<p><strong>ಉಡುಪಿ</strong>: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ವತಿಯಿಂದ ₹ 124.72 ಕೋಟಿ ವೆಚ್ಚದಲ್ಲಿ ಹೆಗ್ಗುಂಜೆ, ಬೆಳ್ಮಣ್, ಬೆಳಪು ಉಪ ವಿದ್ಯುತ್ ಕೇಂದ್ರ ಹಾಗೂ ಇತರೆ ಕಾಮಗಾರಿಗಳ ಅನಾವರಣ ಕಾರ್ಯಕ್ರಮವನ್ನು ಭಾನುವಾರ ಕುಂಜಿಬೆಟ್ಟು ಕರ್ನಾಟಕ ವಿದ್ಯುಚ್ಛಕ್ತಿ ನೌಕರರ ಸಭಾಭವನದಲ್ಲಿ ಶಾಸಕ ಕೆ.ರಘುಪತಿ ಭಟ್ ಉದ್ಘಾಟಿಸಿದರು.</p>.<p>ಬಳಿಕ ಮಾತನಾಡಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಇಂಧನ ಕ್ಷೇತ್ರದಲ್ಲಿ ಸೋಲಾರ್ ವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಒತ್ತು ನೀಡುತ್ತಿರುವ ಪರಿಣಾಮ ವಿದ್ಯುತ್ ಕೊರತೆ ನೀಗಿದ್ದು ಹೆಚ್ಚುವರಿ ವಿದ್ಯುತ್ ಉತ್ಪಾದನೆಯಾಗುತ್ತಿದೆ. ರಾಜ್ಯ ಇಂಧನ ಕ್ಷೇತ್ರದಲ್ಲಿ ಸ್ವಾವಲಂಬನೆ ಸಾಧಿಸುತ್ತಿದೆ ಎಂದರು.</p>.<p>ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ ಮಾತನಾಡಿ, ವಿದ್ಯುತ್ ಉತ್ಪಾದನಾ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ರೈತರ ಭೂಮಿ ಸ್ವಾಧೀನ ಪಡಿಸಿಕೊಂಡರೆ ಭೂಮಿ ಕಳೆದುಕೊಂಡ ರೈತರಿಗೆ ಮಾರುಕಟ್ಟೆಯ ಬೆಲೆ ಆಧಾರಿಸಿ ಗರಿಷ್ಠ ಪರಿಹಾರ ಸಿಗಬೇಕು ಎಂದರು.</p>.<p>ಕಾಪು ಶಾಸಕ ಲಾಲಾಜಿ ಆರ್.ಮೆಂಡನ್, ಮೆಸ್ಕಾಂ ಮಂಗಳೂರು ವಿಭಾಗದ ವ್ಯವಸ್ಥಾಪಕ ನಿರ್ದೇಶಕ ಮಂಜಪ್ಪ, ಹಾಸನ ಪ್ರಸರಣ ವಲಯದ ಮುಖ್ಯ ಎಂಜಿನಿಯರ್ ಎಂಆರ್.ಶಾನುಭಾಗ್, ಉಡುಪಿ ವೃತ್ತ ಅಧೀಕ್ಷಕ ಎಂಜಿನಿಯರ್ ದಿನೇಶ್ ಉಪಾಧ್ಯಾಯ, ನಿಗಮದ ಕಾರ್ಯಪಾಲಕ ಎಂಜಿನಿಯರ್ ಗಂಗಾಧರ್, ಶ್ರೀನಿವಾಸ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ</strong>: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ವತಿಯಿಂದ ₹ 124.72 ಕೋಟಿ ವೆಚ್ಚದಲ್ಲಿ ಹೆಗ್ಗುಂಜೆ, ಬೆಳ್ಮಣ್, ಬೆಳಪು ಉಪ ವಿದ್ಯುತ್ ಕೇಂದ್ರ ಹಾಗೂ ಇತರೆ ಕಾಮಗಾರಿಗಳ ಅನಾವರಣ ಕಾರ್ಯಕ್ರಮವನ್ನು ಭಾನುವಾರ ಕುಂಜಿಬೆಟ್ಟು ಕರ್ನಾಟಕ ವಿದ್ಯುಚ್ಛಕ್ತಿ ನೌಕರರ ಸಭಾಭವನದಲ್ಲಿ ಶಾಸಕ ಕೆ.ರಘುಪತಿ ಭಟ್ ಉದ್ಘಾಟಿಸಿದರು.</p>.<p>ಬಳಿಕ ಮಾತನಾಡಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಇಂಧನ ಕ್ಷೇತ್ರದಲ್ಲಿ ಸೋಲಾರ್ ವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಒತ್ತು ನೀಡುತ್ತಿರುವ ಪರಿಣಾಮ ವಿದ್ಯುತ್ ಕೊರತೆ ನೀಗಿದ್ದು ಹೆಚ್ಚುವರಿ ವಿದ್ಯುತ್ ಉತ್ಪಾದನೆಯಾಗುತ್ತಿದೆ. ರಾಜ್ಯ ಇಂಧನ ಕ್ಷೇತ್ರದಲ್ಲಿ ಸ್ವಾವಲಂಬನೆ ಸಾಧಿಸುತ್ತಿದೆ ಎಂದರು.</p>.<p>ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ ಮಾತನಾಡಿ, ವಿದ್ಯುತ್ ಉತ್ಪಾದನಾ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ರೈತರ ಭೂಮಿ ಸ್ವಾಧೀನ ಪಡಿಸಿಕೊಂಡರೆ ಭೂಮಿ ಕಳೆದುಕೊಂಡ ರೈತರಿಗೆ ಮಾರುಕಟ್ಟೆಯ ಬೆಲೆ ಆಧಾರಿಸಿ ಗರಿಷ್ಠ ಪರಿಹಾರ ಸಿಗಬೇಕು ಎಂದರು.</p>.<p>ಕಾಪು ಶಾಸಕ ಲಾಲಾಜಿ ಆರ್.ಮೆಂಡನ್, ಮೆಸ್ಕಾಂ ಮಂಗಳೂರು ವಿಭಾಗದ ವ್ಯವಸ್ಥಾಪಕ ನಿರ್ದೇಶಕ ಮಂಜಪ್ಪ, ಹಾಸನ ಪ್ರಸರಣ ವಲಯದ ಮುಖ್ಯ ಎಂಜಿನಿಯರ್ ಎಂಆರ್.ಶಾನುಭಾಗ್, ಉಡುಪಿ ವೃತ್ತ ಅಧೀಕ್ಷಕ ಎಂಜಿನಿಯರ್ ದಿನೇಶ್ ಉಪಾಧ್ಯಾಯ, ನಿಗಮದ ಕಾರ್ಯಪಾಲಕ ಎಂಜಿನಿಯರ್ ಗಂಗಾಧರ್, ಶ್ರೀನಿವಾಸ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>