<p><strong>ಉಡುಪಿ:</strong> ನಗರದ ಕಿನ್ನಿಮುಲ್ಕಿ ಸ್ವಾಗತ ಗೋಪುರದಿಂದ ಕರಾವಳಿ ಜಂಕ್ಷನ್ ವರೆಗಿನ ರಾಷ್ಟ್ರೀಯ ಹೆದ್ದಾರಿ 66ರ ಸರ್ವಿಸ್ ರಸ್ತೆಗಳನ್ನು ವಿಸ್ತರಣೆ ಮಾಡಬೇಕೆಂಬ ಬೇಡಿಕೆ ಜನರಿಂದ ಕೇಳಿಬಂದಿದೆ.</p>.<p>ಅಂಬಲಪಾಡಿ ಬೈಪಾಸ್ನಲ್ಲಿ ಮೇಲ್ಸೇತುವೆ ಕಾಮಗಾರಿ ನಡೆಯುತ್ತಿದ್ದು, ಈ ಕಾರಣಕ್ಕೆ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳು ಸರ್ವಿಸ್ ರಸ್ತೆಯಲ್ಲೇ ಸಂಚರಿಸುತ್ತಿವೆ. ಇದರಿಂದಾಗಿ ಸರ್ವಿಸ್ ರಸ್ತೆಯು ಸಂಪೂರ್ಣ ಹದಗೆಟ್ಟಿದೆ.</p>.<p>ಸರ್ವಿಸ್ ರಸ್ತೆಯ ಬದಿಯಲ್ಲಿ ಸಮರ್ಪಕ ಚರಂಡಿ ವ್ಯವಸ್ಥೆಯೂ ಇಲ್ಲದ ಕಾರಣ ಮಳೆ ನೀರು ರಸ್ತೆಯಲ್ಲಿ ಹರಿದು ರಸ್ತೆ ಹದಗೆಡುತ್ತಿದೆ. ಮೇಲ್ಸೇತುವೆ ಕಾಮಗಾರಿ ಪೂರ್ಣಗೊಳ್ಳುವ ವೇಳೆಗೆ ಸರ್ವಿಸ್ ರಸ್ತೆಗಳ ವಿಸ್ತರಣೆ ಕಾರ್ಯವೂ ನಡೆಯಬೇಕು. ಇಲ್ಲದಿದ್ದರೆ ಮತ್ತೆ ಜನರಿಗೆ ತೊಂದರೆಯಾಗಲಿದೆ ಎಂದು ಸಾರ್ವಜನಿಕರು ಹೇಳಿದ್ದಾರೆ.</p>.<p>ಈ ಸರ್ವಿಸ್ ರಸ್ತೆ ತೀರಾ ಹದಗೆಟ್ಟು ತಿಂಗಳುಗಳು ಕಳೆದರೂ ಸಂಬಂಧಪಟ್ಟವರು ಹೊಂಡ ಮುಚ್ಚುವ ಕಾರ್ಯಕ್ಕೂ ಮುಂದಾಗಿಲ್ಲ. ಇದರಿಂದ ವಾಹನ ಸವಾರರು ನಿತ್ಯ ಸಂಕಷ್ಟ ಅನುಭವಿಸುವಂತಾಗಿದೆ ಎಂದು ಜನರು ದೂರುತ್ತಾರೆ.</p>.<p>ರಸ್ತೆ ಹೊಂಡಕ್ಕೆ ಹಾಕಿರುವ ಜಲ್ಲಿ ಕಲ್ಲುಗಳು ಎದ್ದು ನಿಂತು, ದ್ವಿಚಕ್ರ ವಾಹನಗಳ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಜೊತೆಗೆ ಈ ಸರ್ವಿಸ್ ರಸ್ತೆಯ ಬದಿಯ ಪಾದಾಚಾರಿ ಮಾರ್ಗವನ್ನು ಗಿಡಗಂಟಿಗಳು ಆವರಿಸಿದ್ದು, ಜನರು ರಸ್ತೆಯಲ್ಲೇ ನಡೆದಾಡಬೇಕಾದ ಸ್ಥಿತಿ ಇದೆ.</p>.<p>ಮೇಲ್ಸೇತುವೆ ಕಾಮಗಾರಿ ನಡೆಯುತ್ತಿರುವ ಕಾರಣ ಈ ಸರ್ವಿಸ್ ರಸ್ತೆಗಳಲ್ಲಿ ಏಕಮುಖ ಸಂಚಾರಕ್ಕೆ ಆದೇಶ ನೀಡಿದರೂ ಎರಡೂ ಕಡೆಗಳಿಂದಲೂ ವಾಹನಗಳು ಸಂಚರಿಸುತ್ತಿರುವುದು ಅಪಾಯ ಆಹ್ವಾನಿಸುತ್ತಿದೆ.</p>.<p>ಈಗ ಮಳೆ ನಿಂತಿದ್ದು, ಸರ್ವಿಸ್ ರಸ್ತೆಯನ್ನು ದುರಸ್ತಿ ಮಾಡಲು ಸಂಬಂಧಪಟ್ಟವರು ಮುಂದಾಗಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.</p>.<p><strong>‘ಸರ್ವಿಸ್ ರಸ್ತೆ ವಿಸ್ತರಣೆ ಅಗತ್ಯ’</strong> </p><p>‘ಕಿನ್ನಿಮುಲ್ಕಿಯಿಂದ ಕರಾವಳಿ ಬೈಪಾಸ್ವರೆಗೆ ರಾಷ್ಟ್ರೀಯ ಹೆದ್ದಾರಿಯ ಸರ್ವಿಸ್ ರಸ್ತೆಗಳ ವಿಸ್ತರಣೆಯು ತುರ್ತು ಅಗತ್ಯವಾಗಿದ್ದು ಸಂಬಂಧಪಟ್ಟವರು ಆಡಳಿತಾತ್ಮಕ ತಾಂತ್ರಿಕ ಮಂಜೂರಾತಿ ಪಡೆದು ರಸ್ತೆ ವಿಸ್ತರಣೆಗೆ ಮುಂದಾಗಬೇಕು’ ಎಂದು ರಾಷ್ಟ್ರೀಯ ಹೆದ್ದಾರಿ 66 ಅಂಬಲಪಾಡಿ ಬಳಕೆದಾರರ ಹಿತರಕ್ಷಣಾ ವೇದಿಕೆ ಸಂಚಾಲಕ ಭಾಸ್ಕರ ಶೆಟ್ಟಿ ಆಗ್ರಹಿಸಿದ್ದಾರೆ.</p><p>‘ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿಯನ್ನೂ ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು. ಇಲ್ಲದಿದ್ದರೆ ಜನರಿಗೆ ಇನ್ನಷ್ಟು ತೊಂದರೆಯಾಗಲಿದೆ. ಕಾಮಗಾರಿ ನಡೆಯುತ್ತಿರುವುದರಿಂದ ಸುತ್ತಿ ಬಳಸಿ ಬರಬೇಕಾಗಿರುವುದರಿಂದ ಈ ಭಾಗದ ಜನರು ರಿಕ್ಷಾಗಳಿಗೆ ದುಬಾರಿ ಬಾಡಿಗೆ ಕೊಡಬೇಕಾದ ಅನಿವಾರ್ಯತೆಯಿದೆ. ದ್ವಿಚಕ್ರ ವಾಹನ ಸವಾರರಿಗೂ ಸರ್ವಿಸ್ ರಸ್ತೆಯಲ್ಲಿ ಸಂಚರಿಸಲು ಸಮಸ್ಯೆಯಾಗುತ್ತಿದೆ’ ಎಂದು ಅವರು ಹೇಳಿದ್ದಾರೆ. </p><p>‘ಸರ್ವಿಸ್ ರಸ್ತೆಯ ವಿಸ್ತರಣೆಯೊಂದಿಗೆ ಸಮರ್ಪಕ ಚರಂಡಿ ವ್ಯವಸ್ಥೆ ಪಾದಾಚಾರಿ ಮಾರ್ಗವೂ ಆಗಬೇಕಿದೆ. ಕಿನ್ನಿಮುಲ್ಕಿಯಿಂದ ಬಲಾಯಿಪಾದೆ ವರೆಗಿನ ಸರ್ವಿಸ್ ರಸ್ತೆಯನ್ನೂ ವಿಸ್ತರಣೆ ಮಾಡಿದರೆ ಜನರಿಗೆ ಅನುಕೂಲವಾಗಲಿದೆ’ ಎಂದು ಅವರು ತಿಳಿಸಿದ್ದಾರೆ.</p>.<div><blockquote>ಸದ್ಯಕ್ಕೆ ಅಂಬಲಪಾಡಿ ಸರ್ವಿಸ್ ರಸ್ತೆ ವಿಸ್ತರಣೆ ಚಿಂತನೆ ಇಲ್ಲ. ಹದಗೆಟ್ಟಿರುವ ಸರ್ವಿಸ್ ರಸ್ತೆಯನ್ನು ಕೂಡಲೇ ದುರಸ್ತಿಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಮೇಲ್ಸೇತುವೆ ಕಾಮಗಾರಿಯೂ ಕಾಲ ಮಿತಿಯೊಳಗೆ ಪೂರ್ಣಗೊಳ್ಳಲಿದೆ </blockquote><span class="attribution">-ಕೋಟ ಶ್ರೀನಿವಾಸ ಪೂಜಾರಿ, ಸಂಸದ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ:</strong> ನಗರದ ಕಿನ್ನಿಮುಲ್ಕಿ ಸ್ವಾಗತ ಗೋಪುರದಿಂದ ಕರಾವಳಿ ಜಂಕ್ಷನ್ ವರೆಗಿನ ರಾಷ್ಟ್ರೀಯ ಹೆದ್ದಾರಿ 66ರ ಸರ್ವಿಸ್ ರಸ್ತೆಗಳನ್ನು ವಿಸ್ತರಣೆ ಮಾಡಬೇಕೆಂಬ ಬೇಡಿಕೆ ಜನರಿಂದ ಕೇಳಿಬಂದಿದೆ.</p>.<p>ಅಂಬಲಪಾಡಿ ಬೈಪಾಸ್ನಲ್ಲಿ ಮೇಲ್ಸೇತುವೆ ಕಾಮಗಾರಿ ನಡೆಯುತ್ತಿದ್ದು, ಈ ಕಾರಣಕ್ಕೆ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳು ಸರ್ವಿಸ್ ರಸ್ತೆಯಲ್ಲೇ ಸಂಚರಿಸುತ್ತಿವೆ. ಇದರಿಂದಾಗಿ ಸರ್ವಿಸ್ ರಸ್ತೆಯು ಸಂಪೂರ್ಣ ಹದಗೆಟ್ಟಿದೆ.</p>.<p>ಸರ್ವಿಸ್ ರಸ್ತೆಯ ಬದಿಯಲ್ಲಿ ಸಮರ್ಪಕ ಚರಂಡಿ ವ್ಯವಸ್ಥೆಯೂ ಇಲ್ಲದ ಕಾರಣ ಮಳೆ ನೀರು ರಸ್ತೆಯಲ್ಲಿ ಹರಿದು ರಸ್ತೆ ಹದಗೆಡುತ್ತಿದೆ. ಮೇಲ್ಸೇತುವೆ ಕಾಮಗಾರಿ ಪೂರ್ಣಗೊಳ್ಳುವ ವೇಳೆಗೆ ಸರ್ವಿಸ್ ರಸ್ತೆಗಳ ವಿಸ್ತರಣೆ ಕಾರ್ಯವೂ ನಡೆಯಬೇಕು. ಇಲ್ಲದಿದ್ದರೆ ಮತ್ತೆ ಜನರಿಗೆ ತೊಂದರೆಯಾಗಲಿದೆ ಎಂದು ಸಾರ್ವಜನಿಕರು ಹೇಳಿದ್ದಾರೆ.</p>.<p>ಈ ಸರ್ವಿಸ್ ರಸ್ತೆ ತೀರಾ ಹದಗೆಟ್ಟು ತಿಂಗಳುಗಳು ಕಳೆದರೂ ಸಂಬಂಧಪಟ್ಟವರು ಹೊಂಡ ಮುಚ್ಚುವ ಕಾರ್ಯಕ್ಕೂ ಮುಂದಾಗಿಲ್ಲ. ಇದರಿಂದ ವಾಹನ ಸವಾರರು ನಿತ್ಯ ಸಂಕಷ್ಟ ಅನುಭವಿಸುವಂತಾಗಿದೆ ಎಂದು ಜನರು ದೂರುತ್ತಾರೆ.</p>.<p>ರಸ್ತೆ ಹೊಂಡಕ್ಕೆ ಹಾಕಿರುವ ಜಲ್ಲಿ ಕಲ್ಲುಗಳು ಎದ್ದು ನಿಂತು, ದ್ವಿಚಕ್ರ ವಾಹನಗಳ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಜೊತೆಗೆ ಈ ಸರ್ವಿಸ್ ರಸ್ತೆಯ ಬದಿಯ ಪಾದಾಚಾರಿ ಮಾರ್ಗವನ್ನು ಗಿಡಗಂಟಿಗಳು ಆವರಿಸಿದ್ದು, ಜನರು ರಸ್ತೆಯಲ್ಲೇ ನಡೆದಾಡಬೇಕಾದ ಸ್ಥಿತಿ ಇದೆ.</p>.<p>ಮೇಲ್ಸೇತುವೆ ಕಾಮಗಾರಿ ನಡೆಯುತ್ತಿರುವ ಕಾರಣ ಈ ಸರ್ವಿಸ್ ರಸ್ತೆಗಳಲ್ಲಿ ಏಕಮುಖ ಸಂಚಾರಕ್ಕೆ ಆದೇಶ ನೀಡಿದರೂ ಎರಡೂ ಕಡೆಗಳಿಂದಲೂ ವಾಹನಗಳು ಸಂಚರಿಸುತ್ತಿರುವುದು ಅಪಾಯ ಆಹ್ವಾನಿಸುತ್ತಿದೆ.</p>.<p>ಈಗ ಮಳೆ ನಿಂತಿದ್ದು, ಸರ್ವಿಸ್ ರಸ್ತೆಯನ್ನು ದುರಸ್ತಿ ಮಾಡಲು ಸಂಬಂಧಪಟ್ಟವರು ಮುಂದಾಗಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.</p>.<p><strong>‘ಸರ್ವಿಸ್ ರಸ್ತೆ ವಿಸ್ತರಣೆ ಅಗತ್ಯ’</strong> </p><p>‘ಕಿನ್ನಿಮುಲ್ಕಿಯಿಂದ ಕರಾವಳಿ ಬೈಪಾಸ್ವರೆಗೆ ರಾಷ್ಟ್ರೀಯ ಹೆದ್ದಾರಿಯ ಸರ್ವಿಸ್ ರಸ್ತೆಗಳ ವಿಸ್ತರಣೆಯು ತುರ್ತು ಅಗತ್ಯವಾಗಿದ್ದು ಸಂಬಂಧಪಟ್ಟವರು ಆಡಳಿತಾತ್ಮಕ ತಾಂತ್ರಿಕ ಮಂಜೂರಾತಿ ಪಡೆದು ರಸ್ತೆ ವಿಸ್ತರಣೆಗೆ ಮುಂದಾಗಬೇಕು’ ಎಂದು ರಾಷ್ಟ್ರೀಯ ಹೆದ್ದಾರಿ 66 ಅಂಬಲಪಾಡಿ ಬಳಕೆದಾರರ ಹಿತರಕ್ಷಣಾ ವೇದಿಕೆ ಸಂಚಾಲಕ ಭಾಸ್ಕರ ಶೆಟ್ಟಿ ಆಗ್ರಹಿಸಿದ್ದಾರೆ.</p><p>‘ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿಯನ್ನೂ ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು. ಇಲ್ಲದಿದ್ದರೆ ಜನರಿಗೆ ಇನ್ನಷ್ಟು ತೊಂದರೆಯಾಗಲಿದೆ. ಕಾಮಗಾರಿ ನಡೆಯುತ್ತಿರುವುದರಿಂದ ಸುತ್ತಿ ಬಳಸಿ ಬರಬೇಕಾಗಿರುವುದರಿಂದ ಈ ಭಾಗದ ಜನರು ರಿಕ್ಷಾಗಳಿಗೆ ದುಬಾರಿ ಬಾಡಿಗೆ ಕೊಡಬೇಕಾದ ಅನಿವಾರ್ಯತೆಯಿದೆ. ದ್ವಿಚಕ್ರ ವಾಹನ ಸವಾರರಿಗೂ ಸರ್ವಿಸ್ ರಸ್ತೆಯಲ್ಲಿ ಸಂಚರಿಸಲು ಸಮಸ್ಯೆಯಾಗುತ್ತಿದೆ’ ಎಂದು ಅವರು ಹೇಳಿದ್ದಾರೆ. </p><p>‘ಸರ್ವಿಸ್ ರಸ್ತೆಯ ವಿಸ್ತರಣೆಯೊಂದಿಗೆ ಸಮರ್ಪಕ ಚರಂಡಿ ವ್ಯವಸ್ಥೆ ಪಾದಾಚಾರಿ ಮಾರ್ಗವೂ ಆಗಬೇಕಿದೆ. ಕಿನ್ನಿಮುಲ್ಕಿಯಿಂದ ಬಲಾಯಿಪಾದೆ ವರೆಗಿನ ಸರ್ವಿಸ್ ರಸ್ತೆಯನ್ನೂ ವಿಸ್ತರಣೆ ಮಾಡಿದರೆ ಜನರಿಗೆ ಅನುಕೂಲವಾಗಲಿದೆ’ ಎಂದು ಅವರು ತಿಳಿಸಿದ್ದಾರೆ.</p>.<div><blockquote>ಸದ್ಯಕ್ಕೆ ಅಂಬಲಪಾಡಿ ಸರ್ವಿಸ್ ರಸ್ತೆ ವಿಸ್ತರಣೆ ಚಿಂತನೆ ಇಲ್ಲ. ಹದಗೆಟ್ಟಿರುವ ಸರ್ವಿಸ್ ರಸ್ತೆಯನ್ನು ಕೂಡಲೇ ದುರಸ್ತಿಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಮೇಲ್ಸೇತುವೆ ಕಾಮಗಾರಿಯೂ ಕಾಲ ಮಿತಿಯೊಳಗೆ ಪೂರ್ಣಗೊಳ್ಳಲಿದೆ </blockquote><span class="attribution">-ಕೋಟ ಶ್ರೀನಿವಾಸ ಪೂಜಾರಿ, ಸಂಸದ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>