<p>ಹೆಬ್ರಿ: ‘ವಿದ್ಯಾರ್ಥಿಗಳು ಸ್ವಂತ ಸಾಮರ್ಥ್ಯದ ಮೇಲೆ ನಂಬಿಕೆ ಇಟ್ಟುಕೊಂಡು ರಚನಾತ್ಮಕ ಬೆಳವಣಿಗೆ ಕಂಡುಕೊಳ್ಳುವುದು ಮುಖ್ಯ. ನಿಮ್ಮಲ್ಲಿರುವ ಅಗಾಧ ಶಕ್ತಿಯ ಮೂಲಕ ಅಸಾಧ್ಯವಾದದ್ದನ್ನು ಸಾಧಿಸಿ ತೋರಿಸಿ’ ಎಂದು ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯ ಯೋಗೀಶ್ ಭಟ್ ಹೇಳಿದರು.</p>.<p>ಹೆಬ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯ ಅಶ್ರಯದಲ್ಲಿ ನಡೆದ ವಾರ್ಷಿಕೋತ್ಸವ ಹಾಗೂ ಪ್ರತಿಭಾ ಪುರಸ್ಕಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಕಾಲೇಜು ಪ್ರಾಂಶುಪಾಲ ಡಾ. ಪ್ರಸಾದ್ ರಾವ್ ಮಾತನಾಡಿದರು.</p>.<p>ರಾಘವೇಂದ್ರ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಡಾ. ರಾಮಚಂದ್ರ ಐತಾಳ್, ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರಾದ ಹೆಬ್ರಿ ಗುರುದಾಸ್ ಶೆಣೈ, ನರೇಂದ್ರ ನಾಯಕ್, ಹೆಬ್ರಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಾಲತಿ, ಉಪನ್ಯಾಸಕ<br />ರಾದ ವಿಷ್ಣುಮೂರ್ತಿ ಪ್ರಭು, ಆಶಾಲತಾ, ಪ್ರದೀಪ್ ಶೆಟ್ಟಿ ಸಿರಿಬೈಲು, ಬಾಲರಾಜ್ ಡಿಬಿ, ಅರುಣ್ ಕುಮಾರ್, ವಿಜಯೇಂದ್ರ ಶೆಣೈ, ಡಾ. ಪ್ರವೀಣ್ ಕುಮಾರ್ ಇದ್ದರು.</p>.<p>ವರ್ಗಾವಣೆಗೊಂಡ ಡಾ. ಗಣಪತಿ ಎಚ್.ಎ., ಎನ್ಎಸ್ಎಸ್ ಯೋಜನಾಧಿಕಾರಿ ಬಾಲರಾಜ್ ಡಿ.ಬಿ., ಪಿಎಚ್ಡಿ ಪದವಿ ಪಡೆದ ಕನ್ನಡ ಉಪನ್ಯಾಸಕ ಡಾ. ಪ್ರವೀಣ್ ಕುಮಾರ್ ಅವರನ್ನು ವಾರ್ಷಿಕೋತ್ಸವದಲ್ಲಿ ಗೌರವಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೆಬ್ರಿ: ‘ವಿದ್ಯಾರ್ಥಿಗಳು ಸ್ವಂತ ಸಾಮರ್ಥ್ಯದ ಮೇಲೆ ನಂಬಿಕೆ ಇಟ್ಟುಕೊಂಡು ರಚನಾತ್ಮಕ ಬೆಳವಣಿಗೆ ಕಂಡುಕೊಳ್ಳುವುದು ಮುಖ್ಯ. ನಿಮ್ಮಲ್ಲಿರುವ ಅಗಾಧ ಶಕ್ತಿಯ ಮೂಲಕ ಅಸಾಧ್ಯವಾದದ್ದನ್ನು ಸಾಧಿಸಿ ತೋರಿಸಿ’ ಎಂದು ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯ ಯೋಗೀಶ್ ಭಟ್ ಹೇಳಿದರು.</p>.<p>ಹೆಬ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯ ಅಶ್ರಯದಲ್ಲಿ ನಡೆದ ವಾರ್ಷಿಕೋತ್ಸವ ಹಾಗೂ ಪ್ರತಿಭಾ ಪುರಸ್ಕಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಕಾಲೇಜು ಪ್ರಾಂಶುಪಾಲ ಡಾ. ಪ್ರಸಾದ್ ರಾವ್ ಮಾತನಾಡಿದರು.</p>.<p>ರಾಘವೇಂದ್ರ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಡಾ. ರಾಮಚಂದ್ರ ಐತಾಳ್, ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರಾದ ಹೆಬ್ರಿ ಗುರುದಾಸ್ ಶೆಣೈ, ನರೇಂದ್ರ ನಾಯಕ್, ಹೆಬ್ರಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಾಲತಿ, ಉಪನ್ಯಾಸಕ<br />ರಾದ ವಿಷ್ಣುಮೂರ್ತಿ ಪ್ರಭು, ಆಶಾಲತಾ, ಪ್ರದೀಪ್ ಶೆಟ್ಟಿ ಸಿರಿಬೈಲು, ಬಾಲರಾಜ್ ಡಿಬಿ, ಅರುಣ್ ಕುಮಾರ್, ವಿಜಯೇಂದ್ರ ಶೆಣೈ, ಡಾ. ಪ್ರವೀಣ್ ಕುಮಾರ್ ಇದ್ದರು.</p>.<p>ವರ್ಗಾವಣೆಗೊಂಡ ಡಾ. ಗಣಪತಿ ಎಚ್.ಎ., ಎನ್ಎಸ್ಎಸ್ ಯೋಜನಾಧಿಕಾರಿ ಬಾಲರಾಜ್ ಡಿ.ಬಿ., ಪಿಎಚ್ಡಿ ಪದವಿ ಪಡೆದ ಕನ್ನಡ ಉಪನ್ಯಾಸಕ ಡಾ. ಪ್ರವೀಣ್ ಕುಮಾರ್ ಅವರನ್ನು ವಾರ್ಷಿಕೋತ್ಸವದಲ್ಲಿ ಗೌರವಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>