ಪಡಿತರ ಚೀಟಿಯಲ್ಲಿರುವ ಕುಟುಂಬದ ಸದಸ್ಯರು ಬೆರಳಚ್ಚು ನೀಡಲು ಇದ್ದ ಗಡುವನ್ನು ಮಾರ್ಚ್ 31ರವರೆಗೆ ವಿಸ್ತರಿಸಲಾಗಿದೆ. ಕೊಡಗು, ಕಾರವಾರ, ಉಡುಪಿಯಲ್ಲಿ ಸರ್ವರ್ ಸಮಸ್ಯೆ ಹೆಚ್ಚಾಗಿದ್ದು, ತಾಂತ್ರಿಕ ಸಮಸ್ಯೆ ಬಗೆಹರಿಸುವ ಅಥವಾ ಕೆಲವು ಜಿಲ್ಲೆಗಳಿಗೆ ನಿಯಮ ಸಡಿಲಿಸುವ ಬಗ್ಗೆ ಮುಖ್ಯಮಂತ್ರಿ ಬಳಿ ಚರ್ಚಿಸಲಾಗುವುದು ಎಂದು ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದರು.