ಉಡುಪಿ: ಕುತ್ಪಾಡಿಯ ಶ್ರೀ ಧರ್ಮಸ್ಥಳ ಮ೦ಜುನಾಥೇಶ್ವರ ಆಯುರ್ವೇದ ಕಾಲೇಜು ಉಡುಪಿಯ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ನ.19ರಂದು ಹಳೆ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ‘ಪ್ರಜ್ಯೋತಿ-2022’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಈ ಸಂದರ್ಭದಲ್ಲಿ 1984-89ನೇ ಸಾಲಿನ ಹಳೆ ವಿದ್ಯಾರ್ಥಿ ಸಮೂಹ ‘ಚಿರಂತನ – 1984’ ‘ಗುರುವಂದನ’ ಕಾರ್ಯಕ್ರಮ ನಡೆಯಲಿದ್ದು, ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ಯು.ಎನ್. ಪ್ರಸಾದ್ ಹಾಗೂ ನಿವೃತ್ತ ಪ್ರಾಧ್ಯಾಪಕ ಪ್ರೊ. ಮರಿದೇವ ಶರ್ಮ ಅವರನ್ನು ಸನ್ಮಾನಿಸಲಾಗುವುದು.
ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ.ಎಂ.ಮೋಹನ್ ಆಳ್ವ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
‘ಕ್ಲಿನಿಕಲ್ ಅಪ್ಲಿಕೇಶನ್ ಆಫ್ ಮರ್ಮ ಚಿಕಿತ್ಸಾ’ ವಿಷಯದ ಬಗ್ಗೆ ವಿಚಾರ ಸಂಕಿರಣ ನಡೆಯಲಿದ್ದು, ಸಂಪನ್ಮೂಲ ವ್ಯಕ್ತಿಗಳಾಗಿ ಪಾಲಗಾಟ್, ವವನೂರು, ಅಷ್ಟಾಂಗ ಆಯುರ್ವೇದ ವಿದ್ಯಾಪೀಠದ ದ್ರವ್ಯಗುಣ ವಿಭಾಗದ ಮುಖ್ಯಸ್ಥ ಡಾ.ಎಸ್.ಅಜಯನ್ ಭಾಗವಹಿಸಲಿದ್ದಾರೆ.
ಕಾಲೇಜಿನ ಹಳೆ ವಿದ್ಯಾರ್ಥಿಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರು ಹಾಗೂ ಪ್ರಾ೦ಶುಪಾಲರು ವಿನ೦ತಿಸಿದ್ದಾರೆ. ಕಾರ್ಯಕ್ರಮಗಳ ರೂಪುರೇಷೆಗಳ ಬಗ್ಗೆ ಮಾಹಿತಿಗೆ 9886922300, 9845291070, 9844884424 ಸ೦ಪರ್ಕಿಸಬಹುದು.