<p><strong>ಉಡುಪಿ: </strong>ಹಿರಿಯ ಜೀವಗಳಿಗೆ ಪ್ರೀತಿತುಂಬಿದ ಮಾತುಗಳು ಹಾಗೂ ಮಕ್ಕಳ ಸಾಂಗತ್ಯ ಹೆಚ್ಚು ಅಗತ್ಯವಿರುತ್ತದೆ ಎಂದು ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷೆ ಶೀಲಾ ಕೆ.ಶೆಟ್ಟಿ ಅಭಿಪ್ರಾಯಪಟ್ಟರು.</p>.<p>ಮಂಗಳವಾರ ಜಿಲ್ಲಾಡಳಿತ ಹಾಗೂ ಇತರ ಇಲಾಖೆ, ಸಂಘ ಸಂಸ್ಥೆಗಳ ಸಹಯೋಗದಲ್ಲಿ ಎಂಜಿಎಂ ಕಾಲೇಜಿನ ರವೀಂದ್ರ ಮಂಟಪದಲ್ಲಿ ನಡೆದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.</p>.<p>ಆಧುನಿಕ ಸಮಾಜದಲ್ಲಿ ಅವಿಭಕ್ತ ಕುಟುಂಬಗಳು ಕಣ್ಮರೆಯಾಗುತ್ತಿದ್ದು, ವಿಭಕ್ತ ಕುಟುಂಬಗಳು ಹೆಚ್ಚಾಗುತ್ತಿದೆ. ಹೆತ್ತವರನ್ನು ಬಿಟ್ಟು ದೂರದಲ್ಲಿ ಮಕ್ಕಳು ಬದುಕು ಕಟ್ಟಿಕೊಳ್ಳುತ್ತಿದ್ದಾರೆ. ವಯಸ್ಸಾದ ಮೇಲೆ ಹಿರಿಯರು ಮಕ್ಕಉ ಜತೆಗಿರಬೇಕು ಎಂದು ಬಯಸುತ್ತಾರೆ. ಅವರ ಆಸೆಗಳನ್ನು ಮಕ್ಕಳು ಈಡೇರಿಸಬೇಕು ಎಂದರು.</p>.<p>ಹಿರಿಯರನ್ನು ಗೌರವಾದರಗಳಿಂದ ನೋಡುತ್ತಿದ್ದ ಪರಂಪರೆ ನಶಿಸಿ ಹೋಗುತ್ತಿದೆ. ಅವಿದ್ಯಾವಂತರಾಗಿದ್ದರೂ ಜೀವನದ ಅನುಭವ ಪಡೆದ ಹಿರಿಯರು ಕಿರಿಯರಿಗೆ ಮಾರ್ಗದರ್ಶಕರಾಗಿರುತ್ತಿದ್ದರು. ಆದರೆ, ಪ್ರಸ್ತುತ ಆಸ್ತಿ ವ್ಯಾಮೋಹದಿಂದ ಮಕ್ಕಳು ಹೆತ್ತವರನ್ನು ಬೀದಿಗೆ ತಳ್ಳುತ್ತಿರುವ ನಿದರ್ಶನಗಳು ಹೆಚ್ಚಾಗುತ್ತಿವೆ ಎಂದು ವಿಷಾದ ವ್ಯಕ್ತಪಡಿಸಿದರು.</p>.<p>ಹಿರಿಯರ ಪ್ರೀತಿ, ತ್ಯಾಗ, ಸೇವೆಗಳನ್ನು ಮಕ್ಕಳು ನೆನಪಿನಲ್ಲಿಟ್ಟುಕೊಂಡರೆ ಜೀವನ ಸಾರ್ಥಕವಾಗುತ್ತದೆ. ಯುವ ಪೀಳಿಗೆ ಹಿರಿಯ ನಾಗರಿಕರನ್ನು ಪ್ರೀತಿಸುವ, ಗೌರವಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.</p>.<p>ಹಿರಿಯ ನಾಗರಿಕರಿಗಿರುವ ಸೇವೆ ಹಾಗೂ ಸೌಲಭ್ಯಗಳನ್ನು ಪಡೆಯುವಾಗ ಸಮಸ್ಯೆಗಳಾದರೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಬಹುದು ಎಂದರು.</p>.