ಮಂಗಳವಾರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ‘ತಜ್ಞ ವೈದ್ಯರ ಸಲಹೆಯಂತೆ ಜಿಲ್ಲೆಯಲ್ಲಿ ಲಾಕ್ಡೌನ್ ಬದಲು ಸೀಲ್ಡೌನ್ ಮಾಡಲು ನಿರ್ಧರಿಸಲಾಗಿದೆ. ಈ ಅವಧಿಯಲ್ಲಿ ಹೊರ ಜಿಲ್ಲೆಗಳಿಂದ ಯಾರೂ ಬರುವಂತಿಲ್ಲ, ಜಿಲ್ಲೆಯವರು ಹೊರಗೆ ಹೋಗುವಂತಿಲ್ಲ. ತುರ್ತು ವೈದ್ಯಕೀಯ ಅಗತ್ಯತೆಗಳಿಗೆ ಮಾತ್ರ ಜಿಲ್ಲೆಯನ್ನು ಪ್ರವೇಶಿಸಬಹುದು’ ಎಂದರು.