<p><strong>ಕುಂದಾಪುರ (ಉಡುಪಿ): </strong>ಕೋಡಿ ಸಮುದ್ರ ಕಿನಾರೆಯಲ್ಲಿ ಬುಧವಾರ ಮಧ್ಯರಾತ್ರಿಮೊಟ್ಟೆಯಿಂದಹೊರಬಂದ ಕಡಲಾಮೆಯ ಮರಿಗಳು ಸುರಕ್ಷಿತವಾಗಿ ಕಡಲು ಸೇರಿದವು.</p>.<p>ಜ.24 ಹಾಗೂ 26 ರಂದು ಕೋಡಿ ಬೀಚ್ನಲ್ಲಿ ಅಪರೂಪದ ಆಲೀವ್ ರಿಡ್ಲೆ ಪ್ರಬೇಧದ ಕಡಲಾಮೆಗಳು 2 ಕಡೆಗಳಲ್ಲಿ ಮೊಟ್ಟೆ ಇಟ್ಟಿದ್ದವು. ಈ ಗೂಡುಗಳಿಂದ ಸುಮಾರು 100ಕ್ಕೂ ಹೆಚ್ಚು ಮರಿಗಳು ಹೊರಬಂದಿದ್ದು ಸಮುದ್ರ ಸೇರಿವೆ.</p>.<p>ಕ್ಲೀನ್ ಕುಂದಾಪುರ ಪ್ರಾಜೆಕ್ಟ್, ಎಫ್ಎಸ್ಎಲ್ ಇಂಡಿಯಾ, ರೀಫ್ ವಾಚ್ ಸಂಘಟನೆ, ಸ್ಥಳೀಯ ಮೀನುಗಾರರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ 2 ತಿಂಗಳಿನಿಂದ ಕಡಲಾಮೆಯ ಮೊಟ್ಟೆಗಳ ಸಂರಕ್ಷಣೆಯ ಹೊಣೆ ಹೊತ್ತಿದ್ದರು. ಪ್ರಾಣಿಗಳಿಂದ ಮೊಟ್ಟೆಗಳ ರಕ್ಷಣೆಗೆ ಹ್ಯಾಚರಿಯ ಸುತ್ತಲೂ ತಂತಿ ಅಳವಡಿಸಲಾಗಿತ್ತು. ಜಾಗೃತಿ ಫಲಕಗಳನ್ನು ಹಾಕಲಾಗಿತ್ತು.</p>.<p>ಬುಧವಾರ ರಾತ್ರಿ ಗೂಡುಗಳಿಂದ ಮರಿಗಳು ಹೊರಬರುತ್ತಿರುವುದನ್ನು ಗಮನಿಸಿದ ಪರಿಸರ ಕಾರ್ಯಕರ್ತರು ಆಮೆಗಳು ಸುರಕ್ಷಿತವಾಗಿ ಕಡಲು ಸೇರಲು ಅನುವು ಮಾಡಿಕೊಟ್ಟರು. ಬೆಳಗಿನ ಜಾವದವರೆಗೂ ಕಾರ್ಯಾಚರಣೆ ನಡೆಯಿತು. ಕೋಡಿ ಕಿನಾರೆಯಲ್ಲಿ ಇನ್ನೂ 9 ಕಡಲಾಮೆ ಗೂಡುಗಳಿದ್ದು, ಕೆಲವೇ ದಿನಗಳಲ್ಲಿ ಮೊಟ್ಟೆಯಿಂದ ಮರಿಗಳು ಹೊರಬರಲಿವೆ.</p>.<p><strong>ಕಡಲಾಮೆ ಸಂರಕ್ಷಣಾ ಕೇಂದ್ರ ಸ್ಥಾಪನೆಯಾಗಲಿ: </strong>ಅಳಿವಿನಂಚಿನಲ್ಲಿರುವ ಆಲಿವ್ ರಿಡ್ಲೆ ಕಡಲಾಮೆಗಳು ಸ್ವಚ್ಛ ಪರಿಸರದಲ್ಲಿ ಹಾಗೂ ಮಾನವ ಹಸ್ತಕ್ಷೇಪವಿಲ್ಲದ ಜಾಗದಲ್ಲಿ ಮಾತ್ರ ಮೊಟ್ಟೆಗಳನ್ನು ಇಡುತ್ತದೆ. ಅಪರೂಪದ ಪ್ರಬೇಧವಾದ ರಿಡ್ಲೆ ರಕ್ಷಣೆಗೆ ಕರಾವಳಿಯಲ್ಲಿ ಕಡಲಾಮೆ ಸಂರಕ್ಷಣಾ ಕೇಂದ್ರ ತೆರೆಯುವಂತೆ ಪರಿಸರ ಪ್ರೇಮಿಗಳು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಂದಾಪುರ (ಉಡುಪಿ): </strong>ಕೋಡಿ ಸಮುದ್ರ ಕಿನಾರೆಯಲ್ಲಿ ಬುಧವಾರ ಮಧ್ಯರಾತ್ರಿಮೊಟ್ಟೆಯಿಂದಹೊರಬಂದ ಕಡಲಾಮೆಯ ಮರಿಗಳು ಸುರಕ್ಷಿತವಾಗಿ ಕಡಲು ಸೇರಿದವು.