<p>ಹಿರಿಯ ನಾಗರಿಕರಿಗೆ ಇತರ ಸೌಲಭ್ಯಗಳು ಸಿಗುವಲ್ಲಿ ವಿಳಂಬವಾದರೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಿದರೆ, ಪ್ರಾಧಿಕಾರದ ಸ್ವಯಂ ಸೇವಕರು ಹಾಗೂ ವಕೀಲರು ಅರ್ಜಿದಾರರ ಸಮಸ್ಯೆ ಬಗೆಹರಿಸುವ ಯತ್ನ ಮಾಡಲಿದ್ದಾರೆ ಎಂದರು.</p>.<p>ಹಿರಿಯ ನಾಗರಿಕರ ರಕ್ಷಣೆಗೆ 1090 ಸಹಾಯವಾಣಿಗೆ ಕರೆಮಾಡಿ ಅಗತ್ಯವಿರುವವರು ಸಹಾಯ ಪಡೆಯಬಹುದು ಎಂದರು.</p>.<p>ತಾಲ್ಲೂಕು ಪಂಚಾಯತ್ ಅಧ್ಯಕ್ಷೆ ನೀತಾ ಗುರುರಾಜ್ ಪೂಜಾರಿ ಮಾತನಾಡಿ, ಹೆತ್ತವರನ್ನು ನಿರ್ಲಕ್ಷಿಸುವ ಮನೋಭಾವ ಹೆಚ್ಚಾಗಿದ್ದು, ವೃದ್ಧಾಶ್ರಮದಲ್ಲಿ ಬದುಕಬೇಕಾದ ಸ್ಥಿತಿ ನಿರ್ಮಾಣವಾಗಿದೆ. ವಿಭಕ್ತ ಕುಟುಂಬದ ಪರಿಕಲ್ಪನೆಯಿಂದ ಹಿರಿಯರಲ್ಲಿ ಅಭದ್ರತೆ ಕಾಡುತ್ತಿದೆ. ಆದ್ದರಿಂದ, ಹಿರಿಯ ನಾಗರಿಕರ ಪ್ರಾಮುಖ್ಯತೆ ಕುರಿತು ಮಕ್ಕಳಲ್ಲಿ ಜಾಗೃತಿ ಮೂಡಿಸಬೇಕು ಎಂದರು.</p>.<p>ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಗ್ರೇಸಿ ಗೋನ್ಸಾಲ್ವೀಸ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಡುಪಿ ಹಿರಿಯ ನಾಗರಿಕರ ಒಕ್ಕೂಟದ ಅಧ್ಯಕ್ಷ ಎ.ಪಿ.ಕೊಡಂಚ,ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮಧುಸೂದನ್ ಉಪಸ್ಥಿತರಿದ್ದರು.</p>.<p>ಹಿರಿಯ ನಾಗರಿಕರ ದಿನಾಚರಣೆಯ ಪ್ರಯುಕ್ತ ನಡೆದ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.<br />ಹಿರಿಯ ವಕೀಲ ಬಿ.ಮುರಳೀಧರ ವಾರಂಬಳ್ಳಿ ಉಪನ್ಯಾಸ ನೀಡಿದರು.</p>.<p>ಉಡುಪಿ ವಕೀಲರ ಸಂಘದ ಅಧ್ಯಕ್ಷ ದಿವಾಕರ ಶೆಟ್ಟಿ, ಸರಳಾ ಬಿ.ಕಾಂಚನ್, ಜಿಲ್ಲಾ ಅಂಗವಿಕಲರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿ ಚಂದ್ರನಾಯ್ಕ್, ಯೋಜನಾ ಸಹಾಯಕ ಗಣೇಶ್ ಮರಾಠೆ, ಡಿಎನ್ಎ ಸಂಸ್ಥೆಯ ರೂಪಲಕ್ಷ್ಮೀ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ: </strong>ಹಿರಿಯ ಜೀವಗಳಿಗೆ ಪ್ರೀತಿತುಂಬಿದ ಮಾತುಗಳು ಹಾಗೂ ಮಕ್ಕಳ ಸಾಂಗತ್ಯ ಹೆಚ್ಚು ಅಗತ್ಯವಿರುತ್ತದೆ ಎಂದು ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷೆ ಶೀಲಾ ಕೆ.