<p>ಉಡುಪಿ: ಬ್ರಹ್ಮಗಿರಿ ಸರ್ಕಲ್ನಲ್ಲಿ ಹಾಕಲಾಗಿರುವ ಬ್ಯಾನರ್ನಲ್ಲಿ ‘ಜೈ ಹಿಂದೂ ರಾಷ್ಟ್ರ’ ಎಂಬ ಘೋಷಣೆ ಹಾಕಿರುವುದು ಖಂಡನೀಯ ಎಂದು ಎಸ್ಡಿಪಿಐ ಉಪಾಧ್ಯಕ್ಷ ಶಾಹಿದ್ ಅಲಿ ಆತಂಕ ವ್ಯಕ್ತಪಡಿಸಿದರು.</p>.<p>ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಭಾರತ ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದು ಸಂವಿಧಾನದಲ್ಲಿ ಹಿಂದೂ ರಾಷ್ಟ್ರದ ಪರಿಕಲ್ಪನೆ ಪ್ರಸ್ತಾಪ ಮಾಡಿಲ್ಲ. ಸಂವಿಧಾನದ ಮೇಲೆ ಶಪಥ ಮಾಡಿ ಸಂವಿಧಾನದ ಆಶಯಗಳಿಗೆ ಬದ್ಧರಾಗಿ ನಡೆಯುವುದಾಗಿ ಪ್ರಮಾಣ ಮಾಡಿದ ನಾಯಕರು ಹಿಂದೂ ರಾಷ್ಟ್ರ ಪರಿಕಲ್ಪನೆ ಮುನ್ನಲೆಗೆ ತಂದಿರುವುದು ಸರಿಯಲ್ಲ ಎಂದರು.</p>.<p>ಹಿಂದೂ ರಾಷ್ಟ್ರ ಆರ್ಎಸ್ಎಸ್ ಪರಿಕಲ್ಪನೆಯಾಗಿದ್ದು ಹಿಂದೂಗಳ ಮತ ಪಡೆಯುವುದು ಪ್ರಮುಖ ಉದ್ದೇಶವಾಗಿದೆ ಎಂದು ದೂರಿದರು.</p>.<p>ಉತ್ತರ ಪ್ರದೇಶ, ಬಿಹಾರದಂತಹ ರಾಜ್ಯಗಳಲ್ಲಿ ನಡೆಯುತ್ತಿದ್ದ ಆತಂಕಕಾರಿ ಘಟನೆಗಳು ಕರ್ನಾಟಕದಲ್ಲಿ ನಡೆಯುತ್ತಿವೆ. ಹಿಜಾಬ್ ವಿವಾದ, ಬುಲ್ಡೋಜರ್ ವಿವಾದ, ಸಮಾಜದಲ್ಲಿ ಕೋಮು ದ್ವೇಷ ಬಿತ್ತುವ ಘಟನೆಗಳು ಉಡುಪಿಯಿಂದಲೇ ಆರಂಭವಾಗಿದ್ದು ವಿಷಾದನೀಯ. ಪ್ರೀತಿ, ಸೌಹಾರ್ದದ ನೆಲದಲ್ಲಿ ಅಹಿತಕರ ಘಟನೆಗಳು ನಡೆಯುತ್ತಿರುವುದು ದುರಂತ ಎಂದರು.</p>.<p>ವಿವಾದಿತ ಬ್ಯಾನರ್ ಅನ್ನು ಕೂಡಲೇ ತೆರವುಗೊಳಿಸಬೇಕು. ಇಲ್ಲವಾದರೆ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಮಾಡಲಾಗುವುದು ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಉಡುಪಿ: ಬ್ರಹ್ಮಗಿರಿ ಸರ್ಕಲ್ನಲ್ಲಿ ಹಾಕಲಾಗಿರುವ ಬ್ಯಾನರ್ನಲ್ಲಿ ‘ಜೈ ಹಿಂದೂ ರಾಷ್ಟ್ರ’ ಎಂಬ ಘೋಷಣೆ ಹಾಕಿರುವುದು ಖಂಡನೀಯ ಎಂದು ಎಸ್ಡಿಪಿಐ ಉಪಾಧ್ಯಕ್ಷ ಶಾಹಿದ್ ಅಲಿ ಆತಂಕ ವ್ಯಕ್ತಪಡಿಸಿದರು.</p>.<p>ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಭಾರತ ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದು ಸಂವಿಧಾನದಲ್ಲಿ ಹಿಂದೂ ರಾಷ್ಟ್ರದ ಪರಿಕಲ್ಪನೆ ಪ್ರಸ್ತಾಪ ಮಾಡಿಲ್ಲ. ಸಂವಿಧಾನದ ಮೇಲೆ ಶಪಥ ಮಾಡಿ ಸಂವಿಧಾನದ ಆಶಯಗಳಿಗೆ ಬದ್ಧರಾಗಿ ನಡೆಯುವುದಾಗಿ ಪ್ರಮಾಣ ಮಾಡಿದ ನಾಯಕರು ಹಿಂದೂ ರಾಷ್ಟ್ರ ಪರಿಕಲ್ಪನೆ ಮುನ್ನಲೆಗೆ ತಂದಿರುವುದು ಸರಿಯಲ್ಲ ಎಂದರು.</p>.<p>ಹಿಂದೂ ರಾಷ್ಟ್ರ ಆರ್ಎಸ್ಎಸ್ ಪರಿಕಲ್ಪನೆಯಾಗಿದ್ದು ಹಿಂದೂಗಳ ಮತ ಪಡೆಯುವುದು ಪ್ರಮುಖ ಉದ್ದೇಶವಾಗಿದೆ ಎಂದು ದೂರಿದರು.</p>.<p>ಉತ್ತರ ಪ್ರದೇಶ, ಬಿಹಾರದಂತಹ ರಾಜ್ಯಗಳಲ್ಲಿ ನಡೆಯುತ್ತಿದ್ದ ಆತಂಕಕಾರಿ ಘಟನೆಗಳು ಕರ್ನಾಟಕದಲ್ಲಿ ನಡೆಯುತ್ತಿವೆ. ಹಿಜಾಬ್ ವಿವಾದ, ಬುಲ್ಡೋಜರ್ ವಿವಾದ, ಸಮಾಜದಲ್ಲಿ ಕೋಮು ದ್ವೇಷ ಬಿತ್ತುವ ಘಟನೆಗಳು ಉಡುಪಿಯಿಂದಲೇ ಆರಂಭವಾಗಿದ್ದು ವಿಷಾದನೀಯ. ಪ್ರೀತಿ, ಸೌಹಾರ್ದದ ನೆಲದಲ್ಲಿ ಅಹಿತಕರ ಘಟನೆಗಳು ನಡೆಯುತ್ತಿರುವುದು ದುರಂತ ಎಂದರು.</p>.<p>ವಿವಾದಿತ ಬ್ಯಾನರ್ ಅನ್ನು ಕೂಡಲೇ ತೆರವುಗೊಳಿಸಬೇಕು. ಇಲ್ಲವಾದರೆ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಮಾಡಲಾಗುವುದು ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>