</p>.<p>ಜ.24 ಹಾಗೂ 26 ರಂದು ಕೋಡಿ ಬೀಚ್ನಲ್ಲಿ ಅಪರೂಪದ ಆಲೀವ್ ರಿಡ್ಲೆ ಪ್ರಬೇಧದ ಕಡಲಾಮೆಗಳು 2 ಕಡೆಗಳಲ್ಲಿ ಮೊಟ್ಟೆ ಇಟ್ಟಿದ್ದವು. ಈ ಗೂಡುಗಳಿಂದ ಸುಮಾರು 100ಕ್ಕೂ ಹೆಚ್ಚು ಮರಿಗಳು ಹೊರಬಂದಿದ್ದು ಸಮುದ್ರ ಸೇರಿವೆ.</p>.<p>ಕ್ಲೀನ್ ಕುಂದಾಪುರ ಪ್ರಾಜೆಕ್ಟ್, ಎಫ್ಎಸ್ಎಲ್ ಇಂಡಿಯಾ, ರೀಫ್ ವಾಚ್ ಸಂಘಟನೆ, ಸ್ಥಳೀಯ ಮೀನುಗಾರರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ 2 ತಿಂಗಳಿನಿಂದ ಕಡಲಾಮೆಯ ಮೊಟ್ಟೆಗಳ ಸಂರಕ್ಷಣೆಯ ಹೊಣೆ ಹೊತ್ತಿದ್ದರು. ಪ್ರಾಣಿಗಳಿಂದ ಮೊಟ್ಟೆಗಳ ರಕ್ಷಣೆಗೆ ಹ್ಯಾಚರಿಯ ಸುತ್ತಲೂ ತಂತಿ ಅಳವಡಿಸಲಾಗಿತ್ತು. ಜಾಗೃತಿ ಫಲಕಗಳನ್ನು ಹಾಕಲಾಗಿತ್ತು.</p>.<p>ಬುಧವಾರ ರಾತ್ರಿ ಗೂಡುಗಳಿಂದ ಮರಿಗಳು ಹೊರಬರುತ್ತಿರುವುದನ್ನು ಗಮನಿಸಿದ ಪರಿಸರ ಕಾರ್ಯಕರ್ತರು ಆಮೆಗಳು ಸುರಕ್ಷಿತವಾಗಿ ಕಡಲು ಸೇರಲು ಅನುವು ಮಾಡಿಕೊಟ್ಟರು. ಬೆಳಗಿನ ಜಾವದವರೆಗೂ ಕಾರ್ಯಾಚರಣೆ ನಡೆಯಿತು. ಕೋಡಿ ಕಿನಾರೆಯಲ್ಲಿ ಇನ್ನೂ 9 ಕಡಲಾಮೆ ಗೂಡುಗಳಿದ್ದು, ಕೆಲವೇ ದಿನಗಳಲ್ಲಿ ಮೊಟ್ಟೆಯಿಂದ ಮರಿಗಳು ಹೊರಬರಲಿವೆ.</p>.<p><strong>ಕಡಲಾಮೆ ಸಂರಕ್ಷಣಾ ಕೇಂದ್ರ ಸ್ಥಾಪನೆಯಾಗಲಿ: </strong>ಅಳಿವಿನಂಚಿನಲ್ಲಿರುವ ಆಲಿವ್ ರಿಡ್ಲೆ ಕಡಲಾಮೆಗಳು ಸ್ವಚ್ಛ ಪರಿಸರದಲ್ಲಿ ಹಾಗೂ ಮಾನವ ಹಸ್ತಕ್ಷೇಪವಿಲ್ಲದ ಜಾಗದಲ್ಲಿ ಮಾತ್ರ ಮೊಟ್ಟೆಗಳನ್ನು ಇಡುತ್ತದೆ. ಅಪರೂಪದ ಪ್ರಬೇಧವಾದ ರಿಡ್ಲೆ ರಕ್ಷಣೆಗೆ ಕರಾವಳಿಯಲ್ಲಿ ಕಡಲಾಮೆ ಸಂರಕ್ಷಣಾ ಕೇಂದ್ರ ತೆರೆಯುವಂತೆ ಪರಿಸರ ಪ್ರೇಮಿಗಳು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>