ಶೆಟ್ಟಿ ಅಭಿಪ್ರಾಯಪಟ್ಟರು.</p>.<p>ಮಂಗಳವಾರ ಜಿಲ್ಲಾಡಳಿತ ಹಾಗೂ ಇತರ ಇಲಾಖೆ, ಸಂಘ ಸಂಸ್ಥೆಗಳ ಸಹಯೋಗದಲ್ಲಿ ಎಂಜಿಎಂ ಕಾಲೇಜಿನ ರವೀಂದ್ರ ಮಂಟಪದಲ್ಲಿ ನಡೆದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.</p>.<p>ಆಧುನಿಕ ಸಮಾಜದಲ್ಲಿ ಅವಿಭಕ್ತ ಕುಟುಂಬಗಳು ಕಣ್ಮರೆಯಾಗುತ್ತಿದ್ದು, ವಿಭಕ್ತ ಕುಟುಂಬಗಳು ಹೆಚ್ಚಾಗುತ್ತಿದೆ. ಹೆತ್ತವರನ್ನು ಬಿಟ್ಟು ದೂರದಲ್ಲಿ ಮಕ್ಕಳು ಬದುಕು ಕಟ್ಟಿಕೊಳ್ಳುತ್ತಿದ್ದಾರೆ. ವಯಸ್ಸಾದ ಮೇಲೆ ಹಿರಿಯರು ಮಕ್ಕಉ ಜತೆಗಿರಬೇಕು ಎಂದು ಬಯಸುತ್ತಾರೆ. ಅವರ ಆಸೆಗಳನ್ನು ಮಕ್ಕಳು ಈಡೇರಿಸಬೇಕು ಎಂದರು.</p>.<p>ಹಿರಿಯರನ್ನು ಗೌರವಾದರಗಳಿಂದ ನೋಡುತ್ತಿದ್ದ ಪರಂಪರೆ ನಶಿಸಿ ಹೋಗುತ್ತಿದೆ. ಅವಿದ್ಯಾವಂತರಾಗಿದ್ದರೂ ಜೀವನದ ಅನುಭವ ಪಡೆದ ಹಿರಿಯರು ಕಿರಿಯರಿಗೆ ಮಾರ್ಗದರ್ಶಕರಾಗಿರುತ್ತಿದ್ದರು. ಆದರೆ, ಪ್ರಸ್ತುತ ಆಸ್ತಿ ವ್ಯಾಮೋಹದಿಂದ ಮಕ್ಕಳು ಹೆತ್ತವರನ್ನು ಬೀದಿಗೆ ತಳ್ಳುತ್ತಿರುವ ನಿದರ್ಶನಗಳು ಹೆಚ್ಚಾಗುತ್ತಿವೆ ಎಂದು ವಿಷಾದ ವ್ಯಕ್ತಪಡಿಸಿದರು.</p>.<p>ಹಿರಿಯರ ಪ್ರೀತಿ, ತ್ಯಾಗ, ಸೇವೆಗಳನ್ನು ಮಕ್ಕಳು ನೆನಪಿನಲ್ಲಿಟ್ಟುಕೊಂಡರೆ ಜೀವನ ಸಾರ್ಥಕವಾಗುತ್ತದೆ. ಯುವ ಪೀಳಿಗೆ ಹಿರಿಯ ನಾಗರಿಕರನ್ನು ಪ್ರೀತಿಸುವ, ಗೌರವಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.</p>.<p>ಹಿರಿಯ ನಾಗರಿಕರಿಗಿರುವ ಸೇವೆ ಹಾಗೂ ಸೌಲಭ್ಯಗಳನ್ನು ಪಡೆಯುವಾಗ ಸಮಸ್ಯೆಗಳಾದರೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಬಹುದು ಎಂದರು.</p>.