ಕ್ಲೀನ್ ಕುಂದಾಪುರ ಪ್ರಾಜೆಕ್ಟ್, ಎಫ್ಎಸ್ಎಲ್ ಇಂಡಿಯಾ, ರೀಫ್ ವಾಚ್ ಸಂಘಟನೆ, ಸ್ಥಳೀಯ ಮೀನುಗಾರರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ 2 ತಿಂಗಳಿನಿಂದ ಕಡಲಾಮೆಯ ಮೊಟ್ಟೆಗಳ ಸಂರಕ್ಷಣೆಯ ಹೊಣೆ ಹೊತ್ತಿದ್ದರು. ಪ್ರಾಣಿಗಳಿಂದ ಮೊಟ್ಟೆಗಳ ರಕ್ಷಣೆಗೆ ಹ್ಯಾಚರಿಯ ಸುತ್ತಲೂ ತಂತಿ ಅಳವಡಿಸಲಾಗಿತ್ತು. ಜಾಗೃತಿ ಫಲಕಗಳನ್ನು ಹಾಕಲಾಗಿತ್ತು.