<p><strong>ಶಿರ್ವ:</strong> ಕೋಟೆ ಗ್ರಾ.ಪಂ. ವ್ಯಾಪ್ತಿಯ ಮಹಾಲಕ್ಷ್ಮಿ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆಯು ಅಧ್ಯಕ್ಷೆ ಚಂದ್ರಾವತಿ ಅವರ ಅಧ್ಯಕ್ಷತೆಯಲ್ಲಿ ಸಮಾಜ ಮಂದಿರ ಕಟ್ಟಡದಲ್ಲಿ ಶುಕ್ರವಾರ ನಡೆಯಿತು.</p>.<p>ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಕೋಟೆ ಗ್ರಾ.ಪಂ. ಅಧ್ಯಕ್ಷೆ ಪ್ರಮೀಳಾ ಜತ್ತನ್ನ, ‘ಸಂಜೀವಿನಿ ಸಂಘಗಳು ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿ ಮಾಡಿದ್ದು, ಇದರ ಸದುಪಯೋಗ ಪಡೆದುಕೊಂಡಲ್ಲಿ ಗ್ರಾಮದ ಪ್ರಗತಿಗೆ ಸಹಕಾರವಾಗುತ್ತದೆ. ಮುಂದಿನ ದಿನಗಳಲ್ಲಿ ನಮ್ಮ ಗ್ರಾಮದಲ್ಲಿ ಸಂಜೀವಿನಿ ಸಂತೆ ಪ್ರಾರಂಭಿಸಲಾಗುವುದು’ ಎಂದರು.</p>.<p>ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಯೋಗೀಶ್ ಮಾತನಾಡಿ, ‘ಸಂಜೀವಿನಿ ಸಂಘವು ಕೋಟೆ ಗ್ರಾಮದಲ್ಲಿ ತ್ಯಾಜ್ಯ ವಿಲೇವಾರಿಯನ್ನು ಉತ್ತಮ ರೀತಿಯಲ್ಲಿ ನಿರ್ವಹಿಸುತ್ತಿದ್ದು, ಗ್ರಾಮಸ್ಥರು ಘನ ಮತ್ತು ದ್ರವ ತ್ಯಾಜ್ಯವನ್ನು ಮೂಲದಲ್ಲಿಯೇ ವಿಂಗಡಿಸಿ ನೀಡಿ ಸಹಕರಿಸಬೇಕು’ ಎಂದು ಕೋರಿದರು.</p>.<p>ರೈತ ಉತ್ಪಾದಕ ಕಂಪನಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಗಂಧ್ ಅವರು, ಕೋಳಿ ಸಾಕಾಣಿಕೆ ಹಾಗೂ ಕೃಷಿ ಉತ್ಪನ್ನಗಳ ಬಗ್ಗೆ ಮಾಹಿತಿ ನೀಡಿದರು.</p>.<p>ಸಮುದಾಯ ಆರೋಗ್ಯ ಅಧಿಕಾರಿ ಸನತ್ ಶೆಟ್ಟಿ, ಆರೋಗ್ಯ ಮಾಹಿತಿ ನೀಡಿದರು. ಕೋಟೆ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಶೃತಿ ಕಾಂಚನ್, ಕಾರ್ಯದರ್ಶಿ ಸುಮಿತ್ರ ಇದ್ದರು.</p>.<p>ದೀಪಿಕಾ ಸ್ವಾಗತಿಸಿದರು. ಕಾರ್ಯದರ್ಶಿ ಕೀರ್ತನಾ ವರದಿ ವಾಚಿಸಿದರು. ಎಂ.ಬಿ.ಕೆ ಚಂದ್ರಕಲಾ ಜಮಾ ಖರ್ಚು ಮಂಡಿಸಿದರು. ಸುಮಲತಾ ನಿರೂಪಿಸಿದರು. ಲಕ್ಷ್ಮಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರ್ವ:</strong> ಕೋಟೆ ಗ್ರಾ.ಪಂ. ವ್ಯಾಪ್ತಿಯ ಮಹಾಲಕ್ಷ್ಮಿ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆಯು ಅಧ್ಯಕ್ಷೆ ಚಂದ್ರಾವತಿ ಅವರ ಅಧ್ಯಕ್ಷತೆಯಲ್ಲಿ ಸಮಾಜ ಮಂದಿರ ಕಟ್ಟಡದಲ್ಲಿ ಶುಕ್ರವಾರ ನಡೆಯಿತು.</p>.<p>ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಕೋಟೆ ಗ್ರಾ.ಪಂ. ಅಧ್ಯಕ್ಷೆ ಪ್ರಮೀಳಾ ಜತ್ತನ್ನ, ‘ಸಂಜೀವಿನಿ ಸಂಘಗಳು ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿ ಮಾಡಿದ್ದು, ಇದರ ಸದುಪಯೋಗ ಪಡೆದುಕೊಂಡಲ್ಲಿ ಗ್ರಾಮದ ಪ್ರಗತಿಗೆ ಸಹಕಾರವಾಗುತ್ತದೆ. ಮುಂದಿನ ದಿನಗಳಲ್ಲಿ ನಮ್ಮ ಗ್ರಾಮದಲ್ಲಿ ಸಂಜೀವಿನಿ ಸಂತೆ ಪ್ರಾರಂಭಿಸಲಾಗುವುದು’ ಎಂದರು.</p>.<p>ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಯೋಗೀಶ್ ಮಾತನಾಡಿ, ‘ಸಂಜೀವಿನಿ ಸಂಘವು ಕೋಟೆ ಗ್ರಾಮದಲ್ಲಿ ತ್ಯಾಜ್ಯ ವಿಲೇವಾರಿಯನ್ನು ಉತ್ತಮ ರೀತಿಯಲ್ಲಿ ನಿರ್ವಹಿಸುತ್ತಿದ್ದು, ಗ್ರಾಮಸ್ಥರು ಘನ ಮತ್ತು ದ್ರವ ತ್ಯಾಜ್ಯವನ್ನು ಮೂಲದಲ್ಲಿಯೇ ವಿಂಗಡಿಸಿ ನೀಡಿ ಸಹಕರಿಸಬೇಕು’ ಎಂದು ಕೋರಿದರು.</p>.<p>ರೈತ ಉತ್ಪಾದಕ ಕಂಪನಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಗಂಧ್ ಅವರು, ಕೋಳಿ ಸಾಕಾಣಿಕೆ ಹಾಗೂ ಕೃಷಿ ಉತ್ಪನ್ನಗಳ ಬಗ್ಗೆ ಮಾಹಿತಿ ನೀಡಿದರು.</p>.<p>ಸಮುದಾಯ ಆರೋಗ್ಯ ಅಧಿಕಾರಿ ಸನತ್ ಶೆಟ್ಟಿ, ಆರೋಗ್ಯ ಮಾಹಿತಿ ನೀಡಿದರು. ಕೋಟೆ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಶೃತಿ ಕಾಂಚನ್, ಕಾರ್ಯದರ್ಶಿ ಸುಮಿತ್ರ ಇದ್ದರು.</p>.<p>ದೀಪಿಕಾ ಸ್ವಾಗತಿಸಿದರು. ಕಾರ್ಯದರ್ಶಿ ಕೀರ್ತನಾ ವರದಿ ವಾಚಿಸಿದರು. ಎಂ.ಬಿ.ಕೆ ಚಂದ್ರಕಲಾ ಜಮಾ ಖರ್ಚು ಮಂಡಿಸಿದರು. ಸುಮಲತಾ ನಿರೂಪಿಸಿದರು. ಲಕ್ಷ್ಮಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>