ಮೂಳೂರು ಮತ್ತು ಕಾಪು ಭಾಗದ ಕಡಲ್ಕೊರೆತ ಪ್ರದೇಶಗಳಿಗೆ ಸೋಮವಾರ ಜೆಡಿಎಸ್ ನಿಯೋಗದೊಂದಿಗೆ ಭೇಟಿ ನೀಡಿದ ಅವರು, ‘ಮಳೆಗಾಲ ಪ್ರಾರಂಭವಾದ ಮೇಲೆ ಕಡಲು ಕೊರೆತದ ಬಗ್ಗೆ ಚಿಂತಿಸುವುದಲ್ಲ. ಮುಂಚಿತವಾಗಿ ಯೋಚಿಸಿದ್ದರೆ ಕಾಪು ತಾಲ್ಲೂಕಿನಲ್ಲಿ ಕಡಲು ಕೊರೆತದಿಂದ ಸಮಸ್ಯೆ ಆಗುತ್ತಿರಲಿಲ್ಲ. ಇನ್ನೂ ಹೆಚ್ಚಿನ ಮಳೆಯಾದರೆ, ಸಮುದ್ರ ಕೊರೆತ ಉಂಟಾಗಿ ಕೆಲವು ಮನೆಗಳಿಗೆ ಹಾನಿಯಾಗುವ ಸಂಭವ ಇದೆ. ಅದನ್ನು ತಡೆಗಟ್ಟಬೇಕಾಗಿದೆ’ ಎಂದರು.