<p>ಹಿರಿಯ ನಾಗರಿಕರಿಗೆ ಇತರ ಸೌಲಭ್ಯಗಳು ಸಿಗುವಲ್ಲಿ ವಿಳಂಬವಾದರೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಿದರೆ, ಪ್ರಾಧಿಕಾರದ ಸ್ವಯಂ ಸೇವಕರು ಹಾಗೂ ವಕೀಲರು ಅರ್ಜಿದಾರರ ಸಮಸ್ಯೆ ಬಗೆಹರಿಸುವ ಯತ್ನ ಮಾಡಲಿದ್ದಾರೆ ಎಂದರು.</p>.<p>ಹಿರಿಯ ನಾಗರಿಕರ ರಕ್ಷಣೆಗೆ 1090 ಸಹಾಯವಾಣಿಗೆ ಕರೆಮಾಡಿ ಅಗತ್ಯವಿರುವವರು ಸಹಾಯ ಪಡೆಯಬಹುದು ಎಂದರು.</p>.<p>ತಾಲ್ಲೂಕು ಪಂಚಾಯತ್ ಅಧ್ಯಕ್ಷೆ ನೀತಾ ಗುರುರಾಜ್ ಪೂಜಾರಿ ಮಾತನಾಡಿ, ಹೆತ್ತವರನ್ನು ನಿರ್ಲಕ್ಷಿಸುವ ಮನೋಭಾವ ಹೆಚ್ಚಾಗಿದ್ದು, ವೃದ್ಧಾಶ್ರಮದಲ್ಲಿ ಬದುಕಬೇಕಾದ ಸ್ಥಿತಿ ನಿರ್ಮಾಣವಾಗಿದೆ. ವಿಭಕ್ತ ಕುಟುಂಬದ ಪರಿಕಲ್ಪನೆಯಿಂದ ಹಿರಿಯರಲ್ಲಿ ಅಭದ್ರತೆ ಕಾಡುತ್ತಿದೆ. ಆದ್ದರಿಂದ, ಹಿರಿಯ ನಾಗರಿಕರ ಪ್ರಾಮುಖ್ಯತೆ ಕುರಿತು ಮಕ್ಕಳಲ್ಲಿ ಜಾಗೃತಿ ಮೂಡಿಸಬೇಕು ಎಂದರು.</p>.<p>ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಗ್ರೇಸಿ ಗೋನ್ಸಾಲ್ವೀಸ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಡುಪಿ ಹಿರಿಯ ನಾಗರಿಕರ ಒಕ್ಕೂಟದ ಅಧ್ಯಕ್ಷ ಎ.ಪಿ.ಕೊಡಂಚ,ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮಧುಸೂದನ್ ಉಪಸ್ಥಿತರಿದ್ದರು.</p>.<p>ಹಿರಿಯ ನಾಗರಿಕರ ದಿನಾಚರಣೆಯ ಪ್ರಯುಕ್ತ ನಡೆದ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.<br />ಹಿರಿಯ ವಕೀಲ ಬಿ.ಮುರಳೀಧರ ವಾರಂಬಳ್ಳಿ ಉಪನ್ಯಾಸ ನೀಡಿದರು.</p>.<p>ಉಡುಪಿ ವಕೀಲರ ಸಂಘದ ಅಧ್ಯಕ್ಷ ದಿವಾಕರ ಶೆಟ್ಟಿ, ಸರಳಾ ಬಿ.ಕಾಂಚನ್, ಜಿಲ್ಲಾ ಅಂಗವಿಕಲರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿ ಚಂದ್ರನಾಯ್ಕ್, ಯೋಜನಾ ಸಹಾಯಕ ಗಣೇಶ್ ಮರಾಠೆ, ಡಿಎನ್ಎ ಸಂಸ್ಥೆಯ ರೂಪಲಕ್ಷ್ಮೀ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>