<p>ಬೈಂದೂರು: ಉಪ್ಪುಂದ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ಎನ್.ಸತೀಶ್ ಪೈ ಹಾಗೂ ಯು.ಮೋಹನ್ ಪೈ ಸೇವಾರ್ಥ ಪ್ರಥಮ ಬಾರಿಗೆ ಸೀತಾ ರಾಮ ಕಲ್ಯಾಣೋತ್ಸವ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು.</p>.<p>ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಪರ್ಯಾಯ ಅರ್ಚಕ ವೃಂದದ ಉಸ್ತುವಾರಿಯಲ್ಲಿ ಲೋಕಕಲ್ಯಾಣಾರ್ಥವಾಗಿ ಕೋಟಿ ರಾಮನಾಮ ತಾರಕ ಮಂತ್ರ ಜಪ ಯಜ್ಞದ ಪ್ರಯುಕ್ತ ಆರು ದಿನಗಳ ವಿಶೇಷ ಕಾರ್ಯಕ್ರಮ ನಡೆಯುತ್ತಿದ್ದು ಮೂರನೇ ದಿನ ಕಲ್ಯಾಣೋತ್ಸವ ನಡೆಯಿತು.</p>.<p>ವರನ ಕಡೆಯವರನ್ನು ಬರಮಾಡಿಕೊಂಡು ಸ್ವಾಗತ ನೀಡಿ ವರಪೂಜೆ, ಸೀಮಾಂತ್ಯ ಪೂಜೆ, ಉದ್ದಿನ ಮೂಹೂರ್ತ ಮಾಲಾಧಾರಣೆ, ಮಾಂಗಲ್ಯ ಧಾರಣೆ, ಕನ್ಯಾದಾನ, ಮುಂತಾದ ವಿಧಿವಿಧಾನಗಳು ನಡೆದವು. ವೇದಮೂರ್ತಿ ಚಂದ್ರಶೇಖರ್ ಭಟ್ ನೇತೃತ್ವ ವಹಿಸಿದ್ದರು.</p>.<p>ವಧು ವರರ ಕಡೆಯಿಂದ ಯಜಮಾನರಾಗಿ ಸೇವಾದಾರರು ಹಾಗೂ ಕುಟುಂಬದ ಸದಸ್ಯರು, ಆಡಳಿತ ಮಂಡಳಿಯ ಪರವಾಗಿ ಅಧ್ಯಕ್ಷ ರಾಜೇಶ್ ಪೈ ಉಪಸ್ಥಿತರಿದ್ದರು.</p>.<p>ವೈದಿಕರಾದ ವಿನಾಯಕ ಭಟ್ ಸೀತಾ ರಾಮ ಕಲ್ಯಾಣೋತ್ಸವದ ಮಹತ್ವ ವಿವರಿಸಿದರು. ಜತೆ ಕಾರ್ಯದರ್ಶಿ ಪಾಂಡುರಂಗ ಪಡಿಯಾರ್ ದೇವಸ್ಥಾನದ ಮುಂದಿನ ಕಾರ್ಯಯೋಜನೆಯ ಕುರಿತು ಮಾಹಿತಿ ನೀಡಿದರು. ಕೋಶಾಧ್ಯಕ್ಷ ಮಂಜುನಾಥ ಮಹಾಲೆ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೈಂದೂರು: ಉಪ್ಪುಂದ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ಎನ್.ಸತೀಶ್ ಪೈ ಹಾಗೂ ಯು.ಮೋಹನ್ ಪೈ ಸೇವಾರ್ಥ ಪ್ರಥಮ ಬಾರಿಗೆ ಸೀತಾ ರಾಮ ಕಲ್ಯಾಣೋತ್ಸವ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು.</p>.<p>ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಪರ್ಯಾಯ ಅರ್ಚಕ ವೃಂದದ ಉಸ್ತುವಾರಿಯಲ್ಲಿ ಲೋಕಕಲ್ಯಾಣಾರ್ಥವಾಗಿ ಕೋಟಿ ರಾಮನಾಮ ತಾರಕ ಮಂತ್ರ ಜಪ ಯಜ್ಞದ ಪ್ರಯುಕ್ತ ಆರು ದಿನಗಳ ವಿಶೇಷ ಕಾರ್ಯಕ್ರಮ ನಡೆಯುತ್ತಿದ್ದು ಮೂರನೇ ದಿನ ಕಲ್ಯಾಣೋತ್ಸವ ನಡೆಯಿತು.</p>.<p>ವರನ ಕಡೆಯವರನ್ನು ಬರಮಾಡಿಕೊಂಡು ಸ್ವಾಗತ ನೀಡಿ ವರಪೂಜೆ, ಸೀಮಾಂತ್ಯ ಪೂಜೆ, ಉದ್ದಿನ ಮೂಹೂರ್ತ ಮಾಲಾಧಾರಣೆ, ಮಾಂಗಲ್ಯ ಧಾರಣೆ, ಕನ್ಯಾದಾನ, ಮುಂತಾದ ವಿಧಿವಿಧಾನಗಳು ನಡೆದವು. ವೇದಮೂರ್ತಿ ಚಂದ್ರಶೇಖರ್ ಭಟ್ ನೇತೃತ್ವ ವಹಿಸಿದ್ದರು.</p>.<p>ವಧು ವರರ ಕಡೆಯಿಂದ ಯಜಮಾನರಾಗಿ ಸೇವಾದಾರರು ಹಾಗೂ ಕುಟುಂಬದ ಸದಸ್ಯರು, ಆಡಳಿತ ಮಂಡಳಿಯ ಪರವಾಗಿ ಅಧ್ಯಕ್ಷ ರಾಜೇಶ್ ಪೈ ಉಪಸ್ಥಿತರಿದ್ದರು.</p>.<p>ವೈದಿಕರಾದ ವಿನಾಯಕ ಭಟ್ ಸೀತಾ ರಾಮ ಕಲ್ಯಾಣೋತ್ಸವದ ಮಹತ್ವ ವಿವರಿಸಿದರು. ಜತೆ ಕಾರ್ಯದರ್ಶಿ ಪಾಂಡುರಂಗ ಪಡಿಯಾರ್ ದೇವಸ್ಥಾನದ ಮುಂದಿನ ಕಾರ್ಯಯೋಜನೆಯ ಕುರಿತು ಮಾಹಿತಿ ನೀಡಿದರು. ಕೋಶಾಧ್ಯಕ್ಷ ಮಂಜುನಾಥ ಮಹಾಲೆ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>