ಉಡುಪಿ ಕಾಲೇಜಿನ ಸಣ್ಣ ಘಟನೆಯನ್ನು ದೊಡ್ಡ ವಿವಾದವಾಗಿ ಬಿಂಬಿಸಿ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಿದ ಶಾಸಕ ಯಶಪಾಲ್ ಸುವರ್ಣ ಅವರು ಪ್ರಜ್ವಲ್ ರೇವಣ್ಣ ವಿಷಯದಲ್ಲಿ ಒಂದು ಮಾತೂ ಆಡದಿರುವುದನ್ನು ನೋಡಿದರೆ, ಹಿಂದೂಗಳ ಮೇಲಿನ ಅವರ ಕಾಳಜಿ ಕೇವಲ ರಾಜಕೀಯ ಲಾಭಕ್ಕಾಗಿ ಮಾತ್ರ ಎನ್ನುವ ಭಾವನೆ ಮೂಡುತ್ತದೆ ಎಂದು ಅವರು ಆರೋಪಿಸಿದರು.