ಉಡುಪಿ ಜಿಲ್ಲೆಯಲ್ಲೂ 25ಕ್ಕೂ ಹೆಚ್ಚು ಜನ ಪ್ರತಿನಿಧಿಗಳು ಎಸ್ಡಿಪಿಐ ಪಕ್ಷದಿಂದ ಆಯ್ಕೆಯಾಗಿದ್ದಾರೆ. ಕೇಂದ್ರ ಸರ್ಕಾರ ಪಿಎಫ್ಐ ಸಂಘಟನೆ ಮೇಲೆ ನಿಷೇಧ ಹೇರಿದೆಯೇ ಹೊರತು ಎಸ್ಡಿಪಿಐ ಮೇಲೆ ಅಲ್ಲ. ಈ ಮಾಹಿತಿ ಇದ್ದರೂ ಹಲವು ಕಡೆಗಳಲ್ಲಿ ಅಧಿಕಾರಿಗಳು ಎಸ್ಡಿಪಿಐ ಕಚೇರಿ ಮತ್ತು ಸೇವಾಕೇಂದ್ರಗಳಿಗೆ ಬೀಗಮುದ್ರೆ ಹಾಕಿರುವುದು ಸರಿಯಲ್ಲ. ಈ ಕ್ರಮದ ವಿರುದ್ಧ ಪಕ್ಷವು ಕಾನೂನು ಹೋರಾಟ ನಡೆಸಲಿದೆ ಎಂದು ತಿಳಿಸಿದ್ದಾರೆ.