷೆ ಜ್ಯೋತಿ ಜಯರಾಮ ಶೆಟ್ಟಿ ಎಂಬುವವರು ಪ್ರತಿ ದಿನ ವಿದ್ಯಾರ್ಥಿಗಳನ್ನು ತಾವೇ ಶಾಲೆಗೆ ಕರೆದುಕೊಂಡು ಬರುವ ಮೂಲಕ ಗಮನ ಸೆಳೆಯುತ್ತಿದ್ದಾರೆ.</p>.<p>ಜೋಗೂರು ನಿವಾಸಿ ಜ್ಯೋತಿ ಅವರು ಸ್ವಂತ ಹಣದಿಂದ ಕಾರು ಖರೀದಿಸಿ, ಕಳೆದೆರಡು ಶೈಕ್ಷಣಿಕ ವರ್ಷದಿಂದ ನಿತ್ಯ 40 ಮಕ್ಕಳನ್ನು ಶಾಲೆಗೆ ಕರೆತರುವ ಮತ್ತು ಮರಳಿ ಮನೆಗೆ ಕರೆದೊಯ್ಯುವ ಕಾಯಕದಲ್ಲಿ ನಿರತರಾಗಿದ್ದಾರೆ.</p>.<p>ಮೊದಲು ಶಾಲೆಯ ಮಕ್ಕಳನ್ನು ಕರೆ ತರಲು ರಿಕ್ಷಾ ವ್ಯವಸ್ಥೆ ಮಾಡಲಾಗಿತ್ತು. ಈಗ ಜ್ಯೋತಿ ಅವರು ಇಕೋ ಕಾರು ಖರೀದಿಸಿ, ನಿತ್ಯ ಬೆಳಿಗ್ಗೆ ಮೂರು ಟ್ರಿಪ್, ಸಂಜೆ ಮೂರು ಟ್ರಿಪ್ ಮೂಲಕ ಮಕ್ಕಳನ್ನು ಶಾಲೆಗೆ ಕರೆತಂದು, ವಾಪಾಸ್ ಮನೆಗೆ ಬಿಡುತ್ತಿದ್ದಾರೆ.</p>.<p>ಶಾಲೆಯಿಂದ ಅತೀ ದೂರದ ಹಣೆಬೆಟ್ಟು , ಜೋಗೂರು, ಹಣಬರಕೇರಿ, ಮೊಯ್ದಿನ್ ಪುರ, ಕೋಣ್ಮಕ್ಕಿ, ಮಾರ್ಕೆಟ್, ಕೋಣ್ಮಕ್ಕಿ ಕ್ರಾಸ್ನಿಂದಲೂ ಮಕ್ಕಳನ್ನು ಕಾರಿನಲ್ಲಿ ಕರೆದುಕೊಂಡು ಬರುತ್ತಾರೆ.</p>.<p>ಸುತ್ತಮುತ್ತಲಿನ ಮಕ್ಕಳು ಹಿಂದೆ ಖಾಸಗಿ ಶಾಲೆಯನಗನು ನೆಚ್ಚಿಕೊಂಡಿದ್ದರು. ಹತ್ತು ವರ್ಷಗಳಿಂದೀಚೆಗೆ ಶಾಲೆಯಲ್ಲಿ ಅಸ್ತಿತ್ವಕ್ಕೆ ಬಂದ ಶಾಲಾಭಿವೃದ್ಧಿ ಸಮಿತಿ ಪೋಷಕರನ್ನು ಮನವೊಲಿಸಿ ಮಕ್ಕಳನ್ನು ಶಾಲೆಗೆ ಕಳುಹಿಸುವಂತೆ ಮನವೊಲಿಸಿತು ಎಂದು ಎಸ್.ಡಿ.ಎಂ.ಸಿ ಉಪಾಧ್ಯಕ್ಷ ವಿನೋದ್ ಪೂಜಾರಿ ಸಾತೋಡಿ ತಿಳಿಸಿದರು.</p>.<p>ಕೊರೋನಾ ಸಂದರ್ಭ ಹಳ್ಳಿಗಳಿಗೆ ತೆರಳಿ ವಿದ್ಯಾರ್ಥಿಗಳಿಗೆ ‘ವಿದ್ಯಾಗಮ’ದಡಿ ಶಿಕ್ಷಕರು ಪಾಠ ಮಾಡಬೇಕಿದ್ದಾಗ ಅವರನ್ನು ನಾನೇ ರಿಕ್ಷಾದಲ್ಲಿ ಕರೆದೊಯ್ಯುತ್ತಿದ್ದೆ. ಇದೀಗ ಕಾರಿನಲ್ಲಿ ಮಕ್ಕಳನ್ನು ಶಾಲೆಗೆ ಕರೆತರುತ್ತಿದ್ದೇನೆ ಎಂದು ಜ್ಯೋತಿ ಜಯರಾಮ ಶೆಟ್ಟಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಂದಾಪುರ:</strong> ಬೈಂದೂರು ಶೈಕ್ಷಣಿಕ ವಲಯದ ಶಿರೂರು ಸರ್ಕಾರಿ ಹಿರಿಯ ಪ್ರಾಥಮಿಕ ಮೇಲ್ಪಂಕ್ತಿ (ಪೇಟೆ) ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷೆ ಜ್ಯೋತಿ ಜಯರಾಮ ಶೆಟ್ಟಿ ಎಂಬುವವರು ಪ್ರತಿ ದಿನ ವಿದ್ಯಾರ್ಥಿಗಳನ್ನು ತಾವೇ ಶಾಲೆಗೆ ಕರೆದುಕೊಂಡು ಬರುವ ಮೂಲಕ ಗಮನ ಸೆಳೆಯುತ್ತಿದ್ದಾರೆ.