<p>ಶಿರ್ವ: ‘ಸರ್ಕಾರದ ಕಾರ್ಯಕ್ರಮ, ದಾನಿಗಳು ಮತ್ತು ಸಂಘ ಸಂಸ್ಥೆಗಳ ನೆರವು ಹಿಂದಿಗಿಂತಲೂ ಇಂದು ಸಕಾಲದಲ್ಲಿ ದೊರೆಯುತ್ತಿರುವುದರಿಂದ ವಿದ್ಯಾರ್ಥಿಗಳಿಗೆ ಶಿಕ್ಷಣ ಮುಂದುವರಿಸಲು ಬಡತನ ಅಡ್ಡಿಯಾಗುವುದಿಲ್ಲ’ ಎಂದು ನಿವೃತ್ತ ಉಪನ್ಯಾಸಕ ದಯಾನಂದ ಡಿ. ಕಿದಿಯೂರು ಹೇಳಿದರು.</p>.<p>ಸೇವಾ ಮತ್ತು ಸಾಂಸ್ಕೃತಿಕ ವೇದಿಕೆ, ಉದ್ಯಾವರ ಫ್ರೆಂಡ್ಸ್ ಸರ್ಕಲ್ ಆಶ್ರಯದಲ್ಲಿ ಉದ್ಯಾವರ ಹಿಂದೂ ಶಾಲಾ ಸಭಾಂಗಣದಲ್ಲಿ ಪಿಯುಸಿ ವಿದ್ಯಾರ್ಥಿಗಳಿಗೆ ಯುಎಫ್ಸಿ ಪುಸ್ತಕ ಭಂಡಾರದಿಂದ ಪಠ್ಯ ಪುಸ್ತಕ ವಿತರಿಸಿ ಅವರು ಮಾತನಾಡಿದರು.</p>.<p>ಮಕ್ಕಳು ಮೊಬೈಲ್ನಿಂದ ಹೊರ ಬಂದು ಓದಿನತ್ತ ಗಮನ ಹರಿಸಬೇಕು. ಅಂಕ ಗಳಿಕೆಯ ಧಾವಂತಕ್ಕೆ ಬೀಳದೆ ಮಾನವೀಯತೆ ಬೆಳೆಸಿಕೊಳ್ಳಬೇಕು. ಶಿಕ್ಷಣದ ಜತೆ ಮಾನವೀಯತೆಯನ್ನು ಬೆಳೆಸಿಕೊಂಡಾಗ ಮಾತ್ರ ನಾವು ಕಲಿತ ಶಿಕ್ಷಣಕ್ಕೆ ಬೆಲೆ ಬರುತ್ತದೆ ಎಂದರು.</p>.<p>ಸಂಸ್ಥೆಯ ಗೌರವಾಧ್ಯಕ್ಷ ಉದ್ಯಾವರ ನಾಗೇಶ್ ಕುಮಾರ್ ಮಾತನಾಡಿ, ನಮಗೆ ಜ್ಞಾನ ಹಂಚುವುದು ಶಿಕ್ಷಣ ಸಂಸ್ಥೆಗಳೇ ವಿನಾ ವಾಟ್ಸ್ಆ್ಯಪ್ ಅಲ್ಲ ಎಂಬುದನ್ನು ವಿದ್ಯಾರ್ಥಿಗಳು ಅರಿತುಕೊಳ್ಳಬೇಕು ಎಂದರು.</p>.<p>ಸಂಸ್ಥೆಯ ನಿರ್ದೇಶಕರಾದ ಚಂದ್ರಾವತಿ ಭಂಡಾರಿ, ಶರತ್ ಕುಮಾರ್ ಯು. ಪದ್ಮನಾಭ ಕಾಮತ್, ಕೋಶಾಧಿಕಾರಿ ಸತೀಶ್ ಡಿ. ಸಾಲ್ಯಾನ್ ವೇದಿಕೆಯಲ್ಲಿದ್ದರು. ಅಧ್ಯಕ್ಷ ಗಿರೀಶ್ ಗುಡ್ಡೆಯಂಗಡಿ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಸುಹೇಲ್ ರಹಮತ್ತುಲ್ಲ ವಂದಿಸಿದರು.</p>.<p>ಸುಮಾರು 100 ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ವಿತರಿಸಲಾಯಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-28-572239367</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿರ್ವ: ‘ಸರ್ಕಾರದ ಕಾರ್ಯಕ್ರಮ, ದಾನಿಗಳು ಮತ್ತು ಸಂಘ ಸಂಸ್ಥೆಗಳ ನೆರವು ಹಿಂದಿಗಿಂತಲೂ ಇಂದು ಸಕಾಲದಲ್ಲಿ ದೊರೆಯುತ್ತಿರುವುದರಿಂದ ವಿದ್ಯಾರ್ಥಿಗಳಿಗೆ ಶಿಕ್ಷಣ ಮುಂದುವರಿಸಲು ಬಡತನ ಅಡ್ಡಿಯಾಗುವುದಿಲ್ಲ’ ಎಂದು ನಿವೃತ್ತ ಉಪನ್ಯಾಸಕ ದಯಾನಂದ ಡಿ. ಕಿದಿಯೂರು ಹೇಳಿದರು.</p>.<p>ಸೇವಾ ಮತ್ತು ಸಾಂಸ್ಕೃತಿಕ ವೇದಿಕೆ, ಉದ್ಯಾವರ ಫ್ರೆಂಡ್ಸ್ ಸರ್ಕಲ್ ಆಶ್ರಯದಲ್ಲಿ ಉದ್ಯಾವರ ಹಿಂದೂ ಶಾಲಾ ಸಭಾಂಗಣದಲ್ಲಿ ಪಿಯುಸಿ ವಿದ್ಯಾರ್ಥಿಗಳಿಗೆ ಯುಎಫ್ಸಿ ಪುಸ್ತಕ ಭಂಡಾರದಿಂದ ಪಠ್ಯ ಪುಸ್ತಕ ವಿತರಿಸಿ ಅವರು ಮಾತನಾಡಿದರು.</p>.<p>ಮಕ್ಕಳು ಮೊಬೈಲ್ನಿಂದ ಹೊರ ಬಂದು ಓದಿನತ್ತ ಗಮನ ಹರಿಸಬೇಕು. ಅಂಕ ಗಳಿಕೆಯ ಧಾವಂತಕ್ಕೆ ಬೀಳದೆ ಮಾನವೀಯತೆ ಬೆಳೆಸಿಕೊಳ್ಳಬೇಕು. ಶಿಕ್ಷಣದ ಜತೆ ಮಾನವೀಯತೆಯನ್ನು ಬೆಳೆಸಿಕೊಂಡಾಗ ಮಾತ್ರ ನಾವು ಕಲಿತ ಶಿಕ್ಷಣಕ್ಕೆ ಬೆಲೆ ಬರುತ್ತದೆ ಎಂದರು.</p>.<p>ಸಂಸ್ಥೆಯ ಗೌರವಾಧ್ಯಕ್ಷ ಉದ್ಯಾವರ ನಾಗೇಶ್ ಕುಮಾರ್ ಮಾತನಾಡಿ, ನಮಗೆ ಜ್ಞಾನ ಹಂಚುವುದು ಶಿಕ್ಷಣ ಸಂಸ್ಥೆಗಳೇ ವಿನಾ ವಾಟ್ಸ್ಆ್ಯಪ್ ಅಲ್ಲ ಎಂಬುದನ್ನು ವಿದ್ಯಾರ್ಥಿಗಳು ಅರಿತುಕೊಳ್ಳಬೇಕು ಎಂದರು.</p>.<p>ಸಂಸ್ಥೆಯ ನಿರ್ದೇಶಕರಾದ ಚಂದ್ರಾವತಿ ಭಂಡಾರಿ, ಶರತ್ ಕುಮಾರ್ ಯು. ಪದ್ಮನಾಭ ಕಾಮತ್, ಕೋಶಾಧಿಕಾರಿ ಸತೀಶ್ ಡಿ. ಸಾಲ್ಯಾನ್ ವೇದಿಕೆಯಲ್ಲಿದ್ದರು. ಅಧ್ಯಕ್ಷ ಗಿರೀಶ್ ಗುಡ್ಡೆಯಂಗಡಿ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಸುಹೇಲ್ ರಹಮತ್ತುಲ್ಲ ವಂದಿಸಿದರು.</p>.<p>ಸುಮಾರು 100 ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ವಿತರಿಸಲಾಯಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-28-572239367</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>