ಉತ್ತರ ಪ್ರದೇಶ, ಬಿಹಾರದಂತಹ ರಾಜ್ಯಗಳಲ್ಲಿ ನಡೆಯುತ್ತಿದ್ದ ಆತಂಕಕಾರಿ ಘಟನೆಗಳು ಕರ್ನಾಟಕದಲ್ಲಿ ನಡೆಯುತ್ತಿವೆ. ಹಿಜಾಬ್ ವಿವಾದ, ಬುಲ್ಡೋಜರ್ ವಿವಾದ, ಸಮಾಜದಲ್ಲಿ ಕೋಮು ದ್ವೇಷ ಬಿತ್ತುವ ಘಟನೆಗಳು ಉಡುಪಿಯಿಂದಲೇ ಆರಂಭವಾಗಿದ್ದು ವಿಷಾದನೀಯ. ಪ್ರೀತಿ, ಸೌಹಾರ್ದದ ನೆಲದಲ್ಲಿ ಅಹಿತಕರ ಘಟನೆಗಳು ನಡೆಯುತ್ತಿರುವುದು ದುರಂತ ಎಂದರು.