<p><strong>ಉಡುಪಿ:</strong> ಸ್ಮರಣ ಶಕ್ತಿಯಿಂದ ಗ್ರಹಿಸಿದ ವಿಷಯಗಳನ್ನು ನೆನಪಿನಲ್ಲಿ ಇಟ್ಟುಕೊಳ್ಳುವುದೇ ವಿದ್ಯಾಭ್ಯಾಸವಲ್ಲ. ವಿಷಯವನ್ನು ಗ್ರಹಿಸಿದರ ಪರಿಣಾಮ ಚಿತ್ತದಲ್ಲಿ ಆಗಬೇಕು, ಆ ಮೂಲಕ ಸೇವಾ ಮನೋಭಾವವನ್ನು ಅಳವಡಿಸಿಕೊಳ್ಳಬೇಕು ಆಗ ಮಾತ್ರ ವಿದ್ಯಾಭ್ಯಾಸ ಪೂರ್ಣರೂಪವನ್ನು ಪಡೆದಂತೆ ಎಂದು ಪುತ್ತಿಗೆ ಮಠಾಧೀಶ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅಭಿಪ್ರಾಯಪಟ್ಟರು.</p>.<p>ಪರ್ಯಾಯ ಪೂಜಾ ಕಾರ್ಯ ಸಮಾಪನಗೊಳಿಸಿ ಸೀಮೋಲ್ಲಂಘನೆಗಾಗಿ ಉಡುಪಿಯ ಶ್ರೀಮನ್ಮಧ್ವ ಸಿದ್ಧಾಂತ ಪ್ರಬೋಧಕ ಸಂಸ್ಕೃತ ಕಾಲೇಜಿಗೆ ಸೋಮವಾರ ಭೇಟಿ ನೀಡಿ ಎನ್ಎಸ್ಎಸ್ ಶಿಬಿರದ ಸಮಾರೋಪ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಉನ್ನತ ಸಂಸ್ಥೆಗಳು ಕೆಲಸಕ್ಕೆ ಸಿಬ್ಬಂದಿಯನ್ನು ನೇಮಿಸಿಕೊಳ್ಳುವಾಗ ಕೇವಲ ಪ್ರತಿಭೆಯನ್ನಷ್ಟೆ ಗುರುತಿಸುವುದಿಲ್ಲ, ಅದಕ್ಕಿಂತಲೂ ಹೆಚ್ಚಾಗಿ ವ್ಯಕ್ತಿಯಲ್ಲಿರುವ ಸೇವಾ ಮನೋಭಾವದ ಪರೀಕ್ಷೆ ನಡೆಸುತ್ತದೆ ಎಂದರು.</p>.<p>ಪುತ್ತಿಗೆ ಮಠದ ಕಿರಿಯ ಯತಿ ಸುಶ್ರೀಂದ್ರತೀರ್ಥ ಶ್ರೀಪಾದರು ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲ ಸತ್ಯನಾರಾಯಣ ವಿ. ರಾವ್ ಉಭಯಶ್ರೀಗಳನ್ನು ಸ್ವಾಗತಿಸಿದರು.</p>.<p>ಎಸ್.ಎಂ.ಎಸ್.ಪಿ. ಸಭೆಯ ಕೋಶಾಧಿಕಾರಿ ಚಂದ್ರಶೇಖರ ಆಚಾರ್ಯರು ಗೌರವಿಸಿದರು. ಶ್ರೀನಿವಾಸ ತಂತ್ರಿ ಶ್ರೀಗಳನ್ನು ಸನ್ಮಾನಿಸಿದರು.</p>.<p>ಕಾಲೇಜಿನ ಎನ್ಎಸ್ಎಸ್ ಯೋಜನಾಧಿಕಾರಿ ರಾಧಾಕೃಷ್ಣ ಭಟ್ ಕಾರ್ಯಕ್ರಮ ನಿರ್ವಹಿಸಿದರು. ವಿದ್ಯಾರ್ಥಿಗಳಾದ ನಿತಿನ್ ಭಟ್, ಶ್ರಿಕೃಷ್ಣ ಭಟ್, ಪ್ರಹ್ಲಾದ ಭಟ್, ನಾರಾಯಣ ರಾವ್ ವೇದಘೋಷ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ:</strong> ಸ್ಮರಣ ಶಕ್ತಿಯಿಂದ ಗ್ರಹಿಸಿದ ವಿಷಯಗಳನ್ನು ನೆನಪಿನಲ್ಲಿ ಇಟ್ಟುಕೊಳ್ಳುವುದೇ ವಿದ್ಯಾಭ್ಯಾಸವಲ್ಲ. ವಿಷಯವನ್ನು ಗ್ರಹಿಸಿದರ ಪರಿಣಾಮ ಚಿತ್ತದಲ್ಲಿ ಆಗಬೇಕು, ಆ ಮೂಲಕ ಸೇವಾ ಮನೋಭಾವವನ್ನು ಅಳವಡಿಸಿಕೊಳ್ಳಬೇಕು ಆಗ ಮಾತ್ರ ವಿದ್ಯಾಭ್ಯಾಸ ಪೂರ್ಣರೂಪವನ್ನು ಪಡೆದಂತೆ ಎಂದು ಪುತ್ತಿಗೆ ಮಠಾಧೀಶ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅಭಿಪ್ರಾಯಪಟ್ಟರು.</p>.<p>ಪರ್ಯಾಯ ಪೂಜಾ ಕಾರ್ಯ ಸಮಾಪನಗೊಳಿಸಿ ಸೀಮೋಲ್ಲಂಘನೆಗಾಗಿ ಉಡುಪಿಯ ಶ್ರೀಮನ್ಮಧ್ವ ಸಿದ್ಧಾಂತ ಪ್ರಬೋಧಕ ಸಂಸ್ಕೃತ ಕಾಲೇಜಿಗೆ ಸೋಮವಾರ ಭೇಟಿ ನೀಡಿ ಎನ್ಎಸ್ಎಸ್ ಶಿಬಿರದ ಸಮಾರೋಪ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಉನ್ನತ ಸಂಸ್ಥೆಗಳು ಕೆಲಸಕ್ಕೆ ಸಿಬ್ಬಂದಿಯನ್ನು ನೇಮಿಸಿಕೊಳ್ಳುವಾಗ ಕೇವಲ ಪ್ರತಿಭೆಯನ್ನಷ್ಟೆ ಗುರುತಿಸುವುದಿಲ್ಲ, ಅದಕ್ಕಿಂತಲೂ ಹೆಚ್ಚಾಗಿ ವ್ಯಕ್ತಿಯಲ್ಲಿರುವ ಸೇವಾ ಮನೋಭಾವದ ಪರೀಕ್ಷೆ ನಡೆಸುತ್ತದೆ ಎಂದರು.</p>.<p>ಪುತ್ತಿಗೆ ಮಠದ ಕಿರಿಯ ಯತಿ ಸುಶ್ರೀಂದ್ರತೀರ್ಥ ಶ್ರೀಪಾದರು ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲ ಸತ್ಯನಾರಾಯಣ ವಿ. ರಾವ್ ಉಭಯಶ್ರೀಗಳನ್ನು ಸ್ವಾಗತಿಸಿದರು.</p>.<p>ಎಸ್.ಎಂ.ಎಸ್.ಪಿ. ಸಭೆಯ ಕೋಶಾಧಿಕಾರಿ ಚಂದ್ರಶೇಖರ ಆಚಾರ್ಯರು ಗೌರವಿಸಿದರು. ಶ್ರೀನಿವಾಸ ತಂತ್ರಿ ಶ್ರೀಗಳನ್ನು ಸನ್ಮಾನಿಸಿದರು.</p>.<p>ಕಾಲೇಜಿನ ಎನ್ಎಸ್ಎಸ್ ಯೋಜನಾಧಿಕಾರಿ ರಾಧಾಕೃಷ್ಣ ಭಟ್ ಕಾರ್ಯಕ್ರಮ ನಿರ್ವಹಿಸಿದರು. ವಿದ್ಯಾರ್ಥಿಗಳಾದ ನಿತಿನ್ ಭಟ್, ಶ್ರಿಕೃಷ್ಣ ಭಟ್, ಪ್ರಹ್ಲಾದ ಭಟ್, ನಾರಾಯಣ ರಾವ್ ವೇದಘೋಷ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>