<p><strong>ಉಡುಪಿ</strong>: ಶೀರೂರು ಮಠಾಧೀಶ ವೇದವರ್ಧನತೀರ್ಥ ಶ್ರೀಪಾದರ ಪ್ರಥಮ ಪರ್ಯಾಯದ ಅಂಗವಾಗಿ ಹೊರೆಕಾಣಿಕೆ ಸಲ್ಲಿಕೆಗೆ ಶನಿವಾರ ಚಾಲನೆ ನೀಡಲಾಯಿತು.</p>.<p>ಶೀರೂರು ಮಠದ ದಿವಾನ ಉದಯಕುಮಾರ್ ಸರಳತ್ತಾಯ <br>ಅವರು ನಗರದ ಜೋಡುಕಟ್ಟೆ ಬಳಿ ಹೊರೆಕಾಣಿಕೆ ಮೆರವಣಿಗೆಗೆ ಚಾಲನೆ ನೀಡಿದರು.</p>.<p>ಈ ಸಂದರ್ಭದಲ್ಲಿ ಮಾತನಾಡಿದ ಅವರು, ಶೀರೂರು ಪರ್ಯಾಯ <br>ಎಂದರೆ ಭಕ್ತರ ಪರ್ಯಾಯ. ಕೃಷ್ಣ ಭಕ್ತರೆಲ್ಲರೂ ಈ ಮಹೋತ್ಸವದಲ್ಲಿ ಭಾಗಿಗಳಾಗಬೇಕು. ಅನ್ನಬ್ರಹ್ಮ ಉಡುಪಿ ಶ್ರೀಕೃಷ್ಣನ ಸೇವೆಯಲ್ಲಿ ಪಾಲ್ಗೊಳ್ಳಬೇಕು ಎಂದರು.</p>.<p>ಹೊರೆಕಾಣಿಕೆ ಸಮಿತಿ ಸಂಚಾಲಕ ಬೈಕಾಡಿ ಸುಪ್ರಸಾದ ಶೆಟ್ಟಿ ನೇತೃತ್ವದಲ್ಲಿ ಹೊರೆಕಾಣಿಕೆ ಮೆರವಣಿಗೆ ನಡೆದಿದ್ದು, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಒಕ್ಕೂಟ ಹಾಗೂ ಬೆಳ್ತಂಗಡಿ ಭಾಗದಿಂದ ಹೊರೆಕಾಣಿಕೆ ಸಲ್ಲಿಕೆಯಾಯಿತು.</p>.<p>ದವಸಧಾನ್ಯ, ಅಕ್ಕಿಮುಡಿಗಳು, ತರಕಾರಿ ಇತ್ಯಾದಿಗಳನ್ನು ಸಾಂಪ್ರದಾಯಿಕ ಮೆರವಣಿಗೆ ಮೂಲಕ ಕೊಂಡೊಯ್ದು, ಕೃಷ್ಣಮಠ ಪಾರ್ಕಿಂಗ್ ಪ್ರದೇಶದ ಬಳಿ ನಿರ್ಮಿಸಿರುವ ಉಗ್ರಾಣದಲ್ಲಿರಿಸಲಾಯಿತು. ಭಾವಿ ಪರ್ಯಾಯ ಶೀರೂರು ಶ್ರೀ ವೇದವರ್ಧನತೀರ್ಥ ಶ್ರೀಪಾದರು ಉಗ್ರಾಣಕ್ಕೆ ಭೇಟಿ ನೀಡಿದರು.</p>.<p>ಪರ್ಯಾಯ ಸ್ವಾಗತ ಸಮಿತಿ ಅಧ್ಯಕ್ಷ ಶಾಸಕ ಯಶ್ಪಾಲ್ ಸುವರ್ಣ, ಕಾರ್ಯದರ್ಶಿ ಮೋಹನ ಭಟ್, ಮಠದ ಪಾರುಪತ್ಯಗಾರ ಶ್ರೀಶ ಭಟ್ ಕಡೆಕಾರ್, ವಿಜಯ ಕೊಡವೂರು, ಸಂದೀಪ ಮಂಜ, ರಘುಪತಿ ರಾವ್, ಪದ್ಮಾ ರತ್ನಾಕರ್ ಪಾಲ್ಗೊಂಡಿದ್ದರು.</p>.<p>ಜ. 17ರವರೆಗೆ ಪ್ರತಿದಿನ ಹೊರೆಕಾಣಿಕೆ ಸಮರ್ಪಣೆಯಾಗಲಿದೆ.</p>.<p>ಜ. 17ರವರೆಗೆ ಪ್ರತಿದಿನ ಹೊರೆಕಾಣಿಕೆ ಸಮರ್ಪಣೆ ಕೃಷ್ಣ ಭಕ್ತರೆಲ್ಲರೂ ಈ ಮಹೋತ್ಸವದಲ್ಲಿ ಭಾಗಿಗಳಾಗಿ: ಉದಯಕುಮಾರ್</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ</strong>: ಶೀರೂರು ಮಠಾಧೀಶ ವೇದವರ್ಧನತೀರ್ಥ ಶ್ರೀಪಾದರ ಪ್ರಥಮ ಪರ್ಯಾಯದ ಅಂಗವಾಗಿ ಹೊರೆಕಾಣಿಕೆ ಸಲ್ಲಿಕೆಗೆ ಶನಿವಾರ ಚಾಲನೆ ನೀಡಲಾಯಿತು.