<p><strong>ಉಡುಪಿ:</strong> ಶಿರೂರು ಮಠಾಧೀಶ ವೇದವರ್ಧನ ತೀರ್ಥ ಶ್ರೀಪಾದರ ಪರ್ಯಾಯ ಮಹೋತ್ಸವಕ್ಕೆ ಪೂರ್ವಭಾವಿಯಾಗಿ ಚಪ್ಪರ ಮುಹೂರ್ತ ಶುಕ್ರವಾರ ನೆರವೇರಿತು.</p>.<p>ಕೃಷ್ಣಮಠದ ಪಾರ್ಕಿಂಗ್ ಬಳಿ ವಿದ್ಯೋದಯ ಶಾಲೆಯ ಹಿಂಭಾಗದ ಪ್ರದೇಶದಲ್ಲಿ ಸುದರ್ಶನ್ ಭಟ್ ನೇತೃತ್ವದಲ್ಲಿ ಚಪ್ಪರ ಮುಹೂರ್ತದ ಧಾರ್ಮಿಕ ವಿಧಿ ವಿಧಾನಗಳನ್ನು ನಡೆಸಲಾಯಿತು.</p>.<p>ಮಠದ ದಿವಾನ ಉದಯಕುಮಾರ್ ಸರಳತ್ತಾಯ, ಸ್ವಾಗತ ಸಮಿತಿ ಪ್ರಧಾನ ಕಾರ್ಯದರ್ಶಿ ಮಟ್ಟಾರ್ ರತ್ನಾಕರ್ ಹೆಗ್ಡೆ, ಕಾರ್ಯದರ್ಶಿ ಮೋಹನ್ ಭಟ್ , ಸಂಚಾಲಕ ಸುಪ್ರಸಾದ್ ಶೆಟ್ಟಿ, ಶ್ರೀಕಾಂತ್ ನಾಯಕ್ , ರಾಜೇಶ್ ರಾವ್, ಪದ್ಮ ರತ್ನಾಕರ್, ವೀಣಾ ಎಸ್. ಶೆಟ್ಟಿ, ಪ್ರಚಾರ ಸಮಿತಿ ಸಂಚಾಲಕ ನಂದನ್ ಜೈನ್, ವಿಷ್ಣು ಪ್ರಸಾದ್ ಪಾಡೀಗಾರ್, ಮಠದ ಕೊಟ್ಟಾರಿ ಸದಾಶಿವ ಎಂ. ಭಟ್ ಉಪಸ್ಥಿತರಿದ್ದರು.</p>.<p>ಶ್ರೀಕೃಷ್ಣ ಮಠದ ಪರ್ಯಾಯದ ಸಂಪ್ರದಾಯದಂತೆ ನಾಲ್ಕು ಮುಹೂರ್ತಗಳ ಬಳಿಕ ಚಪ್ಪರ ಮುಹೂರ್ತ ನಡೆಯುತ್ತದೆ. ಈ ಮೂಲಕ ಪರ್ಯಾಯದ ಅತಿಥಿ ಸತ್ಕಾರ, ಅನ್ನ ಸಂತರ್ಪಣೆ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆಗಾಗಿ ವಿಶೇಷ ವ್ಯವಸ್ಥೆ ಮಾಡಲಾಗುತ್ತದೆ. ಈ ಎಲ್ಲಾ ಕಾರ್ಯಕ್ರಮಗಳಿಗೆ ಮೊದಲ ಕಾರ್ಯಕ್ರಮವಾಗಿ ಚಪ್ಪರ ಮುಹೂರ್ತ ನಡೆಸಲಾಗುತ್ತದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ:</strong> ಶಿರೂರು ಮಠಾಧೀಶ ವೇದವರ್ಧನ ತೀರ್ಥ ಶ್ರೀಪಾದರ ಪರ್ಯಾಯ ಮಹೋತ್ಸವಕ್ಕೆ ಪೂರ್ವಭಾವಿಯಾಗಿ ಚಪ್ಪರ ಮುಹೂರ್ತ ಶುಕ್ರವಾರ ನೆರವೇರಿತು.</p>.<p>ಕೃಷ್ಣಮಠದ ಪಾರ್ಕಿಂಗ್ ಬಳಿ ವಿದ್ಯೋದಯ ಶಾಲೆಯ ಹಿಂಭಾಗದ ಪ್ರದೇಶದಲ್ಲಿ ಸುದರ್ಶನ್ ಭಟ್ ನೇತೃತ್ವದಲ್ಲಿ ಚಪ್ಪರ ಮುಹೂರ್ತದ ಧಾರ್ಮಿಕ ವಿಧಿ ವಿಧಾನಗಳನ್ನು ನಡೆಸಲಾಯಿತು.</p>.<p>ಮಠದ ದಿವಾನ ಉದಯಕುಮಾರ್ ಸರಳತ್ತಾಯ, ಸ್ವಾಗತ ಸಮಿತಿ ಪ್ರಧಾನ ಕಾರ್ಯದರ್ಶಿ ಮಟ್ಟಾರ್ ರತ್ನಾಕರ್ ಹೆಗ್ಡೆ, ಕಾರ್ಯದರ್ಶಿ ಮೋಹನ್ ಭಟ್ , ಸಂಚಾಲಕ ಸುಪ್ರಸಾದ್ ಶೆಟ್ಟಿ, ಶ್ರೀಕಾಂತ್ ನಾಯಕ್ , ರಾಜೇಶ್ ರಾವ್, ಪದ್ಮ ರತ್ನಾಕರ್, ವೀಣಾ ಎಸ್. ಶೆಟ್ಟಿ, ಪ್ರಚಾರ ಸಮಿತಿ ಸಂಚಾಲಕ ನಂದನ್ ಜೈನ್, ವಿಷ್ಣು ಪ್ರಸಾದ್ ಪಾಡೀಗಾರ್, ಮಠದ ಕೊಟ್ಟಾರಿ ಸದಾಶಿವ ಎಂ. ಭಟ್ ಉಪಸ್ಥಿತರಿದ್ದರು.</p>.<p>ಶ್ರೀಕೃಷ್ಣ ಮಠದ ಪರ್ಯಾಯದ ಸಂಪ್ರದಾಯದಂತೆ ನಾಲ್ಕು ಮುಹೂರ್ತಗಳ ಬಳಿಕ ಚಪ್ಪರ ಮುಹೂರ್ತ ನಡೆಯುತ್ತದೆ. ಈ ಮೂಲಕ ಪರ್ಯಾಯದ ಅತಿಥಿ ಸತ್ಕಾರ, ಅನ್ನ ಸಂತರ್ಪಣೆ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆಗಾಗಿ ವಿಶೇಷ ವ್ಯವಸ್ಥೆ ಮಾಡಲಾಗುತ್ತದೆ. ಈ ಎಲ್ಲಾ ಕಾರ್ಯಕ್ರಮಗಳಿಗೆ ಮೊದಲ ಕಾರ್ಯಕ್ರಮವಾಗಿ ಚಪ್ಪರ ಮುಹೂರ್ತ ನಡೆಸಲಾಗುತ್ತದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>