ರಥಬೀದಿಯಲ್ಲಿ ಅಡ್ಡಾಡುವ ವೃದ್ಧೆಯೊಬ್ಬರು ಶಾರಿಕ್ನ ಮೊಬೈಲ್ ಪಡೆದುಕೊಂಡು ಮೊಮ್ಮಗನಿಗೆ ಕರೆ ಮಾಡಿ ಮಾತನಾಡಿದ್ದು, ಕರೆ ಆಧಾರದ ಮೇಲೆ ಪೊಲೀಸರು ಉಡುಪಿಗೆ ಬಂದು ತನಿಖೆ ನಡೆಸಿದ್ದಾರೆ. ಅ.16ರಂದು ಉಡುಪಿಯ ರಥಬೀದಿಗೆ ಬಂದಿದ್ದ ಶಾರಿಕ್ ಬಳಿಕ ಕಾರ್ಕಳ ಮಾರ್ಗವಾಗಿ ಬಂಟ್ವಾಳಕ್ಕೆ ತೆರಳಿದ್ದಾನೆ. ಶಿವಮೊಗ್ಗದಲ್ಲಿ ನಡೆದ ಚೂರಿ ಇರಿತ ಪ್ರಕರಣದಲ್ಲಿ ಶಾರಿಕ್ ಆರೋಪಿಯಾಗಿದ್ದು ತಲೆ ಮರೆಸಿಕೊಂಡಿದ್ದ ಎಂಬ ಮಾಹಿತಿ ಲಭ್ಯವಾಗಿದೆ.