</p>.<p>ಶೀರೂರು ಮಠದ ದಿವಾನ ಉದಯಕುಮಾರ್ ಸರಳತ್ತಾಯ <br>ಅವರು ನಗರದ ಜೋಡುಕಟ್ಟೆ ಬಳಿ ಹೊರೆಕಾಣಿಕೆ ಮೆರವಣಿಗೆಗೆ ಚಾಲನೆ ನೀಡಿದರು.</p>.<p>ಈ ಸಂದರ್ಭದಲ್ಲಿ ಮಾತನಾಡಿದ ಅವರು, ಶೀರೂರು ಪರ್ಯಾಯ <br>ಎಂದರೆ ಭಕ್ತರ ಪರ್ಯಾಯ. ಕೃಷ್ಣ ಭಕ್ತರೆಲ್ಲರೂ ಈ ಮಹೋತ್ಸವದಲ್ಲಿ ಭಾಗಿಗಳಾಗಬೇಕು. ಅನ್ನಬ್ರಹ್ಮ ಉಡುಪಿ ಶ್ರೀಕೃಷ್ಣನ ಸೇವೆಯಲ್ಲಿ ಪಾಲ್ಗೊಳ್ಳಬೇಕು ಎಂದರು.</p>.<p>ಹೊರೆಕಾಣಿಕೆ ಸಮಿತಿ ಸಂಚಾಲಕ ಬೈಕಾಡಿ ಸುಪ್ರಸಾದ ಶೆಟ್ಟಿ ನೇತೃತ್ವದಲ್ಲಿ ಹೊರೆಕಾಣಿಕೆ ಮೆರವಣಿಗೆ ನಡೆದಿದ್ದು, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಒಕ್ಕೂಟ ಹಾಗೂ ಬೆಳ್ತಂಗಡಿ ಭಾಗದಿಂದ ಹೊರೆಕಾಣಿಕೆ ಸಲ್ಲಿಕೆಯಾಯಿತು.</p>.<p>ದವಸಧಾನ್ಯ, ಅಕ್ಕಿಮುಡಿಗಳು, ತರಕಾರಿ ಇತ್ಯಾದಿಗಳನ್ನು ಸಾಂಪ್ರದಾಯಿಕ ಮೆರವಣಿಗೆ ಮೂಲಕ ಕೊಂಡೊಯ್ದು, ಕೃಷ್ಣಮಠ ಪಾರ್ಕಿಂಗ್ ಪ್ರದೇಶದ ಬಳಿ ನಿರ್ಮಿಸಿರುವ ಉಗ್ರಾಣದಲ್ಲಿರಿಸಲಾಯಿತು. ಭಾವಿ ಪರ್ಯಾಯ ಶೀರೂರು ಶ್ರೀ ವೇದವರ್ಧನತೀರ್ಥ ಶ್ರೀಪಾದರು ಉಗ್ರಾಣಕ್ಕೆ ಭೇಟಿ ನೀಡಿದರು.</p>.<p>ಪರ್ಯಾಯ ಸ್ವಾಗತ ಸಮಿತಿ ಅಧ್ಯಕ್ಷ ಶಾಸಕ ಯಶ್ಪಾಲ್ ಸುವರ್ಣ, ಕಾರ್ಯದರ್ಶಿ ಮೋಹನ ಭಟ್, ಮಠದ ಪಾರುಪತ್ಯಗಾರ ಶ್ರೀಶ ಭಟ್ ಕಡೆಕಾರ್, ವಿಜಯ ಕೊಡವೂರು, ಸಂದೀಪ ಮಂಜ, ರಘುಪತಿ ರಾವ್, ಪದ್ಮಾ ರತ್ನಾಕರ್ ಪಾಲ್ಗೊಂಡಿದ್ದರು.</p>.<p>ಜ. 17ರವರೆಗೆ ಪ್ರತಿದಿನ ಹೊರೆಕಾಣಿಕೆ ಸಮರ್ಪಣೆಯಾಗಲಿದೆ.</p>.<p>ಜ. 17ರವರೆಗೆ ಪ್ರತಿದಿನ ಹೊರೆಕಾಣಿಕೆ ಸಮರ್ಪಣೆ ಕೃಷ್ಣ ಭಕ್ತರೆಲ್ಲರೂ ಈ ಮಹೋತ್ಸವದಲ್ಲಿ ಭಾಗಿಗಳಾಗಿ: ಉದಯಕುಮಾರ್</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>