</p>.<p>ಜೋಗೂರು ನಿವಾಸಿ ಜ್ಯೋತಿ ಅವರು ಸ್ವಂತ ಹಣದಿಂದ ಕಾರು ಖರೀದಿಸಿ, ಕಳೆದೆರಡು ಶೈಕ್ಷಣಿಕ ವರ್ಷದಿಂದ ನಿತ್ಯ 40 ಮಕ್ಕಳನ್ನು ಶಾಲೆಗೆ ಕರೆತರುವ ಮತ್ತು ಮರಳಿ ಮನೆಗೆ ಕರೆದೊಯ್ಯುವ ಕಾಯಕದಲ್ಲಿ ನಿರತರಾಗಿದ್ದಾರೆ.</p>.<p>ಮೊದಲು ಶಾಲೆಯ ಮಕ್ಕಳನ್ನು ಕರೆ ತರಲು ರಿಕ್ಷಾ ವ್ಯವಸ್ಥೆ ಮಾಡಲಾಗಿತ್ತು. ಈಗ ಜ್ಯೋತಿ ಅವರು ಇಕೋ ಕಾರು ಖರೀದಿಸಿ, ನಿತ್ಯ ಬೆಳಿಗ್ಗೆ ಮೂರು ಟ್ರಿಪ್, ಸಂಜೆ ಮೂರು ಟ್ರಿಪ್ ಮೂಲಕ ಮಕ್ಕಳನ್ನು ಶಾಲೆಗೆ ಕರೆತಂದು, ವಾಪಾಸ್ ಮನೆಗೆ ಬಿಡುತ್ತಿದ್ದಾರೆ.</p>.<p>ಶಾಲೆಯಿಂದ ಅತೀ ದೂರದ ಹಣೆಬೆಟ್ಟು , ಜೋಗೂರು, ಹಣಬರಕೇರಿ, ಮೊಯ್ದಿನ್ ಪುರ, ಕೋಣ್ಮಕ್ಕಿ, ಮಾರ್ಕೆಟ್, ಕೋಣ್ಮಕ್ಕಿ ಕ್ರಾಸ್ನಿಂದಲೂ ಮಕ್ಕಳನ್ನು ಕಾರಿನಲ್ಲಿ ಕರೆದುಕೊಂಡು ಬರುತ್ತಾರೆ.</p>.<p>ಸುತ್ತಮುತ್ತಲಿನ ಮಕ್ಕಳು ಹಿಂದೆ ಖಾಸಗಿ ಶಾಲೆಯನಗನು ನೆಚ್ಚಿಕೊಂಡಿದ್ದರು. ಹತ್ತು ವರ್ಷಗಳಿಂದೀಚೆಗೆ ಶಾಲೆಯಲ್ಲಿ ಅಸ್ತಿತ್ವಕ್ಕೆ ಬಂದ ಶಾಲಾಭಿವೃದ್ಧಿ ಸಮಿತಿ ಪೋಷಕರನ್ನು ಮನವೊಲಿಸಿ ಮಕ್ಕಳನ್ನು ಶಾಲೆಗೆ ಕಳುಹಿಸುವಂತೆ ಮನವೊಲಿಸಿತು ಎಂದು ಎಸ್.ಡಿ.ಎಂ.ಸಿ ಉಪಾಧ್ಯಕ್ಷ ವಿನೋದ್ ಪೂಜಾರಿ ಸಾತೋಡಿ ತಿಳಿಸಿದರು.</p>.<p>ಕೊರೋನಾ ಸಂದರ್ಭ ಹಳ್ಳಿಗಳಿಗೆ ತೆರಳಿ ವಿದ್ಯಾರ್ಥಿಗಳಿಗೆ ‘ವಿದ್ಯಾಗಮ’ದಡಿ ಶಿಕ್ಷಕರು ಪಾಠ ಮಾಡಬೇಕಿದ್ದಾಗ ಅವರನ್ನು ನಾನೇ ರಿಕ್ಷಾದಲ್ಲಿ ಕರೆದೊಯ್ಯುತ್ತಿದ್ದೆ. ಇದೀಗ ಕಾರಿನಲ್ಲಿ ಮಕ್ಕಳನ್ನು ಶಾಲೆಗೆ ಕರೆತರುತ್ತಿದ್ದೇನೆ ಎಂದು ಜ್ಯೋತಿ ಜಯರಾಮ ಶೆಟ್